ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.   ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.   ಮೂಲ ಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಎ.ಬಿ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾಗಿ ನೇಮಿಸಿ ಫೆ.03 ರಂದು ಸರ್ಕಾರ ಆದೇಶ ಹೊರಡಿಸಿತ್ತು.   ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರ್‌ಗಳು, ಕಂದಾಯ […]

Continue Reading

ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರವಹಿಸುತ್ತದೆ – ನ್ಯಾಯವಾದಿ ಜಿ.ಸುರೇಶ್ ಗೌಡ

ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳು ಮತ್ತು ಪಠ್ಯೇತರ ಚಟುವಟಿಕೆಗಳು  ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯವಾದಿ ಜಿ.ಸುರೇಶ್ ಗೌಡ ತಿಳಿಸಿದರು. ಮಾರಸಂದ್ರ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾಸಂಸ್ಥೆಯ ಪಿ.ಕೆ.ಬಿ  ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ.  ಶಿಕ್ಷಣದ ಮಹತ್ವವನ್ನು ಅರಿತವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ    ಶಿಸ್ತುಬದ್ದ ಓದು […]

Continue Reading

ಜಿಲ್ಲಾಡಳಿತ ಭವನದಲ್ಲಿ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ

ಬೆಂಗಳೂರು ಗ್ರಾಮಾಂತರ : ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆಯ ಮೂಲಕ ಗುಣಪಡಿಸಬಹುದಾಗಿದ್ದು, ಕ್ಯಾನ್ಸರ್ ರೋಗವನ್ನು ತಡೆಯಲು ಸಾರ್ವಜನಿಕರು ಜಾಗೃತರಾಗಿಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.   ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,ಬದಲಾದ ಜೀವನ ಶೈಲಿ, ಮನಸ್ಥಿತಿ, ಆಹಾರ ಪದ್ಧತಿಯಿಂದ […]

Continue Reading

ಕರ್ನಾಟಕ ಡ್ರೈವರ್ಸ್ ಅಂಡ್ ಓನರ್ಸ್ ವೆಲ್ಫೇರ್ ಅಸೋಸಿಯೇಷನ್ ನೂತನ ತಾಲ್ಲೂಕು ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ

ದೊಡ್ಡಬಳ್ಳಾಪುರ : ಕರ್ನಾಟಕ ಚಾಲಕ ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆಡೆದಿದ್ದು, ತಾಲೂಕು ಚಾಲಕರ ಘಟಕದ ಅಧ್ಯಕ್ಷರಾಗಿ ಅವಿನಾಶ್ ಅವರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ನೂತನ ಅಧ್ಯಕ್ಷರಿಗೆ ಸಂಘದ ಪದಾಧಿಕಾರಿಗಳು ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿ ಶುಭಹಾರೈಸಿದ್ದಾರೆ.   ಈ ಕುರಿತು ನೂತನ ಅಧ್ಯಕ್ಷ ಅವಿನಾಶ್ ಮಾತನಾಡಿ ಚಾಲಕರ ಸಮಸ್ಯೆಗಳು ಸಾಕಷ್ಟಿವೆ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಸಂಘದ ಬಲವರ್ತನೆಗೆ ಹೆಚ್ಚು ಒತ್ತು […]

Continue Reading

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಆಲಹಳ್ಳಿ ಡೈರಿಗೆ 2 ಲಕ್ಷ ಅನುದಾನದ ಡಿ ಡಿ ವಿತರಣೆ

ದೊಡ್ಡಬಳ್ಳಾಪುರ : ತಾಲೂಕಿನ ಆಲಹಳ್ಳಿ ಗ್ರಾಮದ ಡೈರಿಗೆ ಧರ್ಮಸ್ಥಳ ಯೋಜನೆ ವತಿಯಿಂದ 2 ಲಕ್ಷ ಅನುದಾನ ಮಂಜೂರಾತಿ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿರ್ದೇಶಕರಾದ ಉಮರಬ್ಬ DD ವಿತರಣೆ ಮಾಡಿದರು.   ಈ ಸಂದರ್ಭದಲ್ಲಿ ಮಾತನಾಡಿದ avaru ಬೆಂಗಳೂರು ಗ್ರಾಮಾಂತರದಲ್ಲಿ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ಇದ್ದು, ಈ ಭಾಗದ ಹೆಚ್ಚಿನ ರೈತರು ಪಶುಸಂಗೋಪನೆಯಲ್ಲಿ ನಿರತರಾಗುವ ಮೂಲಕ ಹಾಲಿನ ಉತ್ಪಾದನೆಯಲ್ಲಿ ರಾಜ್ಯಕ್ಕೆ ಕೊಡುಗೆ ನೀಡುತ್ತಿದೆ ಎಂದರು.   ರೈತರು ಹಾಲಿನ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಕಾಲಕಾಲಕ್ಕೆ ಸರಿಯಾಗಿ […]

Continue Reading

ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡ ರಾಜ್ ವಂಶದ ಅಭಿಮಾನಿ ವೈ. ಎನ್.ನಾಗರಾಜು

ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಹಾಗೂ ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸಲಾಯಿತು.   ತಾಲೂಕಿನ ದರ್ಗಾ ಜೋಗಹಳ್ಳಿಯಲ್ಲಿ ನಡೆಯುತ್ತಿರುವ 1774 ನೇ ದಿನದ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಕರ್ನಾಟಕ ಜನಸೇನೆ ಕಾರ್ಯಾಧ್ಯಕ್ಷ ಎನ್.ವೈ ನಾಗರಾಜು ಪಾಲ್ಗೊಂಡು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಪೆನ್ ವಿತರಣೆ ಹಾಗೂ ನಿರಾಶ್ರಿತ ಕಡುಬಡವರಿಗೆ ಆಹಾರ ವಿತರಣೆ ಮಾಡಿ ಮಾತನಾಡಿದರು ನಮ್ಮ ವಿಶೇಷ ದಿನವನ್ನು ಇಂದು ಅರ್ಥಪೂರ್ಣವಾಗಿ ನಿರಂತರ […]

Continue Reading