ಅರ್ಕಾವತಿ ನದಿ ಹೋರಾಟ ಸಮಿತಿ : ಏಪ್ರಿಲ್ 14 ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ದಿನದಂದು ದಿನದ ಉಪವಾಸ ಸತ್ಯಾಗ್ರಹ

ದೊಡ್ಡಬಳ್ಳಾಪುರ : ಏಪ್ರಿಲ್ 14 ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ದಿನದಂದು ಸಂವಿಧಾನ ಉಳಿಸಿ ಕಾನೂನು ರಕ್ಷಣೆಗಾಗಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಅರ್ಕಾವತಿ ನದಿ ಹೋರಾಟ ಸಮಿತಿ ವತಿಯಿಂದ ತಾಲೂಕು ಕಚೇರಿ ಮುಂದೆ ನಡೆಸುತ್ತಿದ್ದೇವೆ ಎಂದು ಸಮಿತಿಯ ಸದಸ್ಯರು ತಿಳಿಸಿದರು. ತಾಲ್ಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಹಾಗೂ ಮಜಾರಹೊಸಹಳ್ಳಿ ಗ್ರಾಮ ಪಂಚಾಯಿತಿಗಳ ಸಂಪೂರ್ಣ ಜೀವ ಜಲವು ಹಾಳಾಗಿದ್ದು ಪ್ರಸ್ತುತ ನಮ್ಮ ಭಾಗದಲ್ಲಿ ಅನೇಕ ಜನರು ಕ್ಯಾನ್ಸ‌ರ್ ಕಾಯಿಲೆಗೆ ತುತ್ತಾಗಿ ಕಿಡ್ನಿ ಸೇರಿದಂತೆ ಹಲವು […]

Continue Reading

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.   ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು […]

Continue Reading

ಸರ್ಕಾರಿ ಕಚೇರಿಗಳಲ್ಲಿ ಹುಟ್ಟು ಹಬ್ಬದ ಆಚರಣೆ ನಿಲ್ಲಿಸಿ ಸರ್ಕಾರದ ಆದೇಶವನ್ನು ಪಾಲಿಸಿ – ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹುಟ್ಟು ಹಬ್ಬ ಆಚರಿಸಿಕೊಳ್ಳುವುದನ್ನು ನಿಲ್ಲಿಸಬೇಕು, ಸರ್ಕಾರಿ ಆದೇಶವಿದ್ದರೂ ಕೆಲ ಅಧಿಕಾರಿಗಳು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ ಇಂತಹ ಆಚರಣೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಖಂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಈ ಕುರಿತು ಮಾತನಾಡಿರುವ ಅವರು ಸರ್ಕಾರಿ ಹುದ್ದೆಯಲ್ಲಿರುವ ಅಧಿಕಾರಿಗಳು ತಮ್ಮ ಹುಟ್ಟುಹಬ್ಬವನ್ನು ಸರ್ಕಾರಿ ಕಚೇರಿಗಳಲ್ಲಿ ಆಚರಿಸಿಕೊಳ್ಳದಂತೆ ಸರ್ಕಾರ ಈಗಾಗಲೇ ಅಧಿಕೃತ ಆದೇಶ ಹೊರಡಿಸಿದ್ದರು, ಕೆಲ ಅಧಿಕಾರಿಗಳು ಸರ್ಕಾರದ ಆದೇಶವನ್ನು ಲೆಕ್ಕಿಸದೆ ತಮ್ಮ ಹುಟ್ಟು […]

Continue Reading

ಜನಪದ ಕಲಾವಿದೆ ನಾಗಸಂದ್ರ ಪಾರ್ವತಮ್ಮ ರವರಿಗೆ ಗೌರವ ಡಾಕ್ಟರೇಟ್

ದೊಡ್ಡಬಳ್ಳಾಪುರ : ಹದಿನೆಂಟು ವರ್ಷಗಳ ನಿರಂತರ ಕಲಾ ಸೇವೆ ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿ ಹಳ್ಳಿ ಪ್ರತಿಭೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿರುವುದು ಸಂತಸ ತಂದಿದೆ ಎಂದು ಕಲಾವಿದೆ ಪಾರ್ವತಮ್ಮ ತಿಳಿಸಿದ್ದಾರೆ. ಸೋಬಾನೇ ಪದ, ಭಜನೆ,ಭಕ್ತಿ ಗೀತೆ ,ಚಿತ್ರಗೀತೆಗಳು ಸೇರಿದಂತೆ ಹಲವು ಬಗೆಯ ಹಾಡುಗಳನ್ನು ಹಾಡುವ ಮೂಲಕ ಸತತ 18 ವರ್ಷಗಳ ಕಲಾ ಸೇವೆ ಸಲ್ಲಿಸಿದ್ದೇನೆ, ಕೌಟುಂಬಿಕ ಸಂಕಷ್ಟಗಳ ನಡುವೆಯೂ ಛಲ ಬಿಡದೆ ನಿರಂತರ ಕಲಾ ಸೇವೆಗೆ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ , ಬೇರೆಯವರು […]

Continue Reading

ಏಪ್ರಿಲ್ 10ರಂದು ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್‌ (ರಿ.) ಉದ್ಘಾಟನಾ ಸಮಾರಂಭ

ಇದೇ ಏಪ್ರಿಲ್ 10ರ ಗುರುವಾರದಂದು ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್‌ (ರಿ.) ಉದ್ಘಾಟನಾ ಕಾರ್ಯಕ್ರಮವು ಸುಕ್ಷೇತ್ರ ಶ್ರೀ ಕೋಡಿಮಠ ಮಹಾಸಂಸ್ಥಾನದ ಮಹಾಸ್ವಾಮಿಗಳಾದ ಶ್ರೀ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳ ಅಮೃತಹಸ್ತದಿಂದ ನೆರವೇರಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ . ಅರದೇಶನಹಳ್ಳಿ, ಕುಂದಾಣ ಹೋಬಳಿಯ ಅರದೇಶನಹಳ್ಳಿಯ ಶ್ರೀ ಬಗಳಾಮುಖಿದೇವಿ ದೇವಾಲಯದ ಅಭಿವೃದ್ಧಿಗಾಗಿ ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್‌ (ರಿ.) ಸ್ಥಾಪಿಸಿದ್ದು, ಸದರಿ ಟ್ರಸ್ಟ್ ನ ಉದ್ಘಾಟನೆಯನ್ನು ಅಮ್ಮನವರಿಗೆ ಮಂಗಳಾರತಿ ಸಲ್ಲಿಸುವ ಮೂಲಕ […]

Continue Reading

ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ ನೆಲ ಅಗೆತ ಅಥವಾ ತಿರುವಿ ಹಾಕುವಿಕೆಗೆ ಈಗ ಸಕಾಲ ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ.   ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ರೈತರು ಬೆಳೆದ ಕೃಷಿ ಬೆಳೆಗಳನ್ನು ಕಟಾವು ಮಾಡಲು ಸೂಕ್ತ ಸಮಯವಾಗಿದೆ. ಭೂಮಿಯನ್ನು ಹದವಾಗಿ […]

Continue Reading

ಏ.11ರಿಂದ ಮೂರು ದಿನಗಳ ಕಾಲ ಶ್ರೀ ರಾಮೋತ್ಸವ : ಬೃಹತ್ ಶ್ರೀರಾಮ ಶೋಭಾಯಾತ್ರೆಗೆ ಸಕಲ ಸಿದ್ಧತೆ

ದೊಡ್ಡಬಳ್ಳಾಪುರ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ಆಯೋಜನೆ ಮಾಡಲಾಗಿದ್ದು, ಏ.13ರಂದು ಬೃಹತ್ ಶ್ರೀರಾಮ ಶೋಭಾಯಾತ್ರೆ ನಡೆಯಲಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದ್ದಾರೆ. ನಗರದ ಬಜರಂಗದಳದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದೆ , 3 ವರ್ಷಗಳಿಂದ […]

Continue Reading

ಶಿವಮೊಗ್ಗ : ಮಕ್ಕಳಕಲಿಕಾ ನ್ಯೂನತೆ ಮತ್ತು ವರ್ತನಾ ಸಮಸ್ಯೆಗಳ ಬಗ್ಗೆ ಪೋಷಕರ ಗಮನ ಅಗತ್ಯ: ಡಾ. ರಾಮಪ್ರಸಾದ್

ಶಿವಮೊಗ್ಗ : ಚಿಕ್ಕಂದಿನಿಂದ ಮಕ್ಕಳಲ್ಲಿ ಕಲಿಕಾ ನ್ಯೂನ್ಯತೆ ಹಾಗೂ ವರ್ತನಾ ಸಮಸ್ಯೆಗಳ ಬಗ್ಗೆ ಪೋಷಕರು ಶಿಕ್ಷಕರು ಹೆಚ್ಚು ಗಮನಹರಿಸುತ್ತಿರಬೇಕು ಇದರಿಂದ ಮುಂದೆ ಆಗುವ ದೊಡ್ಡ ಪರಿಣಾಮಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಮೇಘನಾ ಆಸ್ಪತ್ರೆಯ ಮನಶಾಸ್ತ್ರ ಮಾನಸಿಕ ತಜ್ಞ ರೋಗದ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ರಾಮ್ ಪ್ರಸಾದ್ ಅವರು ಅಭಿಮತ ವ್ಯಕ್ತಪಡಿಸಿದರು   ಅವರು ರೋಟರಿ ಬ್ಲಡ್ ಬ್ಯಾಂಕ್ ಆವರಣದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಿಟ್ ಟೌನ್ ವತಿಯಿಂದ ಆಯೋಜಿಸಲಾಗಿದ್ದ ಆಟಿಸಂ. ಏಡಿ ಎಚ್ ಡಿ. ಕಲಿಕಾ ನ್ಯೂನ್ಯತೆ […]

Continue Reading

DODDABALLAPURA: ರಾಜ್ಯ ಸಂಯೋಜಕ ಅಶೋಕ್ ಚಕ್ರವರ್ತಿ ನೇತೃತ್ವದಲ್ಲಿ BSP ಕಾರ್ಯಕರ್ತರ ಆತ್ಮವಲೋಕನ ಸಭೆ

ದೊಡ್ಡಬಳ್ಳಾಪುರ : ಸ್ಥಳೀಯವಾಗಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಆತ್ಮವಲೋಕನ ಸಭೆಯನ್ನು ಆಯೋಜನೆ ಮಾಡಲಾಗಿದ್ದು ತಾಲೂಕು ಹಾಗೂ ಹೋಬಳಿ ಮಟ್ಟಗಳ ಪುನರ್ ರಚನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕರಾದ ಅಶೋಕ್ ಚಕ್ರವರ್ತಿ ತಿಳಿಸಿದರು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಕ್ಕ ಮಾಯಾವತಿಯವರ ನೇತೃತ್ವದ ಬಹುಜನ ಸಮಾಜ ಪಾರ್ಟಿ ಹೊಸ ಹುಮ್ಮಸ್ಸಿನೊಂದಿಗೆ ರಾಜ್ಯಾದ್ಯಂತ […]

Continue Reading

ಒಳಮೀಸಲಾತಿ ಜಾರಿ ವಿಚಾರ : ವಿಳಂಬಮಾಡದೆ ಮುಂದಿನ 40 ದಿನಗಳಲ್ಲಿ ಮುಖ್ಯಮಂತ್ರಿಗಳು ಅನುಷ್ಠಾನ ಮಾಡಲಿದ್ದಾರೆ – ಸಚಿವ ಕೆ ಎಚ್ ಮುನಿಯಪ್ಪ

ಬೆಂಗಳೂರು : ಡಾ. ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೀಸಲಾತಿ ವಿಷಯದಲ್ಲಿಯೂ ಯಾವುದೇ ತಡ ವಿಲ್ಲದೆ ಮುಂದಿನ 30ರಿಂದ 40 ದಿನಗಳ ಹೊಳಗಾಗಿ ಒಳ ಮೀಸಲಾತಿ ಅನುಷ್ಠಾನವಾಗಲಿದೆ ಎಂದರು.     ಬಾಬೂಜಿಯವರ ಆಶಯದಂತೆ ಕರ್ನಾಟಕ ಸರ್ಕಾರದ ದೀನದಲಿತರ ಬಡವರ ಪರವಾಗಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಪಂಚ ಗ್ಯಾರಂಟಿಗಳನ್ನು […]

Continue Reading