“2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಅರ್ಹ ಫಲಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ನೇರವಾಗಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ಗಳಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನಾಂಕವಾಗಿರುತ್ತದೆ.
*ಪ.ಪಂಗಡ ಅಲೆಮಾರಿ ಫಲಫೇಕ್ಷಿಗಳ ಯೋಜನೆಗಳ ವಿವರ*
1. ಸ್ವಯಂ ಉದ್ಯೋಗ (ನೇರ ಸಾಲ) ಯೋಜನೆ (ಘಟಕ ವೆಚ್ಚ ರೂ.1.00 ಲಕ್ಷ)
2. ಉಧ್ಯಮ ಶೀಲತಾ ಯೋಜನೆ (ಘಟಕ ವೆಚ್ಚ ರೂ.2.00 ಲಕ್ಷ)
3. ಉಧ್ಯಮ ಶೀಲತಾ ಯೋಜನೆ (ಸರಕು ಸಾಗಾಣಿಕೆ/ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ) (ಘಟಕ ವೆಚ್ಚ ರೂ.4.00 ಲಕ್ಷ)
4. ಭೂ ಒಡೆತನ ಯೋಜನೆ
5. ಮೈಕ್ರೋ ಕ್ರೆಡಿಟ್ ಯೋಜನೆ
6. ಗಂಗಾ ಕಲ್ಯಾಣ ಯೋಜನೆ
2023-24 ಮತ್ತು 2024-25ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವಂತಿಲ್ಲ.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಬೆಂ.ಗ್ರಾ.ಜಿಲ್ಲೆ ದೂ.ಸಂ- 080-29787448. ಸಹಾಯಕ ನಿರ್ದೇಶಕರ ಕಚೇರಿ,ದೇವನಹಳ್ಳಿ ದೂ.ಸಂ- 080-27681784. ದೊಡ್ಡಬಳ್ಳಾಪುರ ದೂ.ಸಂ- 080-27623681. ಹೊಸಕೋಟೆ ದೂ.ಸಂ- 080-27931528. ನೆಲಮಂಗಲ ದೂ.ಸಂ- 080- 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
