
ದೊಡ್ಡಬಳ್ಳಾಪುರ ( ವಿಜಯಮಿತ್ರ) : ಪ್ರೊಫೆಸರ್ ಬಿ ಕೃಷ್ಣಪ್ಪ ರವರು ಸ್ಥಾಪಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ(47/74/75) ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ರಾಜ್ಯ ಸಂಘಟನಾ ಸಂಚಾಲಕರಾದ ನೆಲಮಂಗಲ ಬಸವರಾಜು ನೇತೃತ್ವದಲ್ಲಿ ಸರ್ವ ಸದಸ್ಯರ ಸಭೆ ಹಾಗೂ ಕುಂದು ಕೊರತೆ ಸಭೆ ನೆಡೆಸಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಸಭೆಯ ನಂತರ ಜಿಲ್ಲಾ ಸಂಚಾಲಕರಾದ ರಾಮಮೂರ್ತಿ (ರಾಮು) ನೇರಳಘಟ್ಟ ಮಾತನಾಡಿ ಸಂಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪ್ರಬಲವಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದೆ .ದಲಿತರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ವಂದಿಸುವ ಮೂಲಕ ಸಹಕರಿಸಬೇಕಿದೆ, ಎಷ್ಟೋ ಭೂಮಿಗಳನ್ನು ದಲಿತರಿಂದ ಉಳ್ಳವರು ಮೇಲ್ಜಾತಿ ವರ್ಗದವರು ಕಬಳಿಸುತ್ತಿದ್ದಾರೆ, PTCL ಕಾಯ್ದೆ ಕೇವಲ ನಮ್ ಕಾ ವಾಸ್ತೆ ಆಗದೇ ದಲಿತರ ಭೂಮಿ ಉಳಿಸಲು ಉಪಯೋಗವಾಗಬೇಕಿದೆ ಎಂದರು.
ರಾಜ್ಯ ಸಮಿತಿಯು ಸಮಿತಿ ಆದೇಶದ ಮೇರೆಗೆ ಪ್ರತಿ ತಾಲೂಕಿನ ವ್ಯಾಪ್ತಿಗೆ ಉಪ ಸಮಿತಿಗಳ ರಚನೆ ಮಾಡಲಾಗಿದೆ ಪ್ರತಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಜವಾಬ್ದಾರಿಯನ್ನು ಸ್ಥಳೀಯ ಪದಾಧಿಕಾರಿಗಳಿಗೆ ನೀಡಲಾಗಿದೆ. ರೈತರ ಸಾಗುವಳಿ ಚೀಟಿ ವಿತರಣಾ ಸಮಸ್ಯೆ, ವಸತಿ ಸಮಸ್ಯೆ, ದಲಿತರ ಮೇಲೆ ಹಲ್ಲೆ ಪ್ರಕರಣಗಳು ಕುರಿತಂತೆ ನಮಗೆ ದೂರು ಬಂದಿದ್ದು ಈ ಕುರಿತು ತಾಲ್ಲೂಕು ಹಾಗೂ ಜಿಲ್ಲಾ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗುವುದು ಸೂಕ್ತ ಕ್ರಮಕೊಳ್ಳದ ಪಕ್ಷದಲ್ಲಿ ಸಂಘಟನೆವತಿಯಿಂದ ಉಗ್ರ ಹೊರಟ ರೂಪಿಸಲಾಗುವುದು ಎಂದರು
ರಾಜ್ಯ ಸಮಿತಿ ಸದಸ್ಯ ನೆಲಮಂಗಲ ಬಸವರಾಜು ಮಾತನಾಡಿ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಅವರ ಆದೇಶದ ಮೇರೆಗೆ ಇಂದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಮಿತಿಯ ಸರ್ವ ಸದಸ್ಯರ ಸಭೆ ನೆಡೆಸಲಾಗಿದೆ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಹಾಗೂ ತಾಲ್ಲೂಕಿನ ಹಲವು ಸಮಸ್ಯೆ ಗಳನ್ನು ಅಲಿಸಿದ್ದೇವೆ, ಪ್ರಮುಖವಾಗಿ ಪ ದಲಿತರ ಭೂಮಿ ಕಬಳಿಕೆ ಆರೋಪ ಕೇಳಿಬಂದಿದ್ದು ಈ ಕುರಿತು ಅಧಿಕಾರಿಗಳ ಗಮನ ಸೆಳೆಯುವ ಮೂಲಕಪಿ ಟಿ ಸಿ ಎಲ್ ಕಾಯ್ದೆ ಅಡಿಯಲ್ಲಿ ದಲಿತರ ಭೂಮಿ ಸಂರಕ್ಷಣೆಗೆ ಮುಂದಾಗಲಿದ್ದೇವೆ ಎಂದರು
ಸಭೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರು ಬಸವರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕರಾದ ನೇರಳೆಘಟ್ಟ ರಾಮಮೂರ್ತಿ (ರಾಮು), ಬೆಂಗಳೂರು ನಗರ ಜಿಲ್ಲಾ ಸಂಚಾಲಕರು ಎಂ.ಶರವಣ, ರಾಮನಗರ ಜಿಲ್ಲಾ ಹಿರಿಯ ಹೋರಾಟಗಾರು ಜಯಣ್ಣ, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕರು ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲೂಕು ಸಂಚಾಲಕರು ಮೈಲಾರಪ್ಪ, ತಾಲೂಕು ಗೌರವ ಸಂಚಾಲಕರು ಜೇಮ್ಸ್ ರಾಜಣ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಸಂಘಟನ ಸಂಚಾಲಕರು ಜಿ.ನರಸಿಂಹಮೂರ್ತಿ,ದೊಡ್ಡಬಳ್ಳಾಪುರ ತಾಲ್ಲೂಕು ಸಂಘಟನಾ ಸಂಚಾಲಕ ಕುಕ್ಕನಹಳ್ಳಿ ನರಸಿಂಹಮೂರ್ತಿ, ಮುಖಂಡರಾದ ಕೃಷ್ಣಪ್ಪ, ಮಾರಪ್ಪ, ರಾಜಶೇಖರ್, ನರಸಿಂಹಯ್ಯ, ಮಹೇಂದ್ರ ಮುತ್ತದವರು ಇದ್ದರು.