*ಜಿಲ್ಲಾ ಬಿಜೆಪಿ ವತಿಯಿಂದ ಕೈ ನಾಯಕರ ವಿರುದ್ಧ ಪ್ರತಿಭಟನೆ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ*

ದೊಡ್ಡಬಳ್ಳಾಪುರ ಆಗಸ್ಟ್ 22( ವಿಜಯಮಿತ್ರ) : ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಾಗೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ಕಚೇರಿ ವೃತ್ತದಲ್ಲಿ ಕಾಂಗ್ರೆಸ್ ನಾಯಕ ಐವಾನ್ ಡಿಸೋಜರ ಪ್ರತಿಕೃತಿಯನ್ನು ದಹಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ವ್ಯಕ್ತಿಗಳು ನೀಡಿರುವ ದೂರುಗಳ ಬಗ್ಗೆ […]

Continue Reading

*ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ : ಸಮಸ್ಯೆ ಬಗೆಹರಿಯದಿದ್ದರೆ ನಗರಸಭೆ ವಿರುದ್ಧ ಉಗ್ರ ಹೋರಾಟ ಎಚ್ಚರಿಕೆ.*

ದೊಡ್ಡಬಳ್ಳಾಪುರ ಆಗಸ್ಟ್ 22(ವಿಜಯಮಿತ್ರ) : ನಾವು 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿದ್ದರೂ ಮೂಲಸೌಕರ್ಯಕ್ಕಾಗಿ ಪ್ರತಿಭಟಿಸುವಂತಹ ಪರಿಸ್ಥಿತಿಯಲ್ಲಿರುವುದು ವಿಪರ್ಯಾಸ ಎಂದು ಕರವೇ ಪ್ರವೀಣ್‌ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ತಿಳಿಸಿದರು. ನಗರಸಭೆಯ ಮುಂಭಾಗದಲ್ಲಿ ಗುರುವಾರ ನಗರಸಭೆ ದುರಾಡಳಿತ, ಒಳಚರಂಡಿ ಅವ್ಯವಸ್ಥೆ ಹಾಗೂ ಮಳೆ ನೀರು ಹರಿದುಹೋಗಲು ಸರಿಯಾದ ವ್ಯವಸ್ಥೆ ಇಲ್ಲದ್ದನ್ನು ಖಂಡಿಸಿ ಕರವೇ ಪ್ರವೀಣ್ ಶೆಟ್ಟಿ ಬಣ್ಣದ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು ನಗರಸಭೆ ವ್ಯಾಪ್ತಿಯ ಜನ ಸಂಖ್ಯೆಗೆ ಪೂರಕವಾಗಿ ನಗರಸಭೆ ಮೂಲಸೌಕರ್ಯ ವ್ಯವಸ್ಥೆ […]

Continue Reading

*ಪ್ರಾದೇಶಿಕ ಸಭೆಯ ಮುಖ್ಯ ಉದ್ದೇಶ ರೈತರ ಕುಂದುಕೊರತೆ ಸರಿಪಡಿಸುವುದು – ಬಿ ಸಿ ಆನಂದ್ ಕುಮಾರ್*

ದೊಡ್ಡಬಳ್ಳಾಪುರ ಆಗಸ್ಟ್ 21 ( ವಿಜಯಮಿತ್ರ) : ಪ್ರಾದೇಶಿಕವಾಗಿ ಹಾಲು ಉತ್ಪಾದಕರ ಕುಂದು ಕೊರತೆಗಳನ್ನು ಅರಿತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರ ಪ್ರಾದೇಶಿಕ ಸಭೆ ಕರೆಯಲಾಗಿದೆ ಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು. ಇಂದು ತಾಲೂಕಿನ ಶಿಬಿರ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಾದೇಶಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಪ್ರಾದೇಶಿಕವಾಗಿ ಹಾಲು ಉತ್ಪಾದಕ ರೈತರಲ್ಲಿ ಕೆಲ ಸಮಸ್ಯೆಗಳಿದ್ದು […]

Continue Reading

*ಶ್ರೀ ರಾಘವೇಂದ್ರಸ್ವಾಮಿಗಳ 353ನೇ ಆರಾಧನಾ ಮಹೋತ್ಸವ*

ದೊಡ್ಡಬಳ್ಳಾಪುರ ಆಗಸ್ಟ್ 21( ವಿಜಯಮಿತ್ರ ) : ತಾಲೂಕಿನ ಬಾಶೆಟ್ಟಹಳ್ಳಿ ವ್ಯಾಪ್ತಿಯ ವಿಜಯನಗರದಲ್ಲಿರುವ ಶ್ರೀ ಕ್ಷೇತ್ರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರಸ್ವಾಮಿಗಳ 353ನೇ ಆರಾಧನಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಪ್ರಹ್ಲಾದ ದೇವರ ವಿಶೇಷ ರಥಯಾತ್ರೆ ನಡೆಸಲಾಯಿತು . ಈ ಕುರಿತು ದೇವಾಲಯದ ಪ್ರಧಾನ ಅರ್ಚಕ ಗುರುರಾಜ್ ಆಚಾರಿ ಮಾತನಾಡಿ ಈ ಬೃಂದಾವನವು 48ಸಾಲಿಗ್ರಾಮಗಳಿಂದ ನಿರ್ಮಿಸಲ್ಪಟ್ಟಿದೆ.ಇಂದು ವಿಶೇಷ ದಿನವಾಗಿದ್ದು ಮಂತ್ರಾಲಯ ಪ್ರಭು ಶ್ರೀ ರಾಘವೇಂದ್ರರ ಮಧ್ಯಾರಾಧನೆ ದಿನವಾಗಿದೆ. ಮೂರು ದಿನಗಳ ಸತತ ಆರಾಧನೆಯಲ್ಲಿ […]

Continue Reading

*ಬೆ.ವಿ.ಕಂ ಕುಂದು ಕೊರತೆ ಸಭೆ : ಶಾಸಕರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರದ ಭರವಸೆ*

ದೊಡ್ಡಬಳ್ಳಾಪುರ ಆಗಸ್ಟ್ 21(ವಿಜಯಮಿತ್ರ ) : ವಿನೂತನ ಯೋಜನೆಗಳನ್ನು ರೂಪಿಸುವ ಮೂಲಕ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ ಹಾಗೂ ಸಮಸ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಬೇಕಾಗುವ ಅನುಕೂಲಕರ ವಾತಾವರಣವನ್ನು ಕಲ್ಪಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು. ನಗರ ಭಾಗದ ಬೆಸ್ಕಾಂ ಕಚೇರಿ ಮುಂಭಾಗ ಆಯೋಜನೆ ಮಾಡಲಾಗಿದ್ದ ಕುಂದುಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ತಾಲೂಕಿನಲ್ಲಿ ಕೇವಲ ಗ್ರಾಮಾಂತರವಷ್ಟೇ ಅಲ್ಲದೇ ನಗರ ಭಾಗದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದು . ನೇಕಾರಿಕೆ ಉದ್ಯಮ ನಗರ ಭಾಗದಲ್ಲಿ […]

Continue Reading

*ರಾಜ್ಯಪಾಲರನ್ನು ನಿಂದಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ದೊಡ್ಡಬಳ್ಳಾಪುರ ನಗರ ಮೋರ್ಚಾ ವತಿಯಿಂದ ಪ್ರತಿಭಟನೆ*

ದೊಡ್ಡಬಳ್ಳಾಪುರ ಆಗಸ್ಟ್ 20 (ವಿಜಯಮಿತ್ರ) : ಮಂಗಳೂರಿನಲ್ಲಿ ಮಾನ್ಯ ಘನತೆವೆತ್ತ ರಾಜ್ಯಪಾಲರನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ ರವರು ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸುವ ಮೂಲಕ ಕರ್ನಾಟಕದ ಗೌರವವನ್ನು ಹರಾಜು ಹಾಕಿದ್ದಾರೆ. ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸುವ ರಾಜ್ಯಪಾಲರನ್ನು ಕುರಿತು ಈ ರೀತಿಯ ಅವಹೇಳನಕಾರಿ ಹೇಳಿಕೆ ಸಲ್ಲದು ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಆಕ್ರೋಶ ವ್ಯಕ್ತಪಡಿಸಿದರು. ನಗರದ ತಾಲೂಕು ಕಚೇರಿ ವೃತ್ತದಲ್ಲಿ ಭ್ರಷ್ಟರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ […]

Continue Reading

*ಜಿಲ್ಲಾಡಳಿತ ಭವನದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಸರಳ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 20, 2024(ವಿಜಯ ಮಿತ್ರ ):- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು‌.   ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಬ್ರಹ್ಮಶ್ರೀ ನಾರಾಯಣಗುರು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದರು.   ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Continue Reading

*ಸಿ.ಸಿ.ಟಿ.ವಿ ಅಳವಡಿಕೆ ಮತ್ತು ರಿಪೇರಿ ಉಚಿತ ತರಬೇತಿಗೆ ಆಸಕ್ತರು ಅರ್ಜಿ ಸಲ್ಲಿಸಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 20, 2024(ವಿಜಯ ಮಿತ್ರ ): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಸಿ.ಸಿ.ಟಿ.ವಿ ಅಳವಡಿಕೆ ಮತ್ತು ರಿಪೇರಿ ಉಚಿತ ತರಬೇತಿಯು 18 ಅಕ್ಟೋಬರ್ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಆಸಕ್ತ 18 ರಿಂದ 45 […]

Continue Reading

*ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದ ದೇವರಾಜ ಅರಸು ರವರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 20, 2024 (ವಿಜಯಮಿತ್ರ):- ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶೋಷಿತರ, ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕರು, ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.   ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ […]

Continue Reading

*ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌ ಮತ್ತು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆ*

ದೊಡ್ಡಬಳ್ಳಾಪುರ ಆಗಸ್ಟ್ 20( ವಿಹಾಯಮಿತ್ರ) : ತಾಲ್ಲೂಕಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣಗುರು, ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸ್‌ ಹಾಗೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆಯನ್ನು ಆರ್.ಎಲ್.ಜೆ.ಐ.ಟಿ ಕ್ಯಾಂಪಸ್‌ನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.   ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಗಣ್ಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮೂವರು ಮಹನೀಯರು ತಮ್ಮ ಕಾರ್ಯವ್ಯಾಪ್ತಿ ಮತ್ತು ಆಲೋಚನಾ ಬದ್ದತೆಯಿಂದ ದೇಶದ ಭವಿಷ್ಯವನ್ನು ಸದೃಢಗೊಳಿಸಿದ್ದಾರೆ. ಹಿಂದುಳಿದ ವರ್ಗಗಳ ದನಿಯಾಗಿ, ಯುವಜನರ ಆಶೋತ್ತರಗಳನ್ನು […]

Continue Reading