*ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆಗಿಳಿದ ಕನ್ನಡ ಪಕ್ಷ*

ದೊಡ್ಡಬಳ್ಳಾಪುರ : ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಚಾರ ನೆನ್ನೆ ಮೊನ್ನೆಯದಲ್ಲ 60ರ ದಶಕದಿಂದಲೂ ಕನ್ನಡಿಗರಿಗೆ ರಾಜ್ಯ ಸರ್ಕಾರದ ಕೇಂದ್ರ ಸರ್ಕಾರದ ಉದ್ದಿಮೆಗಳಲ್ಲಿ ಮತ್ತು ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಆರೋಪಿಸಿದರು. ನಗರದ ತಾಲೂಕು ಕಚೇರಿ ಮುಂಭಾಗ ಕನ್ನಡ ಪಕ್ಷದ ವತಿಯಿಂದ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸುಮಾರು 50 ವರ್ಷಗಳಿಂದಲೂ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ […]

Continue Reading

*ಡೆಂಗ್ಯೂ ಕುರಿತು ಅರಿವು : ಸೊಳ್ಳೆ ಪರದೆ ಹಂಚಿಕೆ ಮಾಡುವ ಮೂಲಕ ಜನರಲ್ಲಿ ಜಾಗೃತಿ*

ದೊಡ್ಡಬಳ್ಳಾಪುರ : ಎಲ್ಲೆಡೆ ಡೆಂಗ್ಯೂ ( ಜ್ವರ ) ಕಾಯಿಲೆ ಹರಡುತ್ತಿದೆ ಈ ಕುರಿತು ಸಾರ್ವಜನಿಕರು ಜಾಗೃತರಾಗಬೇಕಿದೆ. ಸೊಳ್ಳೆ ಪರದೆ ಹಾಗೂ ಕಾಯಿಲ್ ಗಳನ್ನು ವಿತರಣೆ ಮಾಡುವ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಭಾಸ್ಕರ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಭಾರತೀಯ ರೆಡ್ ಕ್ರಾಸ್ ಹಾಗೂ ಸನ್ನದ್ಧ ಸಂಸ್ಥೆ ವತಿಯಿಂದ ನಾಗರಿಕರಿಗೆ ಡೆಂಗ್ಯೂ ಕಾಯಿಲೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ತಾಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೊಳ್ಳೆ ಪರದೆ ಮತ್ತು ಸೊಳ್ಳೆ ಕಾಯಿಲ್ […]

Continue Reading

*MNC ಕಂಪನಿಗಳ ವಿರುದ್ಧ ಪ್ರತಿಭಟನೆಗೆ ಮುಂದಾದ ಕರವೇ : ಕನ್ನಡಿಗರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಅಗ್ರಹ*

ಹೊರದೇಶಗಳಿಂದ ಕರ್ನಾಟಕಕ್ಕೆ ಬಂದು ವ್ಯಾಪಾರ ನಡೆಸುತ್ತಿರುವ ಹಲವಾರು ಎಂಎನ್‌ಸಿ ಕಂಪನಿಗಳಲ್ಲಿ ಅರ್ಹತೆ ಇದ್ದರೂ ಕನ್ನಡಿಗರನ್ನು ಕೇವಲ ಸಹಾಯಕರ ಹುದ್ದೆಗಳಿಗೆ ನೇಮಿಸಿಕೊಂಡು ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ ಎಂಎನ್‌ಸಿ ಕಂಪನಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕನ್ನಡಿಗರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಆಗ್ರಹಿಸಿದ್ದಾರೆ.   ಹಲವಾರು ಎಂಎನ್‌ಸಿ ಕಂಪನಿಗಳಲ್ಲಿ ಕನ್ನಡಿಗರು ನಿರಂತರವಾಗಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡು ಬರುತ್ತಿದ್ದಾರೆ ಆದರೆ ಈವರೆಗೂ ಅವರಿಗೆ ಕಂಪನಿಗಳು ಉತ್ತಮ ಸ್ಥಾನಮಾನ ನೀಡಿಲ್ಲ ಎಂಬುದು […]

Continue Reading

*ಕಾಡನೂರು ಮಹೇಶ್ವರಮ್ಮ ಜಾತ್ರೆಯಲ್ಲಿ ಪವಾಡ : ಕಣ್ಣು ತೆರೆದ ಮಹೇಶ್ವರಮ್ಮ ಏನಿದು ಪವಾಡ ….????*

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿ ಗ್ರಾಮದಲ್ಲೂ ಒಂದಲ್ಲ ಒಂದು ಜಾತ್ರಾ ಮಹೋತ್ಸವ ನೆರವೇರುತ್ತಿದೆ. ಅಂತೆಯೇ ಇಲ್ಲೊಂದು ಜಾತ್ರಾ ಮಹೋತ್ಸವದಲ್ಲಿ ದೇವರು ಕಣ್ಬಿಟ್ಟಿದೆ ಎಂಬ ಸುದ್ದಿ ಹರಿದಾಡುತ್ತಿದೆ.   ತಾಲೂಕಿನ ಮದುರೆ ಹೋಬಳಿಯ ಕಾಡನೂರು ಎಂಬ ಹಳ್ಳಿಯಲ್ಲಿ ಮಹೇಶ್ವರಮ್ಮ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು. ಈ ಸಂದರ್ಭದಲ್ಲಿ ತಾಯಿ ಕಣ್ಣು ಬಿಟ್ಟಿದ್ದಾರೆ…. ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.   ಸದ್ಯಕ್ಕೆ ಕಣ್ಣು ಬಿಟ್ಟಂತೆ ಕಾಣುವ ದೇವಿಯ ಚಿತ್ರ ಎಲ್ಲೆಡೆ ಹರಿದಾಡುತ್ತಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕಾಡನೂರು ಗ್ರಾಮದ ಮಹೇಶ್ವರಮ್ಮ ದೇವಸ್ಥಾನದಲ್ಲಿನ […]

Continue Reading

ತಿರುಮಗೊಂಡನಹಳ್ಳಿ ಮೊಹರಂ ಪೂಜಾ ಕಾರ್ಯಕ್ರಮಕ್ಕೆ ಬಂದ ಯುವಕನ ಬ್ಯಾಗ್ ನಲ್ಲಿತ್ತು ಮಾರಕಾಸ್ತ್ರ….!!! ಗ್ರಾಮಸ್ಥರ ಸಮಯ ಪ್ರಜ್ಞೆ ತಪ್ಪಿದ ಅನಾಹುತ

ದೊಡ್ಡಬಳ್ಳಾಪುರ : ತಾಲೂಕಿನ ಎಲ್ಲೆಡೆ ಮೊಹರಂ ಆಚರಣೆ ಸಂಭ್ರಮ ಹಾಗೂ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಇದೊಂದು ಹಿಂದೂ ಮುಸ್ಲಿಂ ಬಾಂಧವ್ಯಕ್ಕೆ ಸಂಕೇತವಾದ ಹಬ್ಬ ಎಂದರೆ ತಪ್ಪಾಗಲಾರದು.   ಅಂತಯೇ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ ಭಕ್ತಿ ಭಾವದಿಂದ ಅದ್ದೂರಿಯಾಗಿ ನಡೆದಿತ್ತು. ಆದರೆ ಕಾರ್ಯಕ್ರಮಕ್ಕೆ ಬಂದ ಅಪರಿಚಿತ ಯುವಕ ಎಲ್ಲರ ಸಂತೋಷವನ್ನು ಭಯವನ್ನಾಗಿ ಮಾರ್ಪಡಿಸಿದ್ದ… ಕಾರಣ ಅವನ ಬ್ಯಾಗ್ ನಲ್ಲಿದ್ದ ಮಾರಕಾಸ್ತ್ರ. ಅಪರಿಚಿತ ಯುವಕನ ಬ್ಯಾಗ್ ನಲ್ಲಿ ಮಾರಕಾಸ್ತ್ರ ಕಂಡು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಯುವಕನನ್ನು […]

Continue Reading

*ನಿರುದ್ಯೋಗಿಗಳಿಗೆ ವೃತ್ತಿಪರ ತರಬೇತಿ ಸಿಗಲಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ.20 (ವಿಜಯಮಿತ್ರ):- ನಿರುದ್ಯೋಗ ಯುವಕ-ಯುವತಿಯರಿಗೆ ವೃತ್ತಿಪರ ತರಬೇತಿ ಹಾಗೂ ಉದ್ಯಮಶೀಲತೆ ಚಟುವಟಿಕೆಗಳ ತರಬೇತಿಯನ್ನು ವಿವಿಧ ತರಬೇತಿ ಸಂಸ್ಥೆಗಳ ಮೂಲಕ ಉಚಿತವಾಗಿ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು.   ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. […]

Continue Reading

*ಸಾರ್ವಜನಿಕರ ಸಮಸ್ಯೆ ಶೀಘ್ರ ಬಗೆಹರಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20(ವಿಜಯಮಿತ್ರ ):- ಸಾರ್ವಜನಿಕರು ಜನಸ್ಪಂದನ ಸಭೆಗಳಲ್ಲಿ ಸಲ್ಲಿಸುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಶೀಘ್ರ ಬಗೆಹರಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಜೆಗಳ ಸೇವೆ ಮಾಡುವ ದೃಷ್ಟಿಯಿಂದ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಿ […]

Continue Reading

*ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜುಲೈ 20(ವಿಜಯಮಿತ್ರ):- ಮೀನುಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಿಂದ ಕೇಂದ್ರ ಪುರಸ್ಕೃತ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2020-21, 2021-22, 2022-23 ಮತ್ತು 2023-24 ನೇ ಸಾಲಿನಲ್ಲಿ ಉಳಿಕೆಯಾಗಿರುವ ಗುರಿಗಳಿಗೆ 2024-25ನೇ ಸಾಲಿನ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಮಧ್ಯಮ ಗಾತ್ರದ ಆರ್.ಎ.ಎಸ್, 0.1 ಹೆಕ್ಟರ್ ಬಯೋಫ್ಲಾಕ್ ಘಟಕಗಳಿಗೆ, ಶೈತ್ಯಾಗಾರ/ ಮಂಜುಗಡ್ಡೆ, ಸ್ಥಾವರ ನಿರ್ಮಾಣ, ಐಸ್ ಪೆಟ್ಟಿಗೆಯೊಂದಿಗೆ ಮೋಟರ್ ಸೈಕಲ್, ಮೀನು/ ಅಕ್ವೇರಿಯಂ ಕಿಯೋಸ್ಕಗಳ […]

Continue Reading

*ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಚಾರಕರಾಗಿ ಕಾರ್ಯ ನಿರ್ವಹಿಸಿದ ನರೇಂದ್ರ ಬಾಬು ರವರಿಗೆ ಹಳೇ ವಿದ್ಯಾರ್ಥಿಗಳ ಸಂಘದಿಂದ ಬೀಳ್ಕೊಡುಗೆ*

ದೊಡ್ಡಬಳ್ಳಾಪುರ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ನರೇಂದ್ರ ಬಾಬು. ಜಿ ರವರು ಇಂದು ಹೆಸರಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡ ಹಿನ್ನಲೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ವಿ. ಸಂಘದ ಪರವಾಗಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು.     ಪ್ರಾಮಾಣಿಕರಾಗಿ ನಿರಂತರ ಸೇವೆಸಲ್ಲಿಸಿ ಇಂದು ನಮ್ಮ ಕಾಲೇಜಿನಿಂದ ಹೆಸರಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಯಾಗುತ್ತಿರುವ ನರೇಂದ್ರ ಬಾಬು ಸರ್ ರವರಿಗೆ ಶುಭವಾಗಲಿ ಅವರ ಸೇವೆ […]

Continue Reading

*1,576ನೇ ದಿನದ ನಿರಂತರ ಅನ್ನದ ಸಹ ಕಾರ್ಯಕ್ರಮ : ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಪೆನ್ ವಿತರಣೆ*

ದೊಡ್ಡಬಳ್ಳಾಪುರ ದರ್ಗಾಜೋಗಿಹಳ್ಳಿ : ಬ್ಯಾಂಕ್ ಆಫ್ ಬರೋಡ ಸಂಸ್ಥೆಯ 117ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಹಾಗೂ ಪೆನ್ನು ಗಳ ವಿತರಣೆ ಮಾಡಿದ್ದೇವೆ ಎಂದು ದೊಡ್ಡಬಳ್ಳಾಪುರ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಾದ ವಿನೋದ್ ಕುಮಾರ್ ತಿಳಿಸಿದರು. 1,576 ನೇ ದಿನದ ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಅನ್ನದಾಸೋಹಿ ಮಲ್ಲೇಶ್ ಸತತವಾಗಿ ನಮ್ಮೊಂದಿಗೆ ಸಂಪರ್ಕದಲ್ಲಿದ್ದು ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಶ್ಯಕತೆ ಇರುವ ಸಾಮಗ್ರಿಗಳನ್ನು ನೀಡುವಂತೆ ಮನವಿ ಮಾಡಿದ್ದರು. ಈ ಸಂಬಂಧ ಬ್ಯಾಂಕ್ […]

Continue Reading