ದೊಡ್ಡಬಳ್ಳಾಪುರ : ಹೊಸ ವರ್ಷ ಹಾಗೂ ಭೀಮಾ ಕೋರೆಗಾಂವ್ 208 ನೇ ವರ್ಷದ ವಿಜಯೋತ್ಸವದ ಪ್ರಯುಕ್ತ ಅಂಬೇಡ್ಕರ್ ಸೇವಾ ಸಮಿತಿ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ.ಎಂ.ಸಂದೇಶ್ ರವರ ನೇತೃತ್ವದ್ದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್, ಬ್ಯಾಗ್, ಪೆನ್ನು ಒಳಗೊಂಡತೆ ಕಲಿಕಾ ಪರಿಕರಗಳನ್ನು ವಿತರಣೆ ಮಾಡಿದ್ದೇವೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ ಹೊಸ ವರ್ಷ ಹಾಗೂ ಭೀಮಾ ಕೋರೆಗಾಂವ್ 208 ನೇ ವರ್ಷದ ವಿಜಯೋತ್ಸವದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ನಿತ್ಯ ನಿರಂತರ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಸದಾ ಶೋಷಿತ ದಲಿತ ಹಾಗೂ ಹಿಂದುಳಿದ ಸಮುದಾಯಗಳ ಧ್ವನಿಯಾಗಿ ಡಾ. ಕೆ ಎಂ ಸಂದೇಶ್ ನೇತೃತ್ವದಲ್ಲಿ ಶ್ರಮಿಸುತ್ತಿದೆ ಎಂದರು.
ಈ ವೇಳೆ ಕೋಡಿಗೆಹಳ್ಳಿ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟೇಶ್, ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ,ಸಂಘಟನೆಯ ತಾಲೂಕು ಉಪಾಧ್ಯಕ್ಷ ನವೀನ್, ಕಾರ್ಯದರ್ಶಿ ಗಜೇಂದ್ರ, ಸದಸ್ಯರಾದ ಪಾಪಣ್ಣ, ಸ್ವಾಮಿ, ಮಂಜುನಾಥ್ ಮುಂತಾದವರು ಹಾಜರಿದ್ದರು.
