ಇಂಗ್ಲಿಷ್ ನಾಮಫಲಕ ಬದಲಿಸಿ : ಎಸ್ಸಿಲರ್ ಕಂಪನಿ ನಾಮಫಲಕ ಬದಲಿಸುವಂತೆ ಕರವೇ ಆಗ್ರಹ

ದೊದ್ದಬಳ್ಳಾಪುರ : ತಾಲ್ಲೂಕಿನ ಎಸ್ಸಿಲೊರ್ (essilorluxottica) ಕಂಪನಿಯ ನಾಮಫಲಕವನ್ನು ಕನ್ನಡ ಭಾಷೆಯಲ್ಲಿ ಬದಲಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣ ಗೌಡರ ಬಣ )ಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಅಗ್ರಹಿಸಿದ್ದಾರೆ.   ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿರಬೇಕು, ಕರ್ನಾಟಕದ ನೆಲ ಜಲ ಸಂಪನ್ಮೂಲಗಳನ್ನು ಬಳಸಿ ಜೀವನ ಕಟ್ಟಿಕೊಂಡಿರುವ ಕಂಪನಿಗಳು ವಾಣಿಜ್ಯ ಕಾರಣಗಳಿಗಾಗಿ ಭಾಷೆ ನಿರಾಕರಿಸುವುದು ಎಷ್ಟು ಸರಿ, ಇದಕ್ಕೆ ಪುಷ್ಟಿ ಎಂಬಂತೆ ಪ್ರತಿಷ್ಠಿತ ಬಹು ರಾಷ್ಟ್ರೀಯ ಕಂಪನಿ ಎಸ್ಸಿಲೊರ್ ಲೂಕ್ಸೋಟ್ಟಿಕಾ (essilorluxottica) ತನ್ನ […]

Continue Reading

ದೊಡ್ಡಬಳ್ಳಾಪುರ : ಚೀಟಿ ಹಣದೊಂದಿಗೆ ಮಹಿಳೆ ಪರಾರಿ : ಕಂಗಾಲದ 250ಕ್ಕೂ ಅಧಿಕ ಕುಟುಂಬಗಳು

ದೊಡ್ಡಬಳ್ಳಾಪುರ : ಸುಮಾರು 250ಕ್ಕೂ ಅಧಿಕ ಜನರನ್ನು ವಂಚಿಸಿ ಚೀಟಿ ಹಣ ನೀಡದೆ ಮಹಿಳೆಯೊಬ್ಬರು ಪರಾರಿಯಾಗಿರುವ ಘಟನೆ ತಾಲೂಕಿನ ಮೂಕಾಂಬಿಕಾ ಬಡಾವಣೆಯಲ್ಲಿ ನಡೆದಿದೆ.     ಹೌದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಪುಷ್ಪಕಲಾ ಎಂಬ ಮಹಿಳೆಯು ಯಾವುದೇ ಕಾನೂನು ಅನುಮತಿ ಇಲ್ಲದೆ ಅಕ್ರಮವಾಗಿ ಚೀಟಿ ದಂಧೆ ನೆಡೆಸುತ್ತಿದ್ದು , ಆಕೆಯ ಮೇಲೆ ನಂಬಿಕೆ ಇಟ್ಟು ಚೀಟಿ ಹಾಕಿದ್ದ 250ಕ್ಕೂ ಹೆಚ್ಚು ಚೀಟಿದಾರರಿಗೆ ಹಣ ನೀಡದೆ ವಂಚಿಸಿ ಪರಾರಿಯಾಗಿದ್ದಾರೆ , ಹಣ ಕಳೆದುಕೊಂಡ ಬಡ ಮಹಿಳೆಯರು ಹಿಡಿ ಶಾಪ […]

Continue Reading

ನಮ್ಮ ಸಮುದಾಯ ಬಲಿಷ್ಠ ಸಮುದಾಯವಾಗಿ ಹೊರ ಹೊಮ್ಮುಲು ಎಲ್ಲರೂ ಶ್ರಮಿಸಬೇಕಾಗಿದೆ -ಕೆ. ಎಂ. ಕೃಷ್ಣಮೂರ್ತಿ

ದೊಡ್ಡಬಳ್ಳಾಪುರ : ನಗರ ತಾಲ್ಲೂಕು ಕುರುಬ ಸಂಘದ ಹಾಗು ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ದೊಂದಿಗೆ ನ.18 ರಂದು ದಾಸ ಶ್ರೇಷ್ಠ ಕನಕದಾಸ ಜಯಂತೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಸಲುವಾಗಿ ತಾಲ್ಲೂಕಿನ ಎಲ್ಲಾ ಮುಖಂಡರನ್ನು ಪೂರ್ವಬಾವಿ ಸಭೆಯಲ್ಲಿ ಚರ್ಚಿಸಲಾಯಿತು.   ನಗರದ ಕೊಂಗಾಡಿಯಪ್ಪ ರಸ್ತೆಯಲ್ಲಿನ ಕನಕ ಭವನದಲ್ಲಿ ಕರೆಯಲಾಗಿತ್ತು ಸಭೆಯಲ್ಲಿ ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಖಜಾಂಚಿ ಕೆ ಎಂ ಕೃಷ್ಣಮೂರ್ತಿ ಮಾತನಾಡಿ ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿವಾಗಿಲ್ಲ, ಅವರಿಗೆ ಸಂಬಂಧಿಸಿದ ವಿಶೇಷ […]

Continue Reading

ಕೆಆರ್‌ಎಸ್ ಪಕ್ಷದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ : ಬೈಕ್ ರ್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೆ ಆರ್ ಎಸ್ ಪಕ್ಷದ ವತಿಯಿಂದ ಪಕ್ಷದ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು, ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಶೇಷವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳುವ ಮೂಲಕ ಶುಭಾಶಯ ಕೋಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಘಟಕದ ಜಿಲ್ಲಾಧ್ಯಕ್ಷರಾದ ಬಿ ಶಿವಶಂಕರ್ ನೇತೃತ್ವದಲ್ಲಿ ಕಾರ್ಮಿಕ ಘಟಕದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ಮಹಿಳಾ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. […]

Continue Reading

ಮಲ್ಲಾತಹಳ್ಳಿ ಜಾತ್ರಾಮಹೋತ್ಸವ : ಜಾತಿ ತಾರತಮ್ಯ ಹಿನ್ನಲೆ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ನಗರ ಕೇಂದ್ರದಿಂದ ಕೇವಲ 3 ಕಿ.ಮೀ ಅಂತರದಲ್ಲಿರುವ ಮಲ್ಲಾತಹಳ್ಳಿ ಗ್ರಾಮದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ, ಇಲ್ಲಿನ ದೇವಸ್ಥಾನಗಳಿಗೆ ದಲಿತರ ಪ್ರವೇಶವಿಲ್ಲ, ಬಾಗಿಲಲ್ಲೇ ನಿಂತು ದೇವರಿಗೆ ಕೈ ಮುಗಿಯ ಬೇಕು, ದಲಿತರ ಪೂಜಾ ಸಾಮಾಗ್ರಿಗಳನ್ನು ಸಹ ದೇವಸ್ಥಾನದ ಒಳಗೆ ತೆಗೆದುಕೊಂಡು ಹೋಗುವುದಿಲ್ಲ, ಕಾಂಪೌಂಡ್ ಹೊರಗಡೆಯ ದೇವರಿಗೆ ಹಣ್ಣುಕಾಯಿ ಕೊಟ್ಟು ಪೂಜೆ ಮಾಡಿಸಿಕೊಂಡು ಬರುವ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮದ ಅಶೋಕ್ ತಿಳಿಸಿದ್ದಾರೆ.   ಭಾರತದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಿದೆ ಎನ್ನುವಂತೆ ದಲಿತರ […]

Continue Reading

ಜಿಲ್ಲಾಡಳಿತ ಭವನ ಆವರಣದಲ್ಲಿ ಹಲ್ಮಿಡಿ ಶಾಸನ ಅನಾವರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡದ ಮೊಟ್ಟಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿ‌, ಪುಷ್ಪಾರ್ಚನೆ ನೆರವೇರಿಸಿದರು. *“ಕರ್ನಾಟಕ ಸಂಭ್ರಮ-50’ರ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸುವ ಮೂಲಕ ಈ ಸವಿನೆನಪನ್ನು ಶಾಶ್ವತವಾಗಿಡುವುದು ಯೋಜನೆಯ ಉದ್ದೇಶ*   *ಕನ್ನಡದ ಮೊದಲ ಶಿಲಾ ಶಾಸನ*   ಬೇಲೂರು ತಾಲೂಕಿನ […]

Continue Reading

ಕನ್ನಡ ರಾಜ್ಯೋತ್ಸವ ದಿನದಂದು ರಜೆ ನೀಡದ ಕಾರ್ಖಾನೆ : ಪ್ರತಿಭಟನೆಗೆ ಮುಂದಾದ ಚಿರಋಣಿ ಕನ್ನಡಾಂಬೆ ಹೊರಟ ಸಮಿತಿ

ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರವೇ ರಜೆ ಘೋಷಿಸಿದರು, ರಾಜ್ಯ ಸರ್ಕಾರದ ಆದೇಶ ಅವರು ಧಿಕ್ಕರಿಸಿ, ಕಾರ್ಮಿಕರಿಂದ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಸೋಲಾರ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಚಿರಋಣಿ ಕನ್ನಡಾಂಬೆ ಹೊರಟ ಸಮಿತಿ ವತಿಯಿಂದ ಪ್ರತಿಭಟನೆ ನೆಡೆಸಲಾಯಿತು.   ಖ್ಯಾತ ವಕೀಲರು ಹಾಗೂ ಕನ್ನಡ ಪರ ಹೋರಾಟಗಾರಾದ ರವಿ ಮಾವಿನಕುಂಟೆ ಮಾತನಾಡಿ ಕರ್ನಾಟಕದ ನೆಲ ಜಲ ಸಂಪನ್ಮೂಲ ಬಳಸಿ ಹಣ ಗಳಿಸುವ ಕಾರ್ಖಾನೆಗಳಿಗೆ , ಕನ್ನಡ ಭಾಷೆ, ಕನ್ನಡಿಗರ ಸ್ವಾಭಿಮಾನಕ್ಕೆ ಗೌರವ ಸಲಿಸಬೇಕೆಂಬುದು ಅರಿವಿಲ್ಲದಂತಿದೆ ಸರ್ಕಾರಿ […]

Continue Reading

ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಂದಿ ಬೆಟ್ಟದಲ್ಲಿ ಗಾಂಧಿ ಹೆಜ್ಜೆಗುರುತುಗಳು ಪ್ರಬಂಧ ಸ್ಪರ್ಧೆ: ಬಹುಮಾನ ವಿತರಣೆ

ತೂಬಗೆರೆ : ಕನ್ನಡ ರಾಜ್ಯೋತ್ಸವ ಪ್ರಯುಕ್ತ ನವಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ತೂಬಗೆರೆ ಸರ್ಕಾರಿ ಪ್ರೌಢಶಾಲೆ ಸಹಯೋಗದೊಂದಿಗೆ ನಂದಿಬೆಟ್ಟದಲ್ಲಿ ಗಾಂಧಿ ಹೆಜ್ಜೆಗುರುತುಗಳು ಎಂಬ ವಿಷಯದ ಮೇಲೆ ಶಾಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.   ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವೇದಿಕೆಯ ಕಾರ್ಯದರ್ಶಿ ಉದಯ್ ಆರಾಧ್ಯ ಬಹುಮಾನ ವಿತರಿಸಿ ಮಾತನಾಡಿ, ಶಾಲೆಗಳಲ್ಲಿ ರಾಜ್ಯ-ರಾಷ್ಟ್ರೀಯ ಹಬ್ಬಗಳು ಕೇವಲ ಮನರಂಜನೆ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವ ಅವಕಾಶಗಳಾಗಬೇಕು. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮಕ್ಕಳಿಗೆ ಸಾಮಾನ್ಯ ಜ್ಞಾನ […]

Continue Reading

ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ-ನಂ.ಮಹಾದೇವ್

ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯದಲ್ಲಿ ಕನ್ನಡ ಚುನಾವಣೆಯ ವಿಷಯ ಆಗಬೇಕಾಗಿದೆ.  ಒಕ್ಕೂಟ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ  ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದು   ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ  ನಂ.ಮಹಾದೇವ್ ತಿಳಿಸಿದರು.   ಅವರು  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು. ಒಕ್ಕೂಟ ವ್ಯವಸ್ಥೆಯ ಸರ್ಕಾರದಲ್ಲಿ ಹಿಂದಿ ಭಾಷೆಯ […]

Continue Reading