ನವರಾತ್ರಿ ಹಬ್ಬದ ಪ್ರಯುಕ್ತ ನಗರ ದೇವತೆ ಮುತ್ಯಾಲಮ್ಮ ದೇವಿಗೆ ಶ್ರೀ ಮುತ್ಯಾಲಮ್ಮ ಸೇವಾದತ್ತಿ ಟ್ರಸ್ಟ್ ವತಿಯಿಂದ ವಿಶೇಷ ಅಲಂಕಾರ ಮತ್ತು ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಮುತ್ಯಾಲಮ್ಮ ಸೇವಾದತ್ತಿ ಟ್ರಸ್ಟ್ ನ ಕಾರ್ಯಾಧ್ಯಕ್ಷ ಡಿ ಎನ್ ತಿಮ್ಮರಾಜು ಮಾತನಾಡಿ ದೊಡ್ಡ ನಂಜುಂಡಪ್ಪ ಹಾಗೂ ಕುಟುಂಬಸ್ಥರ ವತಿಯಿಂದ ಈ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ದೇವಿಗೆ ವಿಶೇಷವಾಗಿ ಅರಿಶಿನ ಕುಂಕುಮದಿಂದ ಅಲಂಕಾರ ಮಾಡಿದ್ದು, ದೇವಾಲಯಕ್ಕೆ ಬರುವ ನೂರಾರು ಭಕ್ತಾದಿಗಳು ತಾಯಿ ದರ್ಶನ ಪಡೆದು ಕಣ್ತುಂಬಿಕೊಳ್ಳುತ್ತಿದ್ದಾರೆ ಎಂದರು.
ಸಾಮಾನ್ಯವಾಗಿ ಪ್ರತಿನಿತ್ಯ ತಾಲೂಕು ಜಿಲ್ಲೆ ಅಷ್ಟೇ ಅಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ದೇವಾಲಯಕ್ಕೆ ಭಕ್ತಾದಿಗಳ ಆಗಮವಿರುತ್ತದೆ. ನವರಾತ್ರಿ ಪ್ರಯುಕ್ತ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದ್ದು ಮುತ್ಯಾಲಮ್ಮ ದೇವಿಗೆ ಪ್ರತಿನಿತ್ಯ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಶ್ರೀ ಮುತ್ಯಾಲಮ್ಮ ಸೇವಾದತ್ತಿ ಟ್ರಸ್ಟ್ ವತಿಯಿಂದ ಆಯೋಜನೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಟ್ರಸ್ಟಿನ ಕಾರ್ಯಧ್ಯಕ್ಷರಾದ ತಿಮ್ಮರಾಜು , ಟ್ರಸ್ಟ್ ಅಧ್ಯಕ್ಷ ಹನುಮಂತು, ಉಪಾಧ್ಯಕ್ಷ ಕೆ ನಾಗೇಶ್, ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಖಜಾಂಚಿ ಜೆ ವೈ ಮಲ್ಲಪ್ಪ,ಕಾರ್ಯದರ್ಶಿ ಪ್ರಭಾಕರ್, ಸಂಘಟನಾ ಕಾರ್ಯದರ್ಶಿ ಜೆ ಕುಮಾರ್, ದರ್ಗಾಜೋಗಹಳ್ಳಿ ಮಲ್ಲೇಶ್ ಸೇರಿದಂತೆ ಹಲವರು ಹಾಜರಿದ್ದರು.
