ದೊಡ್ಡಬಳ್ಳಾಪುರ : ತಾಲ್ಲೂಕು ಆಡಳಿತ ಕಛೇರಿಗಳಾದ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ದಳ್ಳಾಳಿಗಳ ಹಾವಳಿ ಹೆಚ್ಚಾಗಿದ್ದು, ತಮ್ಮ ಕೆಲಸಗಳ ನಿಮಿತ್ಯ ತಾಲ್ಲೂಕು ಕಛೇರಿಗೆ ಬರುವ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸಿ ವಂಚಿಸಿ ಹಣ ವಸೂಲಿ ಮಾಡುತ್ತಿದ್ದಾರೆ. ತಾಲ್ಲೂಕು ಕಛೇರಿಯಲ್ಲಿ ಲಂಚವಿಲ್ಲದೆ ಯಾವ ಸರ್ಕಾರಿ ಕೆಲಸಗಳು ನಡೆಯುವುದಿಲ್ಲ ಎಂದು ತಾಲ್ಲೂಕಿನ ನಾಗರೀಕರು ನಮ್ಮ ಸಂಘಟನೆಗೆ ನೂರಾರು ದೂರುಗಳುನಮ್ಮನೀಡಿದ್ದಾರೆ ಎಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎ. ನಂಜಪ್ಪ ಆರೋಪಿಸಿದರು.
ಪ್ರತಿಭಟನೆ ಕುರಿತು ಸಂಘಟನೆಯ ಪ್ರಮುಖರು ಉಪವಿಭಾಗ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು

ಇಂದು ನಗರದ ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ತಾಲ್ಲೂಕು ಆಡಳಿತ ಕಛೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಸಾಮಾನ್ಯ ಜನರ ಕೈಗೆ ಸಿಗದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿಯುಂಟಾಗಿದೆ ಎಂದು ಆರೋಪಿಸಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ನೆಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ತಾಲ್ಲೂಕು ಸಾಸಲು ಹೋಬಳಿ ಹಳೇಕೋಟೆ ಗ್ರಾಮದ ಸುತ್ತಮುತ್ತ ಪ್ರದೇಶದಲ್ಲಿ ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ ಜಲ್ಲಿ ಕ್ಲಸ್ಟರ್ ನಿರ್ಮಿಸಿ ದಿನನಿತ್ಯ ಬಾರಿ ಗಾತ್ರದ ಟಿಪ್ಪರ್ ವಾಹನಗಳ ಸಂಚರಿಸುವ ಮುಖೇನ ಸಾರ್ವಜನಿಕರು ದಿನನಿತ್ಯ ಸಂಚರಿಸುವ ರಸ್ತೆಯು ಹದಗೆಟ್ಟು ಅಪಘಾತ ಅನಾಹುತಗಳು ಸಂಭವಿಸುತ್ತಿವೆ. ಅಲ್ಲದೆ ಇದರಿಂದ ಗ್ರಾಮದ ಸುತ್ತಮುತ್ತಲ ರೈತರಿಗೂ ಪರಿಸರಕ್ಕೂ ತುಂಬಾ ತೊಂದರೆಯಾಗುತ್ತಿದ್ದು, ಈ ಕುರಿತು ಉಪವಿಭಾಗಾಧಿಕಾರಿಗಳು ಹಾಗೂ ಮಾನ್ಯ ತಹಶೀಲ್ದಾರ್ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು
ಪ್ರತಿಭಟನೆಯಲ್ಲಿ ರಾಜ್ಯ ಮುಖಂಡರಾದ ಬಿ.ನಯಜ್ ಖಾನ್, ಸೋಮರಾಜು, ಗಂಗರಾಜಪ್ಪ, ಜಿಲ್ಲಾ ಪ್ರಮುಖರಾದ ಮಂಜುನಾಥ್, ಪ್ರವೀಣ್ ಕುಮಾರ್, ಫಿರ್ ಪಾಷಾ, ನಾಗರಾಧ್ಯಕ್ಷ ಚಂದ್ರ,ನಾಗಮಣಿ, ಮುಖಂಡರಾದ ಚಂದ್ರಶೇಖರಯ್ಯಾ, ಮಹಿಳಾ ಮುಖಂಡರಾದ ಕುಮುದಾ, ಶಶಿಕಲಾ, ರಾಗಿಣಿ, ನಗರತ್ನಮ್ಮ, ಹಾಜರಿದ್ದರು.
