*ಪ್ರಾಚ್ಯವಸ್ತು ಸಂಗ್ರಹಾಲಯದ ಉದ್ಘಾಟನಾ ಕಾರ್ಯಕ್ರಮ : ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ಶಿಂಧೆ ಅವಿನಾಶ್ ಭಾಗಿ*

ಲಿಂಗಸಗೂರು: ಪ್ರಾಚ್ಯವಸ್ತುಗಳು ನಮ್ಮ ನಾಡಿನ ಸಾಂಸ್ಕೃತಿಕ ಇತಿಹಾಸವನ್ನು ಸಾರುತ್ತಿದ್ದು ಅಂತಹ ಪಳಿಯುಳಿಕೆಗಳು ವಿನಾಶದ ಅಂಚಿನಲ್ಲಿದ್ದು ಅವುಗಳನ್ನು ರಕ್ಷಣೆ ಮಾಡುವುದರಿಂದ ಮುಂದಿನ ಪೀಳಿಗೆ ಇತಿಹಾಸ ಅರಿಯಲು ಸಹಾಯಕವಾಗುತ್ತದೆ ಎಂದು ಸಹಾಯಕ ಆಯುಕ್ತರಾಗಿದ್ದ ಶಿಂಧೆ ಅವಿನಾಶ್ ಅಭಿಪ್ರಾಯಪಟ್ಟರು .   ಪಟ್ಟಣದ ಸಹಾಯಕ ಆಯುಕ್ತರ ಕಛೇರಿ ಸಮೀಪದ ಕೊಠಡಿಯೊಂದರಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಾಚ್ಯವಸ್ತುಗಳ ಸಂಗ್ರಹ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಮ್ಮ ನಾಡಿನ ಇತಿಹಾಸವನ್ನು ಗುರುತಿಸಲು ಹಿಂದಿನ ಪಳಿಯುಳಿಕೆ ನಮಗೆ ಮುಖ್ಯವಾದ ಆಧಾರವಾಗಿದ್ದು ಅಂತಹ ಪಳಿಯುಳಿಕೆಗಳು ವಿನಾಶದ ಅಂಚಿನಲ್ಲಿವೆ […]

Continue Reading

*ಅರಳು ಮಲ್ಲಿಗೆ ಪಂಚಾಯಿತಿ ಚುನಾವಣೆ : ನೂತನ ಅಧ್ಯಕ್ಷರಾಗಿ ನಿರ್ಮಲ ಸಿದ್ದೇಗೌಡ ಉಪಾಧ್ಯಕ್ಷರಾಗಿ ದ್ರುವ ಕುಮಾರ್ ಆಯ್ಕೆ*

ದೊಡ್ಡಬಳ್ಳಾಪುರ ಆಗಸ್ಟ್ 02 ( ವಿಜಯಮಿತ್ರ) : ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.   ನೂತನ ಅಧ್ಯಕ್ಷರಾಗಿ ನಿರ್ಮಲಮ್ಮ ಹಾಗೂ ಉಪಾಧ್ಯಕ್ಷರಾಗಿ ಡಿ.ಆರ್.ಧೃವಕುಮಾರ್ ಆಯ್ಕೆಯಾಗಿದ್ದಾರೆ.   ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮಿಸಲಾತಿ ಬದಲಾದ ಹಿನ್ನಲೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅರಳು ಮಲ್ಲಿಗೆ ಗ್ರಾಮಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ದ್ರಾಕ್ಷಾಯಿಣಿ, ಸಹಾಯಕ ಚುನಾವಣೆ ಅಧಿಕಾರಿ […]

Continue Reading

*ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2023-24ರ ವಾರ್ಷಿಕ ಸಭೆ*

ದೊಡ್ಡಬಳ್ಳಾಪುರ ಆಗಸ್ಟ್ 02 ( ವಿಜಯಮಿತ್ರ) : ತಾಲ್ಲೂಕಿನ ತೂಬಗೆರೆ ಸಮುದಾಯದ ಭವನದಲ್ಲಿ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2023-24 ರ ವಾರ್ಷಿಕ ಸಭೆ ಅಧ್ಯಕ್ಷ ಕೆ.ಬಿ.ನಾಗರಾಜು ಸಮ್ಮುಖದಲ್ಲಿ ನಡೆಯಿತು,   ಕಾರ್ಯಕ್ರಮದ ಪ್ರಾರಂಭವಾಗುತ್ತಿದ್ದಂತೆ ಮೊದಲು ಮಕ್ಕಳು ದೇವರ ಪ್ರಾರ್ಥನೆ ಮಾಡಿ ನಂತರ ಮುಖ್ಯಕಾರ್ಯನಿರ್ವಹಣಾಧಿಕಾರಿ ಎ. ಜಗದೀಶ್ ವಾರ್ಷಿಕ ಸಭೆ ಮಂಡಿಸಿ ಸಂಘಕ್ಕೆ 3 ಲಕ್ಷ 23 ಸಾವಿರ ಲಾಭ ಗಳಿಸಿದೆ ಎಂದು ಹೇಳಿದರು,   ವಾರ್ಷಿಕ ಸಭೆಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಜಿಲ್ಲಾ […]

Continue Reading

*ದಲಿತರ ಭೂಕಬಳಿಕೆ ಆರೋಪ : ಹೋರಾಟಕ್ಕೆ ಮುಂದಾದ ದಲಿತ ಸಂಘಟನೆಗಳ ಒಕ್ಕೂಟ*

ದೊಡ್ಡಬಳ್ಳಾಪುರ ಆಗಸ್ಟ್ 02 ( ವಿಜಯಮಿತ್ರ) : ತಾಲೂಕು ಹೆಗ್ಗಡಿಹಳ್ಳಿಯ ಸರ್ವೆ ನಂಬರ್ 102ರ 5 ಎಕರೆ 3 ಗುಂಟೆ ಜಾಗದ ಕುರಿತಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಬಾಕಿ ಇದ್ದರೂ ಮುನಿನಾರಾಯಣಮ್ಮ ಅವರಿಗೆ ಸೇರಿದ ಜಾಗವನ್ನು ಬಲಾಡ್ಯರು ಕಬಳಿಸುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿ ತಮಟೆ ಬಾರಿಸುವ ಮೂಲಕ ವಿಶೇಷ ರೀತಿಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸದರಿ ಜಾಗದಲ್ಲಿ ಪ್ರತಿಭಟನೆ ನಡೆಸಲಾಯಿತು . ಕಣಿವೇಪುರದ ದಿವಗಂತ ಮುನಿಯಪ್ಪನವರ ಮೊದಲ ಹೆಂಡತಿ ಚಿಕ್ಕತಿಮ್ಮಕ್ಕನವರ ಒಬ್ಬಳೇ ಮಗಳಾದ ಮುನಿನಾರಾಯಣಮ್ಮ, ಅವರ […]

Continue Reading

*ಕನ್ನಡಿಗರ ಉದ್ಯೋಗ ವಿಚಾರದಲ್ಲಿ ರಾಜಿಯಿಲ್ಲ ಶೇಕಡ 80ರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯ : ಪ್ರಸ್ತುತ ಫಾಕ್ಸ್ಕಾನ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಬಗ್ಗೆ ಊಹಾಪೋಹಗಳನ್ನು ಕುರಿತು ಕರವೇ ಪುರುಷೋತ್ತಮ್ ಗೌಡ ಪ್ರತಿಕ್ರಿಯೆ*

ದೊಡ್ಡಬಳ್ಳಾಪುರ ಆಗಸ್ಟ್ 01 ( ವಿಜಯಮಿತ್ರ) : ನಿರಂತರ ಹೋರಾಟಗಳನ್ನು ಮಾಡುವ ಮೂಲಕ ಕನ್ನಡಿಗರಿಗೆ ಉದ್ಯೋಗದಲ್ಲಿ ಶೇಕಡ 80ರಷ್ಟು ಮೀಸಲಾತಿ ನೀಡಲೇಬೇಕು ಹಾಗೂ ಸರೋಜಿನಿ ಮಹಿಷಿ ವರದಿ ಜಾರಿಯಾಗಲೇಬೇಕು ಎಂದು ಟಿ ಎ ನಾರಾಯಣಗೌಡರ ನೇತೃತ್ವದಲ್ಲಿ ಒತ್ತಾಯಿಸಿದ್ದು . ಉದ್ಯೋಗದ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯವಾದಲ್ಲಿ ಕರವೇ ನಾರಾಯಣ ಗೌಡರ ಬಣ ಸುಮ್ಮನಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ತಿಳಿಸಿದ್ದಾರೆ.   ಈ ಕುರಿತು ಮಾತನಾಡಿದ ಅವರು ಇತ್ತೀಚಿಗೆ ಗ್ರಾಮಾಂತರ ಜಿಲ್ಲೆಯಲ್ಲಿ ಹಲವಾರು ಕಾರ್ಖಾನೆಗಳು ಸ್ಥಾಪನೆಯಾಗುತ್ತಿದ್ದು […]

Continue Reading

*ಡಾ.ಮಹಾಂತ ಶಿವಯೋಗಿ ಜನ್ಮದಿನ” ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 01 (ವಿಜಯಮಿತ್ರ):- ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಯುವಜನತೆ ದುಷ್ಚಟಗಳಿಂದ ದೂರವಿದ್ದು, ಒಳ್ಳೆಯ ಶಿಕ್ಷಣಾಭ್ಯಾಸ ಪಡೆದು ಜೀವನ ರೂಢಿಸಿಕೊಳ್ಳಿ ಎಂದು ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ […]

Continue Reading

*ದೊಡ್ಡಬಳ್ಳಾಪುರ : ಶಾಸಕರ ನೇತೃತ್ವದಲ್ಲಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಮತ್ತು ಅಂಗನವಾಡಿಗಳಿಗೆ ಅಗತ್ಯ ಪರಿಕರಗಳ ವಿತರಣೆ*

ದೊಡ್ಡಬಳ್ಳಾಪುರ ಆಗಸ್ಟ್ 01( ವಿಜಯಮಿತ್ರ) : ಕೇಂದ್ರ ಪುರಸ್ಕೃತ ಪೋಷಣ್ ಅಭಿಯಾನ್ ಯೋಜನೆ ಅಡಿಯಲ್ಲಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಫೋನ್ ಮತ್ತು ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಬೆಳವಣಿಗೆಗೆ ಅವಶ್ಯಕವಿರುವ ಅಗತ್ಯ ಪರಿಕರಗಳ ವಿತರಣೆ ಮಾಡಲಾಯಿತು. ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಕಾರದೊಂದಿಗೆ ದೊಡ್ಡಬಳ್ಳಾಪುರ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರಾದ ಧೀರಜ್ ಮುನಿರಾಜು ದೀಪ ಬೆಳಗಿಸುವ ಮೂಲಕ […]

Continue Reading

*ವಿಕಲಚೇತನರ ಆರೈಕೆಗಾಗಿ 1000 ರೂಗಳ ಪ್ರೋತ್ಸಾಹ ಧನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 01(ವಿಜಯಮಿತ್ರ):-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಪ್ರತಿ ಮಾಹೆ(ತಿಂಗಳು) 1000 ರೂಪಾಯಿಗಳ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.   ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನರು ಅವರ ಆರೈಕೆದಾರರು ಅಗತ್ಯ ದಾಖಲಾತಿಗಳೊಂದಿಗೆ, ವಿಆರ್‌ಡಬ್ಲ್ಯೂ/ಯುಆರ್‌ಡಬ್ಲ್ಯೂ/ಎಂಆರ್ಡಬ್ಲ್ಯೂ/ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಆಗಸ್ಟ್ […]

Continue Reading

*ಸರೋಜಿನಿ ಮಹಿಷಿ ವರದಿ ಆಧರಿಸಿ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಶೇಕಡ 80% ರಷ್ಟು ಉದ್ಯೋಗ ನೀಡಿ – ಎ. ನಂಜಪ್ಪ*

ದೊಡ್ಡಬಳ್ಳಾಪುರ ( ವಿಜಯಮಿತ್ರ) : ಕನ್ನಡಿಗರಿಗೆ ಉದ್ಯೋಗದ ವಿಷಯಗಳನ್ನು ಆಧರಿಸಿ ಫಾಕ್ಸ್ಕಾನ್ ಕೈಗಾರಿಕೆ ಸಂಸ್ಥೆಯಲ್ಲಿ ಶೇಕಡ 80 %ರಷ್ಟು ಉದ್ಯೋಗಗಳನ್ನು ಸ್ಥಳಿಯ ಕನ್ನಡಿಗರಿಗೆ ಮೀಸಲಿಟ್ಟು, ಈ ನೆಲ ಜಲ ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವಂತೆ ತಿಳಿಸಲಾಗಿದೆ ಹಾಗೂ ಈ ಕುರಿತು ಕಾರ್ಖಾನೆಗೆ ಮನವಿ ಸಲ್ಲಿಸಲಾಯಿತು ಎಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎ. ನಂಜಪ್ಪ ತಿಳಿಸಿದರು. ಈ ಕುರಿತು ಮಾತನಾಡಿದ ಅವರು ಕರ್ನಾಟಕದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಪಡೆದು ಸ್ಥಾಪಿಸುವ ಕೈಗಾರಿಕೆ. ಮತ್ತು […]

Continue Reading