ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಛಲವಾದಿ ಸಮುದಾಯ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಸರಕಾರದ ಗಮನಕ್ಕೆ ತರುವ ಮೂಲಕ ಅದನ್ನು ಪರಿಹರಿಸಿ, ಸಮುದಾಯದ ಅಭಿವೃದ್ದಿಗೆ ಕೆಲಸ ಮಾಡೋಣ ಎಂದು ಛಲವಾದಿ ಮಹಾಸಭಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.
ನಗರದ ಪ್ರವಾಸಿಮಂದಿರಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು ರಾಜ್ಯದಲ್ಲಿ ಬೇರೆ ಅನೇಕ ಸಮುದಾಯಗಳ ಅಭಿವೃದ್ದಿಗಾಗಿ ನಿಗಮ ಮಂಡಳಿಗಳಿವೆ. ಆದರೆ ನಮ್ಮ ಸಮುದಾಯಕ್ಕಿಲ್ಲ. ನಮ್ಮಲ್ಲಿ ಭಿನ್ನಾಭಿಪ್ರಾಯ ಇದ್ದರೂ ಕೂಡ ಎಲ್ಲರೂ ಒಟ್ಟಿಗೆ ಇರಬೇಕು. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ೪ ತಾಲೂಕುಗಳಿಂದ ಅರ್ಜಿ ಬಂದಿತ್ತು.ನನ್ನನ್ನ ಆಯ್ಕೆ ಮಾಡಿದ್ದಾಗಿ ಧನ್ಯವಾದಗಳು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸಮಾಡಲಾಗುತ್ತದೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಸಮುದಾಯ ಎದುರಿಸಲಾಗುತ್ತಿದೆ. ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ ಇದೆ. ನಮ್ಮಲ್ಲಿ ಮುಖ್ಯಮಂತ್ರಿ ಆಗುವ ಸಾಮರ್ಥ್ಯ ವಿದೆ. ಆದರೂ ರಾಜಕೀಯ ,ಶೈಕ್ಷಣಿಕ,ಸಾಮಾಜಿಕವಾಗಿ ಹಿನ್ನಡೆಯಾಗಿದೆ. ಸಮುದಾಯದ ಅಭಿವೃದ್ದಿಗಾಗಿ ಎಲ್ಲರೂ ಶ್ರಮಿಸೋಣ ಎಂದರು.
ಸೊಣ್ಣಪ್ಪನಹಳ್ಳಿ ರಮೇಶ್ ಮಾತನಾಡಿ ಈ ಹಿಂದೆ ನಮ್ಮಲ್ಲೇ ಇದ್ದ ಕೆಲ ಗೊಂದಲಗಳಿಂದ ನೂತನ ಸಂಘಟನೆ ಸ್ಥಾಪಿಸಿದ್ದೆವು ಆದರೆ ಈಗ ನೂತನ ಜಿಲ್ಲಾಧ್ಯಕ್ಷರು ಅವರೊಂದಿಗೆ ನಾವಿದ್ದೇವೆ ನಮ್ಮಲ್ಲಿ ಯಾವುದೇ ಒಡಕು ಇಲ್ಲ ಸಮುದಾಯದ ಅಭಿವೃದ್ಧಿಗಾಗಿ ನಾವು ಸದಾ ದುಡಿಯುತ್ತೇವೆ ರಾಜ್ಯ ಸಮಿತಿಯ ಈ ನಿರ್ಣಯಕ್ಕೆ ನಮ್ಮೆಲ್ಲರ ಒಪ್ಪಿಗೆ ಇದೆ ಎಂದರು.
ಸಮುದಾಯದ ಮುಖಂಡರಾದ ಗೂಳ್ಯ ಹನುಮಯ್ಯ ಮಾತನಾಡಿ ನಮ್ಮ ನಮ್ಮಲ್ಲಿ ಇದ್ದ ಕೆಲ ಗೊಂದಲಗಳನ್ನು ರಾಜ್ಯ ಸಮಿತಿ ಹಾಗೂ ನೂತನ ಜಿಲ್ಲಾಧ್ಯಕ್ಷರು ಸರಿಪಡಿಸಿದ್ದಾರೆ . ನಮ್ಮ ಹೋರಾಟವೂ ಕೂಡ ಸಮುದಾಯದ ಏಳಿಗೆಗಾಗಿ ನಮ್ಮನೆಲ್ಲ ವಿಶ್ವಾಸಕ್ಕೆ ಪಡೆದು ಛಲವಾದಿ ಮಹಾಸಭಾ ಸಂಘಟನೆಯನ್ನು ಮುಂದುವರಿಸುವ ಉತ್ತಮ ನಾಯಕತ್ವವುಳ್ಳ ನರೇಶ್ ರವರನ್ನು ರಾಜ್ಯ ಸಮಿತಿಯು ನಮ್ಮ ಜಿಲ್ಲೆಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಅವರ ನಿರ್ಣಾಯವನ್ನು ನಾವು ಸ್ವಾಗತಿಸುತ್ತೇವೆ ಎಂದರು.
ಈ ವೇಳೆಯಲ್ಲಿ ಮುಖಂಡರಾದ ಗೂಳ್ಯ ಹನುಮಣ್ಣ, ರಾಜಶೇಖರ್, ನಾರಾಯಣ, ಮರಿಯಪ್ಪಣ್ಣ, ತಿಮ್ಮರಾಯಪ್ಪ, ಮದ್ದೂರಣ್ಣ, ಸುರೇಶ್ ನಾರಾಯಣ, ಅಜಯ್, ರಾಮಣ್ಣ ಸೇರಿದಂತೆ ಅನೇಕರು ಹಾಜರಿದ್ದರು.
