*ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು*

ದೊಡ್ಡಬಳ್ಳಾಪುರ : ಜೂನ್ 13 ರಂದು ಬೆಳಗ್ಗೆ ಗೌರಿಬಿದನೂರು ಮತ್ತು ದೇವರಪಲ್ಲಿ ರೈಲು ನಿಲ್ದಾಣಗಳ ಮಧ್ಯೆ ವಿದುರಾಶ್ವತ್ಥ ಹತ್ತಿರ ಅಪರಿಚಿತ ಗಂಡಸು ಸುಮಾರು 75 ರಿಂದ 80 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 110/2024 ಕಲಂ 174 Cr.P.C ರೀತ್ಯಾ ಪ್ರಕರಣ ಧಾಖಲು ಮಾಡಿಕೊಂಡಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. *ಚಹರೆ* – 5.5ಅಡಿ ಎತ್ತರ, ಕಪ್ಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಬಿಳಿ […]

Continue Reading

*ಉತ್ತಮ ಪ್ರಜೆಯಾಗಿ ದೇಶಸೇವೆ ಸಲ್ಲಿಸಲು ಎನ್ಎಸ್ಎಸ್ ಸಹಕಾರಿ – ಶಾಸಕ ಧೀರಜ್ ಮುನಿರಾಜು*

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರ ಇವರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.   ನಂತರ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ದಿಸೆಯಲ್ಲಿಯೇ ನಮ್ಮಲ್ಲಿ ರಾಷ್ಟ್ರಸೇವೆಯ ಮನೋಭಾವನೆಯನ್ನು ಬೆಳೆಸುತ್ತದೆ. ಮುಂದೆ ಉತ್ತಮ ಪ್ರಜೆಯಾಗಿ ದೇಶಸೇವೆಗೆ […]

Continue Reading

*ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 (ವಿಜಯಮಿತ್ರ ): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.   ಅರ್ಹ ಅಭ್ಯರ್ಥಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.twd.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2024ರ […]

Continue Reading

*ಎಸ್.ಎಸ್.ಎಲ್.ಸಿ ಪರೀಕ್ಷೆ-2: ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13 (ವಿಜಯಮಿತ್ರ ): 2024 ರ ಎಸ್.ಎಸ್. ಎಲ್.ಸಿ ಪರೀಕ್ಷೆ-2 ಜೂನ್ 14 ರಿಂದ ಜೂನ್ 22 ರವರೆಗೆ ನಡೆಯಲಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಒಟ್ಟು 11 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ.   ದೇವನಹಳ್ಳಿ ತಾಲೂಕು 02, ದೊಡ್ಡಬಳ್ಳಾಪುರ ತಾಲೂಕು 03, ಹೊಸಕೋಟೆ ತಾಲೂಕು 03 ಹಾಗೂ ನೆಲಮಂಗಲ ತಾಲೂಕು 03 ಕೇಂದ್ರಗಳನ್ನು ಒಳಗೊಂಡಿರುತ್ತದೆ.     ಜಿಲ್ಲೆಯಲ್ಲಿ ಒಟ್ಟು 2348 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಆಗಿರುತ್ತಾರೆ. […]

Continue Reading

*ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಮುಂಗಾರು 2024:ಬೆಳೆ ವಿಮೆಗೆ ನೋಂದಾಯಿಸಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13 : 2024ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ.   ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ […]

Continue Reading

*ರೈತರಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13 : ಮುಂಗಾರು ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ಅಗತ್ಯ ಕ್ರಮ ವಹಿಸಿ ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ […]

Continue Reading

*ದೇವನಹಳ್ಳಿ : ಸರ್. ಎಂ. ವಿಶ್ವೇಶ್ವರಯ್ಯ ಆಂಗ್ಲ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಕುರಿತು ವಿಶೇಷ ಅಭಿಯಾನ*

ದೇವನಹಳ್ಳಿ, ಯಲಿಯೂರು : ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಅತ್ಯವತ್ಯವಾಗಿದ್ದು. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ಕಾಯಕ ನಮ್ಮಿಂದ ಆಗಬೇಕಿದೆ ಎಂದು ಸರ್ ಎಂ ವಿಶ್ವೇಶ್ವರಯ್ಯ ಆಂಗ್ಲ ಪ್ರೌಢಶಾಲೆ ಸಂಸ್ಥಾಪಕ ತ್ಯಾಗರಾಜು ಅಭಿಪ್ರಾಯಪಟ್ಟರು. ದೇವನಹಳ್ಳಿ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಮತ್ತು ವಿದ್ಯಾರ್ಥಿಳಿಂದ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಅಭಿಯಾನ ಆಯೋಜನೆ ಮಾಡಲಾಗಿತ್ತು.ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ಪರಿಸರ ನಮ್ಮನ್ನು […]

Continue Reading

*ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಆಸಕ್ತರು ಸೇವಾಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12(ವಿಜಯಮಿತ್ರ): 2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ […]

Continue Reading

*ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 (ವಿಜಯಮಿತ್ರ ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. Ad ಅರ್ಹ ಅಭ್ಯರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2024ರ ಜೂನ್ […]

Continue Reading

*ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಬಿರಾದಾರ ದೇವಿಂದ್ರಪ್ಪಾ. ಎನ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 (ವಿಜಯಮಿತ್ರ): ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ 5 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪಾ. ಎನ್ ಅವರು ಹೇಳಿದರು.   ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ […]

Continue Reading