*ಹಿರಿಯ ನಟ ದ್ವಾರಕೀಶ್ ನಿಧನ : ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಂದ ಸಂತಾಪ*

ಕರ್ನಾಟಕ ಏಪ್ರಿಲ್ 16 (ವಿಜಯಮಿತ್ರ ) : ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ( 81) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಎದ್ದು, ಕಾಫಿ ಕುಡಿದವರು ನಂತರ ಉಸಿರು ಚೆಲ್ಲಿದ್ದಾರೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.     ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ […]

Continue Reading

*ಇನ್ನೂ 50 ವರ್ಷ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌*

Doddaballapura ಏಪ್ರಿಲ್ 15 ( ವಿಜಯ ಮಿತ್ರ ) : ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಮಾಗಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ತ್ರಿಬಲ್‌ ಎಂಜಿನ್‌ನ ಗೆಲುವಿನ ಗಾಳಿ ಬೀಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.   ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಡಾ.ಕೆ.ಸುಧಾಕರ್‌ ಪ್ರಚಾರ ನಡೆಸಿದರು.   ನಂತರ ಮಾತನಾಡಿದ ಡಾ.ಕೆ.ಸುಧಾಕರ್‌, ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಇರುವವರೆಗೂ ಕಾಂಗ್ರೆಸ್‌ ವಿರೋಧ ಪಕ್ಷದ ಸ್ಥಾನದಲ್ಲೇ […]

Continue Reading

*ರೈತರ ಬೆನ್ನೆಲುಬು ಡಾ. ಬಿ.ಆರ್ ಅಂಬೇಡ್ಕರ್ – ಹಳ್ಳಿರೈತ ಅಂಬರೀಷ್*

ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಅನ್ನದಾತ ರೈತನು ತನ್ನ ಹಕ್ಕನ್ನು ಪಡೆಯಲು ಡಾ. ಬಿ. ಆರ್.ಅಂಬೇಡ್ಕರ್ ರಚಿತಾ ಸಂವಿಧಾನವು ಸಹಕಾರಿಯಾಗಿದೆ. ಹಾಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೈತರ ಬೆನ್ನೆಲುಬು ಎಂದರೆ ತಪ್ಪಾಗಲಾರದು ಎಂದು ಹಳ್ಳಿ ರೈತ ಅಂಬರೀಶ್ ಅಭಿಪ್ರಾಯ ಪಟ್ಟರು ತೂಬಗೆರೆ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ 133 ನೇ ಡಾ. ಬಿ ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರೈತನು ಉಳಿಯಲು ಮುಖ್ಯ ಕಾರಣ ಸಂವಿಧಾನವೇ ಆಗಿದೆ. ಯಾವುದೇ ರೀತಿಯ ಅನ್ಯಾಯ […]

Continue Reading

*ಅಂಬೇಡ್ಕರ್ ಆಶಯದ ಹಾದಿಯಲ್ಲಿ ಪ್ರಧಾನಿ ಮೋದಿ ಆಡಳಿತ ಡಾ.ಕೆ.ಸುಧಾಕರ್*

ಚಿಕ್ಕಬಳ್ಳಾಪುರ ಏಪ್ರಿಲ್ 14 ( ವಿಜಯ ಮಿತ್ರ ) : ಪ್ರಧಾನಿ ನರೇಂದ್ರ ಮೋದಿಯವರು ಬಾಬಾ ಸಾಹೇಬರ ಪರಂಪರೆಯನ್ನುಳಿಸಲು ಶ್ರಮಿಸಿದ್ದರೆ, ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಬಾಬಾ ಸಾಹೇಬರನ್ನು ಮೂಲೆಗೆ ಸರಿಸಲು ಸಾಕಷ್ಟು ಪ್ರಯತ್ನ ಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.   ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸೂರ್ಯ ಕನ್ವೆನ್ಷನಲ್ ಹಾಲ್ ನಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.   ಅಂಬೇಡ್ಕರ್ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ, […]

Continue Reading

*706 ಮಂದಿ ಮನೆಯಿಂದಲೇ ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 14 (ವಿಜಯಮಿತ್ರ ): 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 737 ಮತದಾರರ ಪೈಕಿ 706 ಮಂದಿ ಇದರ ಅವಕಾಶ ಪಡೆದುಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ […]

Continue Reading

*ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಂದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ: ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಉಭಯ ಪಕ್ಷಗಳ ಮುಖಂಡರು*

ದೊಡ್ಡಬಳ್ಳಾಪುರ (ತೂಬಗೆರೆ) ಏಪ್ರಿಲ್ 14: ಗ್ರಾಮದ ದಲಿತ ಮುಖಂಡ ರಾಮಕೃಷ್ಣರವರ ಮನೆಯಲ್ಲಿ ಉಪಹಾರ ಸೇವಿಸುವುದರ ಮೂಲಕ ಹೋಬಳಿಯ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರು ಅರ್ಥಪೂರ್ಣ ಅಂಬೇಡ್ಕರ್ ಜಯಂತಿ ಆಚರಿಸಿದರು. ಉಪಹಾರದ ನಂತರ ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.   ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಅಪ್ಪಯಣ್ಣ ಮಾತನಾಡಿ, ಡಾ. ಅಂಬೇಡ್ಕರ್ ಅವರು ಎಲ್ಲರಿಗೂ ಸಮಾನ ಅವಕಾಶವನ್ನು ಸಂವಿಧಾನದ ಮೂಲಕ ಮಾಡಿಕೊಟ್ಟ ನಿಜವಾದ ಸಾಮಾಜಿಕ ನ್ಯಾಯದ […]

Continue Reading

*ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌‌ ಅಂಬೇಡ್ಕರ್ ರವರ 133 ನೇ ಜನ್ಮದಿನಾಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 14 (ವಿಜಯಮಿತ್ರ): ಸಂವಿಧಾನ ಶಿಲ್ಪಿ, ಭಾರತ ರತ್ನ ಹಾಗೂ ಮಹಾಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, […]

Continue Reading

*ಏಪ್ರಿಲ್ 13 ರಿಂದ 18 ವರೆಗೆ ಮನೆ ಮನೆ ಮತದಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 11 (ವಿಜಯಮಿತ್ರ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮತದಾನಕ್ಕೆ ಆಯ್ಕೆ ಮಾಡಿಕೊಳ್ಳಲಾದ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನ ಮತದಾರರಿಂದ ಏಪ್ರಿಲ್ 13 ರಿಂದ 18 ರವರೆಗೆ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮತದಾನ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು. ಮನೆ ಮತದಾನಕ್ಕೆ ಈಗಾಗಲೇ ಅಗತ್ಯ ಸಿಬ್ಬಂದಿಗಳನ್ನು ನೇಮಕ […]

Continue Reading

*ಚುನಾವಣಾ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ಅಗತ್ಯ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 11(ಪ್ರಜಾ ಸೇನೆ ): ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ನಡೆಸಿ ಎಂದು ರಾಜ್ಯ ವಿಶೇಷ ಚುನಾವಣೆ ವೆಚ್ಚ ವೀಕ್ಷಕರಾದ ಮುರಳಿ ಕುಮಾರ್ ಅವರು ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಚುನಾವಣೆ ವೆಚ್ಚ ವೀಕ್ಷಣೆ ಸಂಬಂಧ ಇಂದು ನಡೆದ ಸಭೆಯ ಅಧ್ಯಕ್ಷತೆ […]

Continue Reading

*ಅಧಿಕಾರಿಗಳ ಮನವೊಲಿಕೆ ಯತ್ನ ವಿಫಲ : ಮುಂದುವರೆದ ಕುಡಿಯುವ ನೀರಿನ ಹೋರಾಟ*

ದೊಡ್ಡಬಳ್ಳಾಪುರ ಏಪ್ರಿಲ್ 11 ( ವಿಜಯ ಮಿತ್ರ ) : ನಮ್ಮ ಪಂಚಾಯಿತಿಯಲ್ಲಿ ಯಾವ ಗ್ರಾಮಗಳಿಗೂ ಕುಡಿಯಲು ನೀರಿಲ್ಲ, ಮನವೊಲಿಸಲು ಬರುವ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ಕಾಳಜಿವಹಿಸಿ ಎಂದು ಅಧಿಕಾರಿಗಳ ವಿರುದ್ಧ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.   ಲೋಕಸಭೆ ಚುನಾವಣೆ ಬಹಿಷ್ಕಾರದ ಹಿನ್ನಲೆ ತಾಲ್ಲೂಕು ಆಡಳಿತದ ವತಿಯಿಂದ ತಾಲ್ಲೂಕು ದಂಡಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎರಡು ಗ್ರಾಮಗಳ ಗ್ರಾಮಸ್ಥರನ್ನು ಮನವೊಲಿಸಲು ಮುಂದಾದರು.   ಪಟ್ಟು ಬಿಡದ ಹೋರಾಟಗಾರರು ಕೂಡಲೇ 3ನೇ ಹಂತದ ಕುಡಿಯುವನೀರಿನ […]

Continue Reading