ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ವಿನೂತನವಾಗಿ ಆಚರಣೆ ಮಾಡಿದರು. ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಜೊತೆಗೆ ಸಂಸ್ಥೆಯ ಎಲ್ಲಾ ಉಪನ್ಯಾಸಕರುಗಳಿಗೆ ಶಿಕ್ಷಕರಿಗೆ ಗಿಡಗಳನ್ನು ನೀಡುವ ಮೂಲಕ ಆಚರಿಸಲಾಯಿತು.

ಈ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಗೌರವಕಾರ್ಯದರ್ಶಿಗಳಾದ ವಿಶ್ವಾಸ್ ಹನುಮಂತೇಗೌಡ ರವರು ಮಾತನಾಡಿ ವಿದ್ಯಾರ್ಥಿಗಳು ಗುರು ಹಿರಿಯರ ಹಾಗೂ ಗುರುಗಳಿಗೆ ಗೌರವವನ್ನು ಸಲ್ಲಿಸಿದಾಗ ಮಾತ್ರ ಶಿಕ್ಷಕರ ದಿನಾಚರಣೆಗೆ ಅರ್ಥ ಬರುತ್ತದೆ ಹಾಗೂ ಪರಿಸರವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿರುತ್ತದೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿರುವುದು ವಿಷಾದದ ಸಂಗತಿ ಎಂದು ಹೇಳಿದರು.
ಪ್ರಾಂಶುಪಾಲ ಎಂ ಸಿ ಮಂಜುನಾಥ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಉತ್ತಮ ನಡವಳಿಕೆ ರೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
