ಮಹಿಳೆಯ ಜೀವ ರಕ್ಷಿಸಿದ ಪೊಲೀಸರು : ಕಾರ್ಯಕ್ಷಮತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳಿಂದ ಅಭಿನಂದನೆ.

ಮನೆಯ ಬಾಗಿಲು ಹಾಕಿಕೊಂಡು ಮಹಿಳೆಯೋರ್ವರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗುತ್ತಿದ್ದ ವೇಳೆ ಸಿನಿಮೀಯ ಶೈಲಿಯಲ್ಲಿ ಇ.ಆರ್.ಎಸ್.ಎಸ್-112 ಸಿಬ್ಬಂದಿಗಳಾದ ಶಿವರಾಜು ಮತ್ತು ಅಭಿಷೇಕ್ ಬಾಗಿಲು ಒಡೆದು ನೇಣಿನ ಕುಣಿಕೆಯಿಂದ ಇಳಿಸಿ ಮಹಿಳೆಯ ಜೀವ ಉಳಿಸಿರುವ ಘಟನೆ ಜನವರಿ ೨೩ ರಂದು ನಡೆದಿದೆ. ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತುರ್ತುಪರಿಸ್ಥಿತಿಯಲ್ಲಿ ಕರ್ತವ್ಯಪ್ರಜ್ಞೆ ಮೆರೆದ ಸಿಬ್ಬಂದಿಗಳನ್ನು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಭಿನಂದಿಸಿ ಪ್ರಶಂಸಾ ಪತ್ರವನ್ನು ಬೆಂಗಳೂರು ಕಚೇರಿಯಲ್ಲಿ ಬುಧವಾರ ವಿತರಣೆ ಮಾಡಿದ್ದಾರೆ.   ಘಟನೆಯ ವಿವರ:   ಜನವರಿ ೨೩ ರಂದು ಮೆಳೆಕೋಟೆ […]

Continue Reading

ಪಿಜಿ ಮಾಡುತ್ತೇವೆ ಎಂದು ಹೇಳಿ ಬಾರ್ ಮಾಡುತ್ತಿದ್ದಾರೆ – ಸ್ಥಳೀಯರ ಆಕ್ರೋಶ

ದೊಡ್ಡಬಳ್ಳಾಪುರ :ಮದ್ಯದಂಗಡಿ ಪ್ರಾರಂಭಿಸಲಾಗುತ್ತಿರುವುದನ್ನು ಖಂಡಿಸಿ, ನಗರದ 31ನೇ ವಾರ್ಡ್‌ನ ನಿವಾಸಿಗಳು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಕರೇನಹಳ್ಳಿ-೨ ವಾರ್ಡ್ ನ ರಾಜೇಶ್ವರಿ ಚಿತ್ರಮಂದಿರದ ಸಮೀಪದ ಮದ್ಯದಂಗಡಿ ತೆರೆಯಲುದ್ದೇಶಿಸಿರುವ ಕಟ್ಟಡದ ಬಳಿ ಜಮಾಯಿಸಿದ ಮಹಿಳೆಯರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.   ಈ ವೇಳೆ ನಗರಸಭಾ ಸದಸ್ಯೆ ಪ್ರಭಾ ನಾಗರಾಜ್ ಮಾತನಾಡಿ ಈ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಗಾರ್ಮೆಂಟ್ಸ್, ಫ್ಯಾಕ್ಟರಿಗಳಿಗೆ ಹೋಗಿ ಬರುವ ನೂರಾರು ಮಹಿಳೆಯರು, ಶಾಲಾಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲದಕ್ಕೂ ರಸ್ತೆಯಲ್ಲಿಯೇ ಓಡಾಡಬೇಕು. 2500 ಜನರಿರುವ ಜನನಿಬಿಡ ಪ್ರದೇಶ […]

Continue Reading

ರಾಜ್ಯ ಬಿಜೆಪಿಯಿಂದ ಪ್ರತಿಭಟನೆ : ಮುಖ್ಯಮಂತ್ರಿ ಕಚೇರಿಗೆ ಬೀಗ ಹಾಕುವಂತೆ ಅಗ್ರಹ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಪ್ರತಿಭಟನೆ ನೆಡೆಸಿತು.   ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ವತಿಯಿಂದ ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಜೊತೆಗೂಡಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಬಿ ವೈ ವಿಜಯೇಂದ್ರ ಪ್ರತಿಭಟನೆ ನಡೆಸಿದರು.   ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಾಗಿದ್ದು, ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ತಾರತಮ್ಯವೆಸಗಿರುವ […]

Continue Reading

ಮಾಜಿ ಉಪಮೇಯರ್ ಹೇಮಲತಾ ರವರಿಂದ ಕ್ಯಾನ್ಸರ್ ತಪಾಸಣೆಗೆ ಚಾಲನೆ

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಾಮಾಕ್ಷಿಪಾಳ್ಯದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಉದ್ಯಾನದಲ್ಲಿ ಮಾಜಿ ಉಪಮೇಯರ್ ಹೇಮಲತಾ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಆಯೋಜನೆ ಮಾಡಿರುವ ಕ್ಯಾನ್ಸರ್ ತಪಾಸಣೆಗೆ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಅವಶ್ಯಕತೆ ಇದೆ. 21ನೇ ಶತಮಾನದಲ್ಲಿ ನಾವು ಜೀವನ ಸಾಗಿಸುತ್ತಿದ್ದರು ಸಹ ಸಮಾಜದಲ್ಲಿ ಸಾಕಷ್ಟು ಜನರಿಗೆ ಕ್ಯಾನ್ಸರ್ ಕಾಯಿಲೆ ಕುರಿತು ಮಾಹಿತಿಯ ಕೊರತೆ ಇದೆ. ಸಾರ್ವಜನಿಕ ಸದುಪಯೋಗಕ್ಕಾಗಿ ಇಂದು ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು. […]

Continue Reading

ಈ ಹಿಂದೆ ಡಬಲ್ ಇಂಜಿನ್ ಸರ್ಕಾರ ಇದ್ದಾಗಲೂ ಕನ್ನಡಿಗರಿಗೆ ಏನು ಪ್ರಯೋಜನವಾಗಿಲ್ಲ – ಡಿಸಿಎಂ ಡಿಕೆ ಶಿವಕುಮಾರ್

ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಇಂದು ಬೆಳಗ್ಗೆ 11ಗಂಟೆಗೆ ದೆಹಲಿ ಜಂತರ್ ಮಂತರ್ ಎದುರು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.   ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ರಾಜಧಾನಿ ದಿಲ್ಲಿಯಲ್ಲಿ ಇಂದು ಹಮ್ಮಿಕೊಂಡಿದ್ದ ದಿಲ್ಲಿ ಚಲೋ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡು ಮಾತನಾಡಿದರು. ನಾವು ಭಾವನೆ ಮೇಲೆ ರಾಜಕಾರಣ ಮಾಡುತ್ತಿಲ್ಲ, ಬಡವರ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟ ಇತಿಹಾಸದಲ್ಲಿ ಒಂದು […]

Continue Reading

5ನೇ ವಾರ್ಷಿಕ ಸ್ಮರಣಾಂಜಲಿ ಕಾರ್ಯಕ್ರಮ : ಪ್ಯಾರಾ ಮಿಲಿಟರಿ ಮಾಜಿ ಯೋಧರ ಬೃಹತ್ ಸಮಾವೇಶ

ಕೇಂದ್ರೀಯ ಅರಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2019ನೇ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿ ಆರ್ ಪಿ ಎಫ್ ನ ವೀರ ಯೋಧರ ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲಾ ಹುತಾತ್ಮ ಯೋಧರಿಗೂ 5ನೇ ವಾರ್ಷಿಕ ಸ್ಮರಣಾಂಜಲಿ ಕಾರ್ಯಕ್ರಮವನ್ನು ಗ್ರೂಪ್ ಸೆಂಟರ್, ಸಿ ಆರ್ ಪಿ ಎಫ್ ಕ್ಯಾಂಪಸ್ ದೊಡ್ಡಬಳ್ಳಾಪುರ ರಸ್ತೆ ,ಯಲಹಂಕ ಬೆಂಗಳೂರು ಇಲ್ಲಿ ದಿನಾಂಕ 14 2 2024ರಂದು ಆಯೋಜನೆ […]

Continue Reading

ಕರ್ನಾಟಕ ಕಾಂಗ್ರೆಸಿಗರೇ…. ಯಾತಕ್ಕಾಗಿ ದಿಲ್ಲಿ ಚಲೋ ನಾಟಕ?? – ಸಂಸದೀಯ ಸಚಿವ ಪ್ರಲ್ಹದ್ ಜೋಶಿ

ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಜಂತರ್ ಮಂತರ್ ಎದುರು ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಸಂಸದೀಯ ಸಚಿವರಾದ ಪ್ರಲ್ಹದ್ ಜೋಶಿ ಆಕ್ರೋಶ ಹೊರಹಾಕಿದ್ದಾರೆ   ತಮ್ಮ ಎಕ್ಸ್ ಸಂದೇಶದಲ್ಲಿ ಕರ್ನಾಟಕ ಕಾಂಗ್ರೆಸಿಗರೇ….. ಯಾತಕ್ಕಾಗಿ ದಿಲ್ಲಿ ಚಲೋ ನಾಟಕ?   * ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕನ್ನ ಹಾಕಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ? * ರೈತರ ಮಕ್ಕಳಿಗೆ ನೀಡುತ್ತಿದ್ದ ರೈತನಿಧಿ ರದ್ದುಗೊಳಿಸಿದ್ದೀರಲ್ಲಾ, […]

Continue Reading

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ದೊಡ್ಡಬಳ್ಳಾಪುರ ವಿದ್ಯಾರ್ಥಿನಿ ಎಂ.ಮೀನಾ ರವರಿಗೆ ಮುಖ್ಯಮಂತ್ರಿಗಳಿಂದ ಬಹುಮಾನ ವಿತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಬಹುಮಾನ ವಿತರಿಸಿದರು.   ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನ.ಎಂ […]

Continue Reading

ಮಹಿಳೆಯ ಗರ್ಭಕೋಶದ ಸುತ್ತ 4.5 ಕೆ.ಜಿ ಗಡ್ಡೆ : ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ಸರ್ಕಾರಿ ವೈದ್ಯರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಹಿಳೆಯೊಬ್ಬರ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆ ಹೊರ ತೆಗೆಯುವಲ್ಲಿ ಸ್ಥಳೀಯ ವೈದ್ಯರ ತಂಡ ಯಶಸ್ವಿಯಾಗಿದೆ.   ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರು, ಖಾಸಗಿ ಆಸ್ಪತ್ರೆಗಳಿಗೆ ಸಡ್ಡು ಹೊಡಿದಿದ್ದಾರೆ.ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟಿಯಲ್ಲಿ 4 ರಿಂದ ೫ ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು […]

Continue Reading

ಫೆಬ್ರವರಿ 7ರಂದು ದಿಲ್ಲಿಯ ಜಂತರ್ ಮಂತರ್ ಎದುರು ಪ್ರತಿಭಟನೆ

ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ಬೆಳಗ್ಗೆ 11ಗಂಟೆಗೆ ದಿಲ್ಲಿಯ ಜಂತರ್‌ ಮಂತರ್‌ ಎದುರು ಪ್ರತಿಭಟನೆ ಕುರಿತು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.   ಈ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಮಾತೆತ್ತಿದರೆ ಡಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುವ ಬಿಜೆಪಿ, ಆ ಸಮಯದಲ್ಲೂ ಸರಿಯಾಗಿ ಅನುದಾನ ನೀಡಲಿಲ್ಲ, ನಮ್ಮ ಸರ್ಕಾರ ಬಂದ ಮೇಲೆ ತಾಳ್ಮೆಯಿಂದ ಕಾಯುತ್ತಿದ್ದೆವು, ಈ ಸಾರಿ ಬಜೆಟ್‌ನಲ್ಲೂ ನಮಗೆ […]

Continue Reading