ದೊಡ್ಡಬಳ್ಳಾಪುರ : 77ನೇ ಗಣರಾಜ್ಯೋತ್ಸವ ದಿನಾಚರಣೆ : ಪತ್ರಕರ್ತರು, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

ದೊಡ್ಡಬಳ್ಳಾಪುರ : “77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.   ಇದಕ್ಕೂ ಮುನ್ನ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.   ನಂತರ ‌ಪತ್ರಕರ್ತ ಗುರುಪ್ರಸಾದ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ […]

Continue Reading

ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ : ತ್ರಿವರ್ಣ ಬಾವುಟದಂತೆ ಕಂಗೊಳಿಸಿದ ಆಸ್ಪತ್ರೆ 

  ದೊಡ್ಡಬಳ್ಳಾಪುರ : ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಕಂಗೊಳಿಸುತ್ತಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಜನವರಿ 26ರ ಗಣರಾಜ್ಯೋತ್ಸವದ ಆಚರಣೆ ಸಲುವಾಗಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡುವ ಮೂಲಕ ಸಂಭ್ರಮಿಸಿದೆ. ಹೌದು ತ್ರಿವರ್ಣ ಧ್ವಜವನ್ನು ಪ್ರತಿನಿಧಿಸುವ ಕೇಸರಿ ಬಿಳಿ ಹಸಿರು ಬಣ್ಣಗಳ ವಿದ್ಯುತ್ ದೀಪಗಳನ್ನು ಬಳಸಿ ಆಸ್ಪತ್ರೆಯನ್ನು ವಿಶೇಷವಾಗಿ ಕಾಣುವಂತೆ ಮಾಡಲಾಗಿದೆ. ಸಾರ್ವಜನಿಕ ಆಸ್ಪತ್ರೆ ಸುಂದರವಾಗಿ ಕಾಣುತ್ತಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.    

Continue Reading

ಸ್ಕೈ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಂಥನ-2026 ಕಾರ್ಯಕ್ರಮ : ಪೋಷಕರ ಗಮನ ಸೆಳೆದ ಪುಟಾಣಿಗಳು 

ದೊಡ್ಡಬಳ್ಳಾಪುರ : ಮಕ್ಕಳ ಶೈಕ್ಷಣಿಕ ಸಾಧನೆ ಜೊತೆಗೆ ಕ್ರೀಡೆ ಹಾಗೂ ಸಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯವಾಗಿರುತ್ತದೆ . ಈ ನಿಟ್ಟಿನಲ್ಲಿ ಪ್ರತಿ ವರ್ಷ ನಡೆಸುವ ವಾರ್ಷಿಕೋತ್ಸವ ಸಮಾರಂಭವು ವಿಶೇಷವಾಗಿರುತ್ತದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸ್ಕೈ ಎಜುಕೇಷನಲ್ ಟ್ರಸ್ಟ್ ಸದಾ ಶ್ರಮಿಸುತ್ತದೆ ಎಂದು ಲೋಕನಾಥ್ ಏಸ್ ಕೃಷ್ಣ ತಿಳಿಸಿದರು. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಸರ್ ಎಂ ವಿಶ್ವೇಶ್ವರಯ್ಯ ಆಂಗ್ಲ ಶಾಲೆ ಹಾಗೂ ಐ ಪ್ಲೇ ಐ ಲರ್ನ್ ಫೌಂಡೇಶನ್ ಶಾಲೆಯ ವಾರ್ಷಿಕೋತ್ಸವ(ಮಂಥನ-2026) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಮಕ್ಕಳಿಗೆ […]

Continue Reading

ಶುದ್ಧ ನೀರಿಗಾಗಿ ಗ್ರಾಮಸ್ಥರ ಹೋರಾಟ : ರೈತರ ಪ್ರತಿಭಟನೆಗೆ ಕರವೇ ಸಾಥ್ | ಹೋರಾಟದಲ್ಲಿ ನಾವು ಭಾಗವಹಿಸುತ್ತೇವೆ – ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ  

ದೊಡ್ಡಬಳ್ಳಾಪುರ : ತಾಲ್ಲೂಕಿನ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕೆರೆಗೆ ಸಂಸ್ಕರಿಸದ ಕಲುಷಿತ ನೀರನ್ನು ಹರಿಸದಂತೆ ಅಗ್ರಹಿಸಿ ಅರ್ಕಾವತಿ ನದಿ ಪಾತ್ರ ಕೆರೆಗಳ ಹೋರಾಟ ವೇದಿಕೆ ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ ರಕ್ಷಣಾ ವೇದಿಕೆ(ಟಿ ಎ ನಾರಾಯಗೌಡರ ವೇದಿಕೆ) ಬೆಂಬಲ ಸೂಚಿಸಿದೆ. ಹೌದು ಜಲ ಸಂಪನ್ಮೂಲ ಉಳಿಸುವಂತೆ ಆಗ್ರಹಿಸಿ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ರೈತರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು […]

Continue Reading

ದರ್ಗಾಜೋಗಿಹಳ್ಳಿಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ : ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅಂಗನವಾಡಿ ಪೂರಕ: ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ : ಮಕ್ಕಳ ಬೌದ್ಧಿಕ ಬೆಳವಣಿಗೆ ಪಡೆದುಕೊಳ್ಳಲು ಪೂರ್ವ ಪ್ರಾಥಮಿಕ ಶಿಕ್ಷಣದ ಪಾತ್ರ ಪ್ರಮುಖವಾಗಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ ಕಾಲದಲ್ಲಿ ಅಂಗನವಾಡಿಗಳ ಸ್ಥಾಪನೆ ಆರಂಭಿಸಿ, ಪೌಷ್ಟಿಕ ಆಹಾರದ ಜತೆಗೆ ಉಚಿತವಾಗಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಲಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ  ಹೇಳಿದರು.   ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಾಜೋಗಿಹಳ್ಳಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 23 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ಕಟ್ಟಡವನ್ನು […]

Continue Reading

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಾಜಘಟ್ಟ ಗ್ರಾಮದ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ

  ದೊಡ್ಡಬಳ್ಳಾಪುರ : ಕೆರೆ ಹೂಳೆತ್ತುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಪ್ರಾಣಿ ಹಾಗೂ ಸಸ್ಯ ಸಂಕುಲಕ್ಕೆ ಜಲ ಮೂಲ ಅತೀ ಅಮೂಲ್ಯವಾದದ್ದು ಅದನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮಾರಬ್ಬ ತಿಳಿಸಿದರು.   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ಹೂಳೆತ್ತುವ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು […]

Continue Reading

ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಹಿಂದೂ ಸಮಾಜ್ಯೋತ್ಸವ : ಬೃಹತ್ ಶೋಭಯಾತ್ರೆಗೆ ಸಕಲ ಸಿದ್ಧತೆ 

ದೊಡ್ಡಬಳ್ಳಾಪುರ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಶತಮಾನೋತ್ಸವದ ಸುಸಂದರ್ಭದಲ್ಲಿ  ಹಿಂದೂ ಸಮಾಜ್ಯೋತ್ಸವ ಸಮಿತಿ, ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜ.28 ಮತ್ತು ಜ. 29 ತಾರೀಕಿನಂದು ಹಿಂದೂ ಸಮಾಜ್ಯೋತ್ಸವ ಆಯೋಜನೆ ಮಾಡಲಾಗಿದೆ ಎಂದು ಹಿಂದೂ ಮುಖಂಡರಾದ ಹನುಮಂತರಾಯಪ್ಪ ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು […]

Continue Reading

ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ : ಬೈಕ್‍ ಸವಾರರಿಗೆ 35 ಹೆಲ್ಮೆಟ್ ವಿತರಣೆ

ಚಿಕ್ಕಮಗಳೂರು ಜಿಲ್ಲೆ : ನರಸಿಂಹರಾಜಪುರ ತಾಲ್ಲೂಕಿನ ಎನ್ ಆರ್ (NR)ಪುರ ಪೊಲೀಸ್ ಠಾಣೆ ಮುಂಭಾಗ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾರಲಾಯಿತು.   ಸಿ ಜೆ (CJ) & ಜೆ ಎಂ ಎಫ್ ಸಿ (JMFC) ನ್ಯಾಯಾಧೀಶರಾದ ರಘುನಾಥ್ ಗೌಡ ಹಾಗೂ ಜೀತು ಆರ್.ಎಸ್ ರವರ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಯಿತು ಈ ವೇಳೆ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು ಈ ವೇಳೆ ಮಾತನಾಡಿದ ಅವರು […]

Continue Reading

ಒಳ ಮೀಸಲಾತಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಮಾದರ ಚನ್ನಯ್ಯ ಮಹಾಸಭಾ ಮುಖಂಡರ ಅಗ್ರಹ   

ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತಂತೆ ರಾಜ್ಯಪಾಲರಿಗೆ ಸಲ್ಲಿಸಿದ್ದ ವರದಿಯನ್ನು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಾಸ್ ಕಳಿಸಿದ್ದಾರೆ. ಈಗಲಾದರೂ ವರದಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ ಜಾರಿ ಮಾಡಿ ಎಂದು ಮಾದರ ಚನ್ನಯ್ಯ ಮಹಾಸಭಾ ಮುಖಂಡ ಬಚ್ಚಹಳ್ಳಿ ನಾಗರಾಜು ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ ಮಾದರ ಚನ್ನಯ್ಯ ಮಹಾಸಭಾದಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸತತವಾಗಿ 30 ವರ್ಷಗಳ ಹೋರಾಟದ ನಂತರ ಒಳ ಮೀಸಲಾತಿ ದೊರೆಯುತ್ತಿದ್ದು, […]

Continue Reading

ಶಾಲಾ- ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಮತ್ತು ಜಿಲ್ಲಾ ಕಣ್ಗಾವಲು ಸಮಿತಿ ಮತ್ತು ಜಿಲ್ಲಾ ಕಾರ್ಯಕಾರಿ ಸಮಿತಿಯ ತ್ರೈಮಾಸಿಕ ಪ್ರಗತಿ […]

Continue Reading