*ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ*

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ನಡೆಸುವ ಕನ್ನಡ ಪ್ರವೇಶ, ಕನ್ನಡ ಕಾವ, ಕನ್ನಡ ಜಾಣ ಮತ್ತು ಕನ್ನಡ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. ಬರುವ ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದೆ.   ಪರೀಕ್ಷೆಗಳಿಗೆ ಸಂಬಂಧಿಸಿದ ಪಠ್ಯ, ವಿವರ ಹಾಗೂ ಮಾಹಿತಿಯನ್ನು ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಾ ವಿಭಾಗದಲ್ಲಿ ಪಡೆಯಬಹುದು.   2024-25ನೇ ಸಾಲಿನ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನವಾಗಿದ್ದು, 50 ರುಪಾಯಿ ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ […]

Continue Reading

*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಸಿಕ ಸಭೆ : ಹಲವು ನಿವೃತ್ತ ಶಿಕ್ಷಕರಿಗೆ ಗೌರವ ಸನ್ಮಾನ*

ದೊಡ್ಡಬಳ್ಳಾಪುರ:- ಸಭೆಯಲ್ಲಿ ಕೈಗೊಳ್ಳುವ ಹಲವು ಸಮಾಜಮುಖಿ ಆರೋಗ್ಯಕರ ಚಟುವಟಿಕೆಗಳಿಗೆ ಮಾದರಿಯಾಗಿದ್ದು,ಈ ದಿಸೆಯಲ್ಲಿ ಪ್ರತಿ ತಿಂಗಳು ಸಭೆ ಸೇರಿ ಹಿರಿಯ ಚೇತನಗಳಿಗೆ ಚೈತನ್ಯ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರುತ್ತಿರುವುದು ಶ್ಲಾಘನೀಯ ಎಂದು ಬೆಂಗಳೂರಿನ ಕನ್ನಡಿಗರ ಸ್ನೇಹ ಕೂಟದ ಸಂಸ್ಥಾಪಕ ಅಧ್ಯಕ್ಷ, ಸಾಹಿತಿ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಆರಕ್ಷಕ ರತ್ನ ರಾಂ.ಕೆ.ಹನುಮಂತಯ್ಯ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ದೊಡ್ಡಬಳ್ಳಾಪುರ ತಾಲೂಕು ಶಾಖೆ ವತಿಯಿಂದ ಆಯೋಜನೆ ಮಾಡಿದ್ದ ಮಾಸಿಕ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮೆಚ್ಚುಗೆ […]

Continue Reading

*ಜಿಲ್ಲಾಡಳಿತ ಭವನದಲ್ಲಿ ವಿಶ್ವ ಝೂನೋಸಿಸ್ ದಿನ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 06 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ “ವಿಶ್ವ ಝೂನೋಸಿಸ್ ದಿನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಣೆ ಮಾಡಲಾಯಿತು. 1885 ರ ಜುಲೈ 06 ರಂದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಝೂನೋಟಿಕ್ ಕಾಯಿಲೆಯಾದ ರೇಬಿಸ್ ರೋಗಕ್ಕೆ ಮೊದಲು ಲಸಿಕೆಯನ್ನು ಸರ್.ಲೂಯಿಸ್ ಪಾಶ್ಚರ್ ರವರು ಯಶಸ್ವಿಯಾಗಿ ನೀಡಿದ […]

Continue Reading

*ಬೆ.ಗ್ರಾಂ.ಜಿಲ್ಲೆ: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 6 (ವಿಜಯಮಿತ್ರ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ ರಾಂ ರವರ 38 ನೇ ಪುಣ್ಯಸ್ಮರಣೆ ಆಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಿಸಲಾಯಿತು.   ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಡಾ.ಬಾಬು ಜಗಜೀವನ ರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ […]

Continue Reading

*ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜುರವರಿಗೆ ಕರ್ನಾಟಕ ರಾಜರತ್ನ ಪ್ರಶಸ್ತಿ*

ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು ” ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗ ದೊಂದಿಗೆ, ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ” ಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ “ಪೋಟೋ ಟುಡೇ ವಸ್ತು ಪ್ರದರ್ಶನದಲ್ಲಿ “ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ರಾಜು ರವರಿಗೆ ಕನ್ನಡ ಚಿತ್ರರಂಗದ ನಟ ಪ್ರತಮ್ ಅವರು […]

Continue Reading

*ದಲಿತರ ಧ್ವನಿಯಾಗಿ ಶ್ರಮಿಸಿದ ಡಾ.ಬಾಬು ಜಗಜೀವನ್ ರಾಂ ರವರ ಜೀವನ ಶೈಲಿಯೇ ನಮಗೆ ಆದರ್ಶ – ರಾಮು ನೇರಳೆಘಟ್ಟ*

ದೊಡ್ಡಬಳ್ಳಾಪುರ : ದೇಶ ಕಂಡ ಅಪ್ರತಿಮ ನಾಯಕ, ಹಸಿರು ಕ್ರಾಂತಿ ಹರಿಕಾರ ಮಾಜಿ ಉಪಪ್ರಧಾನಿಗಳಾದ ಡಾ.ಬಾಬು ಜಗಜೀವನ್ ರಾಂ ದಲಿತ ಸಮುದಾಯಕಷ್ಟೇ ಅಲ್ಲದೆ ದುಡಿಯುವ ಪ್ರತಿ ವರ್ಗಕ್ಕೂ ಬೆಂಬಲವಾಗಿ ನಿಂತಿದ್ದ ವ್ಯಕ್ತಿತ್ವ ಅವರದು. ಅವರ ಹೋರಾಟದ ಜೀವನ ಶೈಲಿಯೇ ನಮ್ಮೆಲ್ಲರಿಗೂ ಸ್ಪೂರ್ತಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದೊಡ್ಡಬಳ್ಳಾಪುರ ತಾಲ್ಲೂಕು ಸಂಚಾಲಕರಾದ ರಾಮಮೂರ್ತಿ ( ರಾಮು ನೇರಳೆಘಟ್ಟ) ತಿಳಿಸಿದರು. ಡಾ. ಬಾಬು ಜಗಜೀವನ್ ರಾಮ್ ಅವರ 38ನೇ ಪುಣ್ಯಸ್ಮರಣೆ ಅಂಗವಾಗಿ ನಗರದ ಹಳೇ ಬಸ್ ನಿಲ್ದಾಣದ […]

Continue Reading

*ದೊಡ್ಡಬಳ್ಳಾಪುರ l ನಗರಪೊಲೀಸ್ ಠಾಣಾ ನೀರಿಕ್ಷಕರಾಗಿ ಎ.ಅಮರೇಶ್ ಗೌಡ ಅಧಿಕಾರ ಸ್ವೀಕಾರ : ಅಧಿಕಾರ ಹಸ್ತಾಂತರಿಸಿದ ಇನ್ಸ್ಪೆಕ್ಟರ್ ದಯಾನಂದ್*

ದೊಡ್ಡಬಳ್ಳಾಪುರ : ಲೋಕಸಭಾ ಚುನಾವಣೆ ನಿಮಿತ್ತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದ ದಕ್ಷ ಪೊಲೀಸ್ ಅಧಿಕಾರಿಗಳಾದ ಎ.ಅಮರೇಶ್ ಗೌಡ ರವರು ಮತ್ತೆ ದೊಡ್ಡಬಳ್ಳಾಪುರ ನಗರ ಠಾಣಾ ನಿರೀಕ್ಷಕರಾಗಿ ಇಂದು (ಜುಲೈ04) ಮತ್ತೆ ಅಧಿಕಾರ ಸ್ವೀಕರಿಸಿದರು.   ನಗರ ಠಾಣಾ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ ಇನ್ಸ್ಪೆಕ್ಟರ್ ದಯಾನಂದ ಅವರು ನೂತನ ನೀರಿಕ್ಷಕರಾದ ಎ.ಅಮರೇಶ್ ಗೌಡ ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

*ಹಾಡೋನಹಳ್ಳಿ ಪಂಚಾಯಿತಿ ಅಧ್ಯಕ್ಷರ ಚುನಾವಣೆ l ನೂತನ ಅಧ್ಯಕ್ಷರಾಗಿ ಮಂಜುಳಾಪುರುಷೋತ್ತಮ್ ಅವಿರೋಧ ಆಯ್ಕೆ*

ದೊಡ್ಡಬಳ್ಳಾಪುರ : ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರ ಚುನಾವಣೆ ನೆಡೆದಿದ್ದು. ನೂತನ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಂಜುಳಾ ಪುರುಷೋತ್ತಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂನ್ 04 ರಂದು ನೆಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವ ಸದಸ್ಯರು ಅವಿರೋಧವಾಗಿ ಶ್ರೀಮತಿ ಮಂಜುಳಾಪುರುಷೋತ್ತಮ್ ರವರನ್ನು ಆಯ್ಕೆ ಮಾಡಿದ್ದಾರೆ. ನೂತನ ಅಧ್ಯಕ್ಷರಿಗೆ ಸ್ಥಳೀಯ ಜೆಡಿಎಸ್ ಮುಖಂಡರಾದ ಅಪ್ಪಯಣ್ಣ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಮೇಳೆಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಿವಾಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ […]

Continue Reading

*KRS ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ನೇಮಕ : ಬೆಂಗಳೂರು ಗ್ರಾಮಾಂತರ ಪಕ್ಷದ ನೂತನ ಸಾರಥಿಯಾಗಿ ಬಿ.ಶಿವಶಂಕರ್ ಅವಿರೋಧ ಆಯ್ಕೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಜಯ ಮಿತ್ರ ವರದಿ : ಸಮಾಜದ ಎಲ್ಲೆಡೆ ಭ್ರಷ್ಟಾಚಾರ ತಂಡದವಾಡುತ್ತಿದ್ದು ಭ್ರಷ್ಟಾಚಾರ ರಹಿತ ರಾಜಕಾರಣ , ಪ್ರಾಮಾಣಿಕ ಜನಸೇವೆ ನನ್ನ ಜೀವನದ ಮುಖ್ಯ ಗುರಿಯಾಗಿದೆ.ಪ್ರತಿಯೊಂದು ಹಳ್ಳಿಗಳಲ್ಲೂ ವಿಶೇಷ ಅಭಿಯಾನಗಳನ್ನು ಆಯೋಜನೆ ಮಾಡುವ ಮೂಲಕ ಜನರಿಗೆ ಚೈತನ್ಯ ತುಂಬಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಿಸುವುದೇ ನನ್ನ ಗುರಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೆಆರ್‌ಎಸ್ ಪಕ್ಷದ ನೂತನ ಅಧ್ಯಕ್ಷ ಶಿವಶಂಕರ್ ತಿಳಿಸಿದರು .   ಬುಧವಾರ ( ಜು. 3 )ದಂದು ನೆಲಮಂಗಲ ತಾಲೂಕಿನ ಪ್ರವಾಸಿ […]

Continue Reading

*ಹಿಂದುಳಿದ ವರ್ಗಗಳಿಗೆ ಉನ್ನತ ಸಾಧನೆಯ ಮಹತ್ವಾಕಾಂಕ್ಷೆ ಅಗತ್ಯ: ದಯಾನಂದಪುರಿ ಸ್ವಾಮೀಜಿ*

*ದೊಡ್ಡಬಳ್ಳಾಪುರ:* ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಾಧನೆ ಮಾಡುವ ಉನ್ನತ ಹಂತದ ಹುದ್ದೆಗಳನ್ನು ಹೊಂದುವ ಮಹತ್ವಾಕಾಂಕ್ಷೆಯನ್ನು ಹೊಂದಬೇಕು ಎಂದು ಹಂಪಿ ಹೇಮಕೂಟ ಗಾಯತ್ರಿ ಪೀಠಾಧ್ಯಕ್ಷ ದಯಾನಂದಪುರಿ ಸ್ವಾಮೀಜಿ ಹೇಳಿದರು. ಇಲ್ಲಿನ ಪಿಸಿವಿ ಚಾರಿಟಬಲ್ ಟ್ರಸ್ಟ್‌ನ ನೇತೃತ್ವದಲ್ಲಿ ನಡೆದ 2024ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಸಮಕಾಲೀನ ಕಾಲಘಟ್ಟದಲ್ಲಿ ತಾಂತ್ರಿಕ ಜ್ಞಾನ ಮತ್ತು ಕೌಶಲವನ್ನು ಉತ್ತೇಜಿಸುವ ಕೆಲಸ ಆಗಬೇಕು. ಸಾಧನೆ ನಿಂತ ನೀರಾಗಬಾರದು. ಅದು ಹರಿಯುವ […]

Continue Reading