ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾ ಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭ ಅ. 11(ನಾಳೆ )ರಂದು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕ ಉಮರಬ್ಬ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜವನ್ನು ದುಶ್ಚಟಮುಕ್ತವಾಗಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನಿಂದ ಮದ್ಯ ವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮಾಜದ ಗಣ್ಯರ ಸಹಭಾಗತ್ವದಲ್ಲಿ ರಾಜ್ಯಮಟ್ಟದ ಜನ ಜಾಗೃತಿ ವೇದಿಕೆ ಸ್ಥಾಪಿಸಿ `ಗಣ್ಯರ ಸಹಭಾಗಿತ್ವದಲ್ಲಿ ದಶ್ಚಟಗಳ ಅನಾಹುತಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಅ.2 ಗಾಂಧಿ ಜಯಂತಿ ಅಂಗವಾಗಿ ಮದ್ಯ ವಿರೋಧಿ ಜಾಥಾ, ಜನಜಾಗೃತಿ ಸಮಾವೇಶ ಏರ್ಪಡಿಸಲಾಗುತ್ತಿದೆ. ಇದುವರೆಗೆ ಯೋಜನೆಯ ವತಿಯಿಂದ 1985ಕ್ಕೂ ಹೆಚ್ಚು ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಲಾಗಿದೆ ಇದರಲ್ಲಿ 1.3 ಲಕ್ಷ ಶಿಬಿರಾರ್ಥಿಗಳು ಮದ್ಯ ವರ್ಜಿಸಿದ್ದಾರೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ 36 ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿ 2082 ಶಿಬಿರಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯಲ್ಲಿ 719 ಸ್ವಾಸ್ತ್ರ ಸಂಕಲ್ಪ ಕಾರ್ಯಕ್ರಮ ಹಾಗೂ ದುಶ್ಚಟ ವಿವಿಧ ಜಾಗೃತಿ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ 50 ಗ್ರಾಮಗಳನ್ನು ಪಾನಮುಕ್ತ ಗ್ರಾಮವನ್ನಾಗಿ ಮಾಡಿದ್ದು, ಮದ್ಯಮುಕ್ತ ರಾಜ್ಯವನ್ನಾಗಿಸಲು ಸರ್ಕಾರ ಕ್ರಮ ವಹಿಸಬೇಕು. ಶಾಲಾ ಕಾಲೇಜುಗಳ ಬಳಿ ಕಡ್ಡಾಯವಾಗಿ ಮದ್ಯದಂಗಡಿಗೆ ಪರವಾನಗಿ ನೀಡಬಾರದು ಎಂದು ಒತ್ತಾಯಿಸಲಾಗುತ್ತಿದೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಎಚ್.ಎಸ್.ನಾಗೇಶ್ ಮಾತನಾಡಿ, ಅ.11 ರಂದು ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭ ನಡೆಯಲಿದೆ.ಅ 11ರ ಬೆಳಗ್ಗೆ 9 ಗಂಟೆಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದ ಬಳಿಯಿಂದ ಜಾಗೃತಿ ಜಾಥಾ ನಡೆಯಲಿದೆ. ಎಂದರು.
ಕಾರ್ಯಕ್ರಮದಲ್ಲಿ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ, ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಗಣ್ಯರಾದ ಕೆ.ಎಂ.ಹನುಮಂತರಾಯಪ್ಪ ಡಿವೈ ಎಸ್ಪಿ ರವಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್, ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಕೆಂಪಣ್ಣ ಮುಖಂಡರಾದ ಟಿ.ಜಿ.ಮಂಜುನಾಥ್, ರವಿ, ತಾಲೂಕು ಯೋಜನಾಧಿಕಾರಿ ದಿನೇಶ್, ಮೇಲ್ವಿಚಾರಕ ಲೋಹಿತ್ ಹಾಜರಿದ್ದರು.
