*ರೈಲಿಗೆ ಸಿಲುಕಿ 45 ವರ್ಷದ ಅಪರಿಚಿತ ವ್ಯಕ್ತಿ ಸಾವು : ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು*

*ದೊಡ್ಡಬಳ್ಳಾಪುರ ಏಪ್ರಿಲ್.10 ( ವಿಜಯ ಮಿತ್ರ )* :ದೊಡ್ಡಬಳ್ಳಾಪುರ ರಾಜಾನುಕುಂಟೆ ರೈಲು ನಿಲ್ದಾಣಗಳ ಮಧ್ಯೆ ಸುರಧೇನುಪುರದ ಹತ್ತಿರ ಅಪರಿಚಿತ ಗಂಡಸು ಸುಮಾರು 45 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.   ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 73/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲಾಗಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲಾ     *ಮೃತ ವ್ಯಕ್ತಿಯ ಚಹರೆ* – 5’4 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು […]

Continue Reading

*ದ್ವಿತೀಯ ಪಿಯು ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟ: ಈ ಬಾರಿ ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ*

ಕರ್ನಾಟಕ ಏಪ್ರಿಲ್ 10 ( ವಿಜಯಮಿತ್ರ) : ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದೆ . ಈ ಸಂದರ್ಭದಲ್ಲಿ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಮಾತನಾಡಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು 6 ಲಕ್ಷ 98 ಸಾವಿರ 378 ವಿದ್ಯಾರ್ಥಿ ಅರ್ಹರಾಗಿದ್ದರು. ಅದರಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 6,81,079. ಒಟ್ಟು 17 ಸಾವಿರ ವಿದ್ಯಾರ್ಥಿಗಳು ಎಲ್ಲಾ […]

Continue Reading

*ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಗೆ ರಕ್ಷಾ ರಾಮಯ್ಯ ಭೇಟಿ : ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು*

ದೊಡ್ಡಬಳ್ಳಾಪುರ ಏಪ್ರಿಲ್ 09 ( ವಿಜಯಮಿತ್ರ) : ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೀ ರಕ್ಷಾ ರಾಮಯ್ಯ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.   ಯುಗಾದಿ ಹಬ್ಬದ ಹಿನ್ನಲೆ ತಾಲ್ಲೂಕಿನ ಪ್ರಸಿದ್ಧ ದೇವಾಲಯ ಘಾಟಿ ಸುಬ್ರಮಣ್ಯಕ್ಕೆ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ.ಈ ಯುಗಾದಿ ಹಬ್ಬವು ಎಲ್ಲರ ಜೀವನದಲ್ಲಿ ಹೊಸ ಚೈತನ್ಯ ತುಂಬಲಿ ಎಂದು ತಿಳಿಸಿದರು. […]

Continue Reading

*ಅಪರಿಚಿತ ವ್ಯಕ್ತಿ ರೈಲಿಗೆ ಸುಲುಕಿ ಸಾವು : ರಾಜನಕುಂಟೆ ಸಮೀಪ ಸುರಧೇನುಪುರ ದಲ್ಲಿ ಘಟನೆ*

ದೊಡ್ಡಬಳ್ಳಾಪುರ ಏಪ್ರಿಲ್ 09 ( ವಿಜಯಮಿತ್ರ) : 35 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸುರಧೇನುಪುರದ ಹತ್ತಿರ ಸಂಭವಿಸಿದೆ.   ತಾಲ್ಲೂಕಿನ ರಾಜಾನುಕುಂಟೆ ರೈಲು ನಿಲ್ದಾಣದ ಮಧ್ಯೆ ಸುರಧೇನುಪುರ ಮಾರ್ಗದಲ್ಲಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ (ಗಂಡಸು) ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 72/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲಾಗಿದ್ದು. ಮೃತನ ಮಾಹಿತಿ ಕಲೆಹಾಕುವಲ್ಲಿ ಸಿಬ್ಬಂದಿ ಮುಂದಾಗಿದ್ದಾರೆ.   *ವ್ಯಕ್ತಿಯ ಚಹರೆ-* […]

Continue Reading

*ಕಾಂಗ್ರೆಸ್‌ ಬಂದಾಗೆಲ್ಲ ಬರಗಾಲ, ರೈತರಿಗೆ ಪರಿಹಾರ ಕೊಟ್ಟಿಲ್ಲ*

ದೊಡ್ಡಬಳ್ಳಾಪುರ ಏಪ್ರಿಲ್ 08 ( ವಿಜಯ ಮಿತ್ರ ) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. ದೊಡ್ಡಬಳ್ಳಾಪುರ ಹಾಗೂ ಹೊಸಕೋಟೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಅವರು ಮಾತನಾಡಿದರು.   ಲೋಕಸಭಾ ಚುನಾವಣೆಯು ದೇಶದ ಪ್ರಧಾನಮಂತ್ರಿಯನ್ನು ಆರಿಸುವ ಚುನಾವಣೆ. ಈ ಬಾರಿಯೂ ನರೇಂದ್ರ ಮೋದಿಯವರನ್ನೇ ಹ್ಯಾಟ್ರಿಕ್‌ ಆಗಿ […]

Continue Reading

*ಶುದ್ಧ ಕುಡಿಯುವ ನೀರಿಗಾಗಿ ಹೋರಾಟ : ಲೋಕಸಭಾ ಚುನಾವಣೆ ಬಹಿಷ್ಕರಿಸಿದ ಗ್ರಾಮಸ್ಥರು*

ದೊಡ್ಡಬಳ್ಳಾಪುರ ಏಪ್ರಿಲ್ 07 ( ವಿಜಯ ಮಿತ್ರ ) : ದೊಡ್ಡ ತುಮಕೂರು ಮತ್ತು ಮಜಾರಹೊಸಹಳ್ಳಿ ಗ್ರಾಮ ಪಂಚಾಯ್ತಿಯ ಎಲ್ಲಾ ಮುಖಂಡರು ಹಾಗೂ ಗ್ರಾಮಸ್ಥರ ಒಮ್ಮತದೊಂದಿಗೆ ಈ ಬಾರಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಖ್ಯಾತ ವೈದ್ಯರಾದ ಡಾ. ಎಚ್. ಆಂಜಿನಪ್ಪ ತಿಳಿಸಿದರು. ಮಜಾರಹೊಸಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲ್ಲೂಕಿನ ನಗರಸಭೆಯವರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯವರು ಮತ್ತು ಕಾರ್ಖಾನೆಗಳು ತಮ್ಮಲ್ಲಿ ಉತ್ಪತ್ತಿಯಾಗುವ ಕೊಳಚೆ ನೀರನ್ನು ಮತ್ತು ರಾಸಾಯನಿಕ ನೀರನ್ನು ಶುದ್ದೀಕರಿಸದೆ […]

Continue Reading

*ಎರಡು ಎಕ್ಕರೆ ಪರಂಗಿ ಗಿಡಗಳಿಗೆ ಬೆಂಕಿ : ಬೆಳೆಯ ಜೊತೆ ಡ್ರಿಪ್ ಪೈಪ್ ಗಳು ಸುಟ್ಟು ಭಸ್ಮ*

ದೊಡ್ಡಬಳ್ಳಾಪುರ ( ವಿಜಯ ಮಿತ್ರ ): ಎರಡು ಎಕರೆಯ ಫಲ ತುಂಬಿದ ಎರಡು ಸಾವಿರ ಪರಂಗಿ ಗಿಡಗಳು, ದುಷ್ಕರ್ಮಿಗಳ ದುಶ್ಕೃತ್ಯದಿಂದ ಪರಂಗಿ ಫರಿತ ಗಿಡಗಳು ಬೆಂಕಿಗಾಹುತಿಯಾಗಿವೆ, ಪರಂಗಿ ಗಿಡಗಳ ಜೊತೆ ಡ್ರಿಪ್ ಪೈಪ್ ಗಳು ಸುಟ್ಟು ಬೂದಿಯಾಗಿದ್ದು , ಬೆಂಕಿ ಅವಘಡದಿಂದ 3 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ರೈತ ನಾಗರಾಜ್ ತಿಳಿಸಿದರು. ತಾಲ್ಲೂಕಿನ ಮುಕ್ಕಡಿಘಟ್ಟ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು , ನಾಗರಾಜ್ ಎಂಬುವರಿಗೆ ಸೇರಿದ 2000 ಕ್ಕೂ ಅಧಿಕ ಪರಂಗಿ ಗಿಡಗಳು […]

Continue Reading

*ಜಿಲ್ಲಾಡಳಿತ ಭವನದಲ್ಲಿ ಡಾ.ಬಾಬು ಜಗಜೀವನ ರಾಂ ರವರ 117 ನೇ ಜಯಂತಿ ಸರಳ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 05 (ವಿಜಯ ಮಿತ್ರ ): ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಂ ರವರ 117 ನೇ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ […]

Continue Reading

*ನಗರಸಭಾ ಸದಸ್ಯ ಶಿವರಾಜ್ (ಶಿವು ) ಶಾಸಕ ಧೀರಜ್ ಮುನಿರಾಜು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ*

ದೊಡ್ಡಬಳ್ಳಾಪುರಏಪ್ರಿಲ್ 03 ( ವಿಜಯ ಮಿತ್ರ ) : ರಾಷ್ಟ್ರದಲ್ಲಿ ಮೋದಿ ಜೀ ಅವರ ಆಡಳಿತ ವೈಖರಿ ಹಾಗೂ ಯುವ ಶಾಸಕ ಧೀರಜ್ ಮುನಿರಾಜು ರವರ ನಾಯಕತ್ವ ಮೆಚ್ಚಿ ಸಂಗಡಿಗರೊಂದಿಗೆ ಸ್ವಪಕ್ಷಕ್ಕೆ ಹಿಂದಿರುಗಿದ್ದೇವೆ ಎಂದು ನಗರಸಭಾ ಸದಸ್ಯ ಶಿವರಾಜ್(ಶಿವು )ತಿಳಿಸಿದರು. ಸ್ಥಳೀಯ ಶಾಸಕ ಧೀರಜ್ ಮುನಿರಾಜುರವರ ಸಮ್ಮುಖದಲ್ಲಿ ನಗರದ 12ನೇ ವಾರ್ಡಿನ ನಗರಸಭಾ ಸದಸ್ಯರಾದ ಶಿವರಾಜ್(ಶಿವು )ರವರು ತಮ್ಮ ಬೆಂಬಲಿಗರು ಹಾಗೂ ಸಂಗಡಿಗರೊಂದಿಗೆ ಮತ್ತೆ ಮಾತೃ ಪಕ್ಷ ಬಿಜೆಪಿ ಗೆ ಸೇರ್ಪಡೆಯಾದರು.   ಈ ಸಂದರ್ಭದಲ್ಲಿ ಮಾತನಾಡಿದ […]

Continue Reading

*ದೇಶ ಕಟ್ಟಿದ ಪಕ್ಷ ನಮ್ಮದು – ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ*

ದೊಡ್ಡಬಳ್ಳಾಪುರ ಏಪ್ರಿಲ್ 02 ( ವಿಜಯಮಿತ್ರ ) : ಪ್ರಣಾಳಿಕೆಯಲ್ಲಿ ಘೋಷಣೆಮಾಡಿದ ಎಲ್ಲಾ ಗ್ಯಾರೆಂಟಿ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ ಎರಡು ತಿಂಗಳಿನಲ್ಲಿ ಈಡೇರಿಸಿದೆ. ಬಡವರ ಅಭಿವೃದಿಗಾಗಿ ಶ್ರಮಿಸುವ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷವಾಗಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಮ್ಮೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತಯಾಚನೆ ಮಾಡಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ರಕ್ಷಾ ರಾಮಯ್ಯ ತಿಳಿಸಿದರು. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು […]

Continue Reading