*ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವವಿವರಗಳಿರುವ (Biodata, Resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, […]

Continue Reading

*ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್‌ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.   ಆಸಕ್ತರು 18 ರಿಂದ 45 ವರ್ಷ […]

Continue Reading

*ಅಲ್ಪಸಂಖ್ಯಾತ ಕಾನೂನು ಪದವೀಧರರಿಂದ ಕಾನೂನು ತರಬೇತಿಗಾಗಿ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ನಿಗದಿತ ಅವಧಿಯೊಳಗೆ ಕಛೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಲಾದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು ಹಾಗೂ […]

Continue Reading

*ದಶಕಗಳ ಹುಣಸೆ ಮರಗಳಿಗೆ ಕೊಡಲಿ ಪೆಟ್ಟು: ಲೇಔಟ್ ಅಂದ ಹೆಚ್ಚಿಸಲು ಹುಣಸೆ ಮರಗಳ ರೆಂಬೆ-ಕೊಂಬೆಗಳ ಕಟಾವ್ – ಚಿದಾನಂದ್ ಮೂರ್ತಿ*

ದೊಡ್ಡಬಳ್ಳಾಪುರ : ನೂರಾರು ವರ್ಷಗಳಿಂದ ಇದ್ದ ಹುಣಸೆ ಮರಗಳ ರಂಬೆ ಕೊಂಬೆಗಳನ್ನು ಕಡಿಯಲಾಗಿದೆ ಶಾಸಕರಿಗೆ     ಸೇರಿದೆ ಎನ್ನಲಾದ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದ್ದು ಪರಿಸರ ನಾಶ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ ಮರಗಳ ಈ ಸ್ಥಿತಿಕಂಡು ಪರಿಸರ ಪ್ರೇಮಿಗಳು ಆಕ್ರೋಶಗೊಂಡಿದ್ದಾರೆ. ನಗರದ ಬಸವ ಭವನದ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ ಹಾಗೂ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾಲು ಸಾಲಾಗಿ ಬೃಹದಾಕಾರವಾದ ಹುಣಸೆ ಮರಗಳು ಇದ್ದು.ಲಾವಣ್ಯ ಶಾಲೆ ಸಮೀಪ ಶಾಸಕರಿಗೆ ಸಂಬಂಧಿಸಿದೆ ಎನ್ನಲಾದ […]

Continue Reading

*ಯುವ ಸಂಚಲನ ಹೊಸ ಹೆಜ್ಜೆ : ಸರಹು ಅಭಿಯಾನದ ಉದ್ಘಾಟನಾ ಕಾರ್ಯಕ್ರಮ*

ದೊಡ್ಡಬಳ್ಳಾಪುರ : ಸರಹು ಅಭಿಯಾನದ ಮೂಲಕ ವಿನೂತನ ಕಾರ್ಯಕ್ರಮಕ್ಕೆ ಮುಂದಾದ ಯುವ ಸಂಚಲನ ಯುವಕರ ಪಡೆ, ಸಾಕ್ಷ್ಯಚಿತ್ರಗಳ ಪ್ರದರ್ಶನ ಮಾಡುವ ಮೂಲಕ ಕೆರೆ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ.   ಯುವ ಸಂಚಲನ (ರಿ.) ದೊಡ್ಡಬಳ್ಳಾಪುರ, ನಾಗರಕೆರೆ ಜೀವ ವೈವಿಧ್ಯತೆ ಸಂರಕ್ಷಣಾ ಸಮಿತಿ ಹಾಗೂ ಸಂವಿಧಾನ ಸಾಥಿ ಇವರ ಸಂಯುಕ್ತ ಆಶ್ರಯದಲ್ಲಿ.ಸರಹು ಅಭಿಯಾನದ ಮೂಲಕ ಅರ್ಕಾವತಿ ನದಿ ಜಲ ಮೂಲಗಳ ಸಂರಕ್ಷಣೆಗಾಗಿ ಸಾಕ್ಷ್ಯಚಿತ್ರಗಳ ಪ್ರದರ್ಶನ ವನ್ನು ತಾಲ್ಲೂಕಿನ ಕಾಲೇಜುಗಳಲ್ಲಿ ಮಾಡಲಾಗುವುದು ಎಂದು […]

Continue Reading

*ಕನ್ನಡಿಗರ ಮೀಸಲಾತಿಗೆ ಸರ್ಕಾರ ಹಸ್ತು : ಇದು ಟಿ.ಎ.ನಾರಾಯಣಗೌಡರ ನಿರಂತರ ಹೋರಾಟದ ಪ್ರತಿಫಲ – ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ*

ಬೆಂಗಳೂರು ಗ್ರಾಮಾಂತರ ಜಿಲ್ಲೆ : ರಾಜ್ಯದ ಕಂಪನಿಗಳು ಕೈಗಾರಿಕಾಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿ ಕಡ್ಡಾಯ ಗೊಳಿಸ ಬೇಕೆಂಬ ಕರವೇ ಹೋರಾಟಕ್ಕೆ ಜಯ ಸಿಕ್ಕಿದೆ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕುರಿತು ಸಚಿವ ಸಂಪುಟ ದಲ್ಲಿ ಅನುಮತಿ ನೀಡಿದ್ದು ಸ್ವಾಗತಾರ್ಹ ವಿಷಯವಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ತಿಳಿಸಿದ್ದಾರೆ .     ಜುಲೈ 1 ರಂದು ಕರವೇ ಟಿ ಎ ನಾರಾಯಣ ಗೌಡರ ನೇತೃತ್ವದ ಹೋರಾಟದ ಪ್ರತಿಫಲವೇ ಸರ್ಕಾರದ […]

Continue Reading

*ರಾಜೀವ್ ಗಾಂಧಿ ಬಡಾವಣೆ (ಒಂದನೇ ಹಂತ) ಜಾತ್ರಾ ಮಹೋತ್ಸವ ಕಾರ್ಯಕ್ರಮ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಭಾಗಿ*

ದೊಡ್ಡಬಳ್ಳಾಪುರ : ಪಕ್ಷಬೇಧವಿಲ್ಲದೆ, ಜಾತಿ ಭೇದವಿಲ್ಲದೆ ಭಕ್ತಿ ಭಾವದಿಂದ ಎಲ್ಲರನ್ನು ಒಟ್ಟಾಗಿ ಸೇರಿಸುವ ಜಾತ್ರಾ ಮಹೋತ್ಸವಗಳು ನಮ್ಮಲ್ಲಿ ನೋಡಬಹುದಾಗಿದೆ. ಕಾರ್ಯಕ್ರಮದ ಆಯೋಜಕರಿಗೆ ಹಾಗೂ ಬಡಾವಣೆಯ ನಿವಾಸಿಗಳಿಗೆ ಶುಭವಾಗಲಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹಾರೈಸಿದರು ನಗರದ ಒಂದನೇ ವಾರ್ಡ್ ಮೊದಲನೇ ಹಂತ ರಾಜೀವ್ ಗಾಂಧಿ ಬಡಾವಣೆ ಯ 15 ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪಂಚ ದೇವತೆಯರಾದ ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ಅಣ್ಣಮ್ಮ ದೇವಿ,ಶ್ರೀ ಸಾವಿರಕಣ್ಣಮ್ಮದೇವಿ, […]

Continue Reading

*ತೂಬಗೆರೆ l ಐತಿಹಾಸಿಕ ಭೂತ ನೆರಿಗೆ ಕಾರ್ಯಕ್ರಮಕ್ಕೆ ಅದ್ದೂರಿ ಸಿದ್ಧತೆ*

ದೊಡ್ಡಬಳ್ಳಾಪುರ(ತೂಬಗೆರೆ): ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಆಚರಣೆ ಭೂತ ನೆರಿಗೆ ಇದೇ ತಿಂಗಳ ಗುರುವಾರ ದಿನಾಂಕ 18 ರ ಮಧ್ಯಾಹ್ನ 3 ಗಂಟೆಗೆ ನಡೆಸಲು ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯಲ್ಲಿ ಭೂತ ನೆರಿಗೆ ಆಚರಣಾ ಸಮಿತಿ ಸಭೆ ನೆಡೆಸಿ ತೀರ್ಮಾನಿಸಲಾಯಿತು. ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಢ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದ್ದಾರೆ. ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ […]

Continue Reading

*ಪ್ರವಾಸಿ ಹೋಟೆಲ್ ಗಳು ಹಾಗೂ ಟ್ರಾವೆಲ್ಸ್ ಗಳು ನೋಂದಾಯಿಸಿಕೊಳ್ಳಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 16(ವಿಜಯಮಿತ್ರ):- ಕರ್ನಾಟಕ ಪ್ರವಾಸೋದ್ಯಮ (ವ್ಯಾಪಾರ ಸೌಲಭ್ಯ ಮತ್ತು ನಿಯಂತ್ರಣ) ಕೆ.ಟಿ.ಟಿ.ಎಫ್ ಕಾಯ್ದೆ, 2015 ರ ಪ್ರಕಾರ ಪ್ರವಾಸೋದ್ಯಮ ವ್ಯಾಪಾರ/ಚಟುವಟಿಕೆಗಳಾದ ಹೋಟೆಲ್ ಮತ್ತು ರೆಸಾರ್ಟ್, ರೆಸ್ಟೋರೆಂಟ್, ಟ್ರಾವೆಲ್ ಏಜೆಂಟ್ಸ್/ಟೂರ್ ಆಪರೇಟರ್, ಟೂರಿಸ್ಟ್ ಟ್ರಾನ್ಸಪೋರ್ಟ್ ಆಪರೇಟರ್, ಅಮ್ಯೂಸಮೆಂಟ್ ಪಾರ್ಕ್, ಕ್ಯಾರವನ್ ಟೂರಿಸಂ, ನಡೆಸುತ್ತಿರುವವರ ಮಾಲೀಕರು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಾಗಿರುತ್ತದೆ.   ಜಿಲ್ಲೆಯ ಪ್ರವಾಸೋದ್ಯಮ ವ್ಯಾಪಾರ/ಚಟುವಟಿಕೆಗಳಾದ ಹೋಟೆಲ್ ಮತ್ತು ರೆಸಾರ್ಟ್, ರೆಸ್ಟೋರೆಂಟ್, ಟ್ರಾವೆಲ್ ಏಜೆಂಟ್ಸ್/ಟೂರ್ ಆಪರೇಟರ್, ಟೂರಿಸ್ಟ್ ಟ್ರಾನ್ಸಪೋರ್ಟ್ ಆಪರೇಟರ್, ಅಮ್ಯೂಸಮೆಂಟ್ ಪಾರ್ಕ್, ಕ್ಯಾರವನ್ […]

Continue Reading

*ರಕ್ಷಣೆ ನೀಡುವಂತೆ ಕೋರಿ ರಘುನಾಥಪುರ ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ*

ದೊಡ್ಡಬಳ್ಳಾಪುರ : ಸ್ಥಳೀಯ ಇಂಡೇನ ಕಾರ್ಖಾನೆ ಸಂಬಂಧಿಸಿದಂತೆ ಗ್ರಾಮಸ್ಥರ ಹೇಳಿಕೆಯನ್ನು ವಿರೋಧಿಸಿ ಕೆಲವರು ರಘುನಾಥಪುರ ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಅವಹೇಳನವಾಗಿ ಮಾತನಾಡಿಕೊಳ್ಳುತ್ತಿದ್ದಾರೆ ಇದು ಊರಿನಲ್ಲಿ ಹಲವು ಊಹಾಪೋಹಗಳು ಹಬ್ಬಲು ಕಾರಣವಾಗುತ್ತಿದೆ . ಆದ್ದರಿಂದ ಗ್ರಾಮದಲ್ಲಿ ಗೊಂದಲ ವಾತಾವರಣ ಸೃಷ್ಟಿಯಾಗುತ್ತಿದೆ ಆದ್ದರಿಂದ ತಾವುಗಳು ನಮಗೆ ರಕ್ಷಣೆ ನೀಡಬೇಕೆಂದು ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಸ್ಥಳೀಯ ಗ್ರಾಮಸ್ಥರು ಮನವಿ ಸಲ್ಲಿಸಿದರು. ಈ ಹಿಂದೆ ದೊಡ್ಡಬಳ್ಳಾಪುರ ತಾಲ್ಲೂಕು, ರಘುನಾಥಪುರ ಗ್ರಾಮದಲ್ಲಿರುವ ಇಂಡೇನಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೆಮಿಕಲ್ ಫ್ಯಾಕ್ಟರಿ ವಿಷಕಾರಿ ಅನಿಲ […]

Continue Reading