ಕಿತ್ತೂರು ರಾಣಿ ಚೆನ್ನಮ್ಮ  ತಮ್ಮ‌  ವ್ಯಕ್ತಿತ್ವದಿಂದಲೇ  ಎಲ್ಲರಿಗೂ ಪ್ರೇರಣೆಯಾಗಿದ್ದಾರೆ – ಪ್ರೊ.ಕೆ.ಆರ್.ರವಿಕಿರಣ್

ದೊಡ್ಡಬಳ್ಳಾಪುರ : ಭಾರತೀಯ ಮಹಿಳೆಯರು  ಹಿಂದಿನಿಂದಲೂ   ಸಾಧಕರ ಸಾಲಿನಲ್ಲಿ  ತಮ್ಮದೇ  ಹೆಜ್ಜೆ ಗುರುತು ಉಳಿಸಿದ್ದಾರೆ.  ಇಂದಿಗೂ ಸಹ  ಬಾಹ್ಯಾಕಾಶಯಾನದಲ್ಲಿ  ಸಾಧನೆ ಮಾಡಿರುವ  ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ   ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ.  ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ ಎಂದುಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕಿತ್ತೂರು ರಾಣಿ […]

Continue Reading

ಅ. 24 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ : ನ.2 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಹಾಸನ : ಹಾಸನಾಂಬೆ ದೇವಾಲಯದ ಬಾಗಿಲು ಅಕ್ಟೋಬರ್ 24 ರಂದು ತೆರೆದು ನ.3 ರಂದು ಮುಚ್ಚಲಾಗುವುದು. ಅ.25ರಿಂದ ನ.2 ರವರೆಗೆ ಮಾತ್ರ ಸಾರ್ವಜನಿಕರಿಗೆ ದರ್ಶನದ ಅವಕಾಶ ಕಲ್ಪಿಸಿದ್ದು, ಬಾಗಿಲು ತೆರೆಯುವ ಮತ್ತು ಮುಚ್ಚುವ ದಿನ ದೇವಿಯ ದರ್ಶನ ಅವಕಾಶವಿರುವುದಿಲ್ಲ ಎಂದು ದೇವಾಲಯದ ಮೂಲಗಳು ತಿಳಿಸಿವೆ.   ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ನಾಳೆ(ಅ 24)ಯಿಂದ ತೆರೆಯುವ ಮೂಲಕ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ . ಹಾಸನಾಂಬ ದೇವಾಲಯಕ್ಕೆ ವರ್ಷದಿಂದ […]

Continue Reading

ಜಿಲ್ಲಾಡಳಿತ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ‌ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,‌ ಅಕ್ಟೋಬರ್ 23,:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಕಿತ್ತೂರು ರಾಣಿ ಚೆನ್ನಮ್ಮ’ನವರ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾವಿಭಾ ರಾಥೋಡ್, ಯುವ ಸಬಲೀಕರಣ ಮತ್ತು […]

Continue Reading

ನಟ ಸುದೀಪ್ ಕುಟುಂಬಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್

ಕನ್ನಡದ ಹೆಸರಾಂತ ನಟ ಸುದೀಪ್ ಅವರ ತಾಯಿ ನಿಧನರಾದ ಹಿನ್ನಲೆ ಕೋಟ್ಯಾಂತರ ಅಭಿಮಾನಿಗಳು ಹೊಂದಿರುವ ನಟ ಸುದೀಪ್ ರವರಿಗೆ ದೇಶ ವಿದೇಶಗಳಿಂದ ಹಲವು ಗಣ್ಯರು ಸಂತಾಪ ಸೂಚಿಸುವ ಮೂಲಕ ತಮ್ಮ ಭಾವನೆ ವ್ಯಕ್ತಪಡಿಸಿದ್ದರು.   ಈಗ ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್ ರವರು ಪತ್ರ ಬರೆಯುವ ಮೂಲಕ ನಟ ಸುದೀಪ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.   ಪಾತ್ರದಲ್ಲಿ ಏನಿದೆ…???   ಖ್ಯಾತ ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ […]

Continue Reading

ಜಿಲ್ಲೆಯಾದ್ಯಂತ ನಾಳೆ ಎಲ್ಲಾ ಶಾಲೆಗಳಿಗೆ ರಜೆ : ರಜೆ ಘೋಷಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಬೆಂಗಳೂರು ನಗರ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಮಕ್ಕಳು ಪರದಾಡುವಂತಾಗಿದೆ ಇದನ್ನು ಮನಗಂಡ ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿ.ಸಿ. ಜಗದೀಶ್ ನಾಳೆ (23-10-2024) ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಮಾಡಲಾಗಿದೆ.     ಆದೇಶದ ಅನ್ವಯ ಬೆಂಗಳೂರು ನಗರ ಜಿಲ್ಲೆಯ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಕಾಲೇಜುಗಳಿಗೆ ರಜೆ […]

Continue Reading

*ಕಾಲುಬಾಯಿ ರೋಗ ತಡೆಯಲು 6ನೇ ಸುತ್ತಿನ ಲಸಿಕೆ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ.*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 22(ವಿಜಯಮಿತ್ರ): ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಾನುವಾರಗಳ ಕಾಲು ಬಾಯಿ ರೋಗ ತಡೆಯಲು 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ದೇವನಹಳ್ಳಿ ಪಶು ಆಸ್ಪತ್ರೆ ಬಳಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಚಾಲನೆ ನೀಡಿದರು. ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 21 ರವರೆಗೆ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ […]

Continue Reading

*ಸ್ವಯಂ ಸೇವಕ ಗೃಹರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 22, 2024(ವಿಜಯಮಿತ್ರ ):- ಗೃಹರಕ್ಷಕ ದಳದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 586 ಸ್ವಯಂ ಸೇವಕ ಗೃಹರಕ್ಷಕರ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.   ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14 ಘಟಕಗಳಿದ್ದು, ಅದರಲ್ಲಿ ಹೊಸದಾಗಿ ಪರಪ್ಪನ ಅಗ್ರಹಾರ, ವರ್ತೂರು, ಚಿಕ್ಕಜಾಲ, ಚಿಕ್ಕಬಾಣಾವರ, ಕೊತ್ತನೂರು, ವೈಟ್ ಫೀಲ್ಡ್, ಹೆಬ್ಬಗೋಡಿ ಈ ಘಟಕಗಳು ನೂತವಾಗಿ ಆರಂಭಿಸಬೇಕಾಗಿರುತ್ತದೆ ಸದರಿ ಘಟಕಗಳ ಹೆಸರುಗಳು ಮತ್ತು ಖಾಲಿ ಇರುವ ಗೃಹರಕ್ಷಕದ ಸಂಖ್ಯೆ ಹಾಗೂ ಖಾಲಿ ಇರುವ ಸ್ಥಳಗಳು:- […]

Continue Reading

ನವೆಂಬರ್ 22 ರೊಳಗೆ 2500 ನಿವೇಶನ ನೀಡುವ ಗುರಿ : ಕೆ.ಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್22(ವಿಜಯಮಿತ್ರ ):- ದೇವನಹಳ್ಳಿ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ 4,557 ನಿವೇಶನ ರಹಿತರಿದ್ದು ಮೊದಲ ಹಂತದಲ್ಲಿ2500 ನಿವೇಶನ ನೀಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ತಿಳಿಸಿದರು.   ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದೇವನಹಳ್ಳಿ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ತಾಲ್ಲೂಕುವಾರು ಹಲವರು ನಿವೇಶನ […]

Continue Reading

ದೊಡ್ಡಬಳ್ಳಾಪುರ: ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಸಮಾರೋಪ ಸಮಾರಂಭ : ರಾಜ್ಯದ ವಿವಿಧ 29 ಜಿಲ್ಲೆಗಳ ಯೋಗಪಟುಗಳು ಭಾಗಿ

2024-2025 ನೇ ಸಾಲಿನ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯನ್ನು ತಾಲ್ಲೂಕಿನ ದೇವರಾಜು ಅರಸು ಕಾಲೇಜಿನಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿತ್ತು ಸ್ಪರ್ಧೆಯಲ್ಲಿ ವಿವಿಧ 29 ಜಿಲ್ಲೆಗಳ ಯೋಗಪಟುಗಳು ಭಾಗವಹಿಸಿದ್ದರು. ಸದರಿ ಕಾರ್ಯಕ್ರಮದ ಅಂತಿಮ ಘಟ್ಟದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ ಯೋಗ ಮಾಡುವುದರಿಂದ ಮನುಷ್ಯನ ಹಲವು ಕಾಯಿಲೆಗಳು ದೂರವಾಗಿ ಒಳ್ಳೆಯ ಆರೋಗ್ಯ ಹಾಗೂ ದಿನನಿತ್ಯದ ಜೀವನದಲ್ಲಿ ಮನುಷ್ಯ ತುಂಬ ಚಟುವಟಿಕೆಯಿಂದ ಇರಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿನಿತ್ಯ […]

Continue Reading

ಒಳ ಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಬೀರಸಂದ್ರ ( ವಿಜಯಮಿತ್ರ ): ಸುಪ್ರೀಂ ಕೋರ್ಟ್ ಈಗಾಗಲೇ ಜಾರಿಗೊಳಿಸಿರುವ ಒಳಬಿಸಲಾತಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಮಾದಿಗ ಸಮುದಾಯದ ಮುಖಂಡರ ಜೊತೆ ವಿವಿಧ ದಲಿತ ಸಂಘಟನೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ರಾಜ್ಯ ಮುಖಂಡರಾದ ಬುಳ್ಳಳಿ ರಾಜು ಮಾತನಾಡಿ ಪ್ರತಿ ಚುನಾವಣೆಯಲ್ಲೂ ನಿರ್ಣಾಯಕ ಮತಗಳನ್ನು ಹೊಂದಿರುವ ಮಾದಿಗ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದರು ರಾಜ್ಯ ಸರ್ಕಾರ ಆದೇಶವನ್ನು ಜಾರಿಗೆ ತರಲು ಮುಂದಾಗುತ್ತಿಲ್ಲ […]

Continue Reading