*ಮೇ 15 ರಿಂದ ಉಚಿತ ಎಂಬ್ರಾಯ್ಡರಿ & ಆರಿ ವರ್ಕ್ ತರಬೇತಿ ಆರಂಭ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 30 ( ವಿಜಯ ಮಿತ್ರ ) : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್‌ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 15 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.   ಆಸಕ್ತರು […]

Continue Reading

*ಉಚಿತ ಮೊಬೈಲ್‌ ರಿಪೇರಿ & ಸೇವೆ ತರಬೇತಿಗೆ ಮೇ 8 ರಂದು ನೇರ ಸಂದರ್ಶನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 30 ( ವಿಜಯ ಮಿತ್ರ ) : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.   ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ […]

Continue Reading

*ಧಗ ಧಗನೆ ಹತ್ತಿ ಹುರಿದ ಡಿ ಟಿ ಸಿ ಬಾಕ್ಸ್ ಮತ್ತು ವೈಯರ್ ಗಳು : ಬೆಸ್ಕಾಂ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ*

ದೊಡ್ಡಬಳ್ಳಾಪುರ ಏಪ್ರಿಲ್ 29 ( ವಿಜಯ ಮಿತ್ರ ) : ನಗರ ಭಾಗದ ತುಮಕೂರು ರಸ್ತೆ ಟ್ರಾನ್ಸ್ ಫಾರ್ಮ್ ಲಾವಣ್ಯ ವಿದ್ಯಾ ಸಂಸ್ಥೆ ಸಮೀಪದ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ವೈಯರ್ ಗಳ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾರಿದ ಕಿಡಿಯೇ ಈ ಅನಾಹುತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಬೆಂಕಿಯಿಂದ ಡಿ ಟಿ ಸಿ ಬಾಕ್ಸ್ ಮತ್ತು ವೈಯರ್ ಗಳು ಸಂಪೂರ್ಣ ಹಾಳಾಗಿದ್ದು. ಬೆಸ್ಕಾಂ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ದರ್ಗಾಜೋಗಹಳ್ಳಿಗೆ ಸಂಪರ್ಕಿಸುವ ವಿದ್ಯುತ್ […]

Continue Reading

*ಮಾಜಿ ಸಚಿವ ಡಾ. ಕೆ ಸುಧಾಕರ್ ವಿರುದ್ಧ ಎಫ್ಐಆರ್ : ವಾಟ್ಸ್ ಆಪ್ ಸಂದೇಶಗಳ ಆಧಾರದ ಹಿನ್ನಲೆ ಕೇಸ್ ದಾಖಲು*

ಚಿಕ್ಕಬಳ್ಳಾಪುರ ( ವಿಜಯಮಿತ್ರ) : ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಡಾ.ಕೆ ಸುಧಾಕರ್‌ ಮೇಲೆ ಪ್ರಕರಣ ದಾಖಲಾಗಿದೆ.   ಚಿಕ್ಕಬಳ್ಳಾಪುರ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ನೋಡಲ್ ಅಧಿಕಾರಿ ಮೌನೀಶ್ ಮೌದ್ಗಿಲ್​ಗೆ ಕರೆ ಮಾಡಿ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಕ್ಷಿ ಸಮೇತ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರು ದೂರು ದಾಖಲಿಸಿದ್ದಾರೆ.   ಲೋಕಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಮಾದವಾರದ ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ, ಕೋಟಿ ಹಣ ಪತ್ತೆಯಾದ […]

Continue Reading

*ಕೇಂದ್ರ ಸರ್ಕಾರದಿಂದ 3,454 ಕೋಟಿ ಬರಪರಿಹಾರ ಬಿಡುಗಡೆ : ಬರಪರಿಹಾರ ಪಡೆಯಲು ರಾಜ್ಯಸರ್ಕಾರದ ಪ್ರಯತ್ನಗಳ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ*

ಕರ್ನಾಟಕ ಏಪ್ರಿಲ್ 27 ( ವಿಜಯಮಿತ್ರ ) : ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಬರ ಪರಿಹಾರ ನೀಡಿದ್ದು ಈ ಹಿನ್ನಲೆ ರಾಜ್ಯ ಸರ್ಕಾರ ಬರ ಪರಿಹಾರ ಪಡೆಯಲು ನೆಡೆಸಿದ ಪ್ರಯತ್ನಗಳ ವಿವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.   ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಸುಮಾರು 7 ತಿಂಗಳ ಕಾಲ ಬರ ಪರಿಹಾರಕ್ಕಾಗಿ ಕಾದು ಕಾದು ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸನ್ನಿವೇಶವನ್ನು ಸೃಷ್ಟಿಸಿದ್ದು ಕೇಂದ್ರ ಬಿಜೆಪಿ ಸರ್ಕಾರವೇ. ಕರ್ನಾಟಕದ ರೈತರ ಸಂಕಷ್ಟವನ್ನು, […]

Continue Reading

*ಡಾ. ರಾಜಕುಮಾರ್ ನೇತ್ರ ಸಂಗ್ರಹಣಾ ಕೇಂದ್ರದಿಂದ 2254 ನೇತ್ರ ಸಂಗ್ರಹ : ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ*

  ದೊಡ್ಡಬಳ್ಳಾಪುರ ಏಪ್ರಿಲ್ 26 ( ವಿಜಯಮಿತ್ರ) : ಮರಣನಂತರ ಮೃತ ವ್ಯಕ್ತಿಯ ಕಣ್ಣುಗಳು ಮಣ್ಣಿನಲ್ಲಿ ಮಣ್ಣಾಗುವ ಬದಲು ಮತ್ತೊಬ್ಬರ ಜೀವನಕ್ಕೆ ಬೆಳಕಾಗಲಿ ನೇತ್ರಾದಾನ ಮಾಡಿ ಅಂಧರಿಗೆ ದೃಷ್ಟಿ ನೀಡಿ ಎಂದು ಟಿ. ವಿ. ರವಿ ತಿಳಿಸಿದರು ನಗರದ ರಾಜೀವ್ ಗಾಂಧಿ ನಗರದ ನಿವಾಸಿ, ಶ್ರೀಮೋಹನ್ ಕುಮಾರ್ ( ಸುಮಾರು 45 ವರ್ಷ)ರವರು ಹೃದಯಘಾತದಿಂದ ವಿಧಿವಶರಾಗಿದ್ದು. ಮೃತರ ನೇತ್ರಗಳನ್ನು ಸಂಗ್ರಹಿಸಿ ನಂತರ ಮಾತನಾಡಿದ ಅವರು ಮೋಹನ್ ಕುಮಾರ್ ಅವರ ಕಣ್ಣುಗಳನ್ನು ಕುಟುಂಬಸ್ಥರು ಡಾ.ರಾಜ್ ಕುಮಾರ್ ನೇತ್ರ ಸಂಗ್ರಹಣಾ […]

Continue Reading

*ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ :ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 24(ವಿಜಯಮಿತ್ರ ):-ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಚುನಾವಣಾ ವೇಳಾಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ನಾಲ್ಕು […]

Continue Reading

*ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 23(ವಿಜಯಮಿತ್ರ) : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.     ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನದಂದು ಚುನಾವಣಾ […]

Continue Reading

*ವಾರ್ತಾ ಇಲಾಖೆ ವತಿಯಿಂದ ವರನಟ ಡಾ. ರಾಜಕುಮಾರ ರವರ ಜನ್ಮದಿನಾಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 24(ವಿಜಯಮಿತ್ರ): ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಹಾಗೂ ವರನಟ ಡಾ. ರಾಜಕುಮಾರ ರವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಛೇರಿಯಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.   ವಾರ್ತಾ ಇಲಾಖೆಯ ಉಪನಿರ್ದೇಶಕರಾದ ಎಸ್. ಶಂಕರಪ್ಪ ಅವರು ಡಾ. ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.   ಕಾರ್ಯಕ್ರಮದಲ್ಲಿ […]

Continue Reading

*’ಕನ್ನಡ ಅಭಿಮಾನದ ದಿನ’ವಾಗಿ ಡಾ.ರಾಜ್ ಕುಮಾರ್ ಜನ್ಮದಿನದ ಆಚರಣೆ*

ದೊಡ್ಡಬಳ್ಳಾಪುರ ಏಪ್ರಿಲ್ 25 (ವಿಜಯ ಮಿತ್ರ ) : ಕನ್ನಡ ರಂಗಭೂಮಿಯಿಂದ ಚಲನಚಿತ್ರ ರಂಗಕ್ಕೆ ಬಂದ ಬಹುಮುಖಿ ಪ್ರತಿಭೆಯ ಮೇರು ಕಲಾವಿದ ಡಾ.ರಾಜ್ ಕುಮಾರ್ ಕನ್ನಡ ಚಲನಚಿತ್ರ ನಟರಾಗಿ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದ ಡಾ.ರಾಜ್ ಕುಮಾರ್ ಗಾಯಕರಾಗಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.     ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ  ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಡೆದ ಡಾ.ರಾಜ್ ಕುಮಾರ್ […]

Continue Reading