ಸಹಕಾರ ಡಿಪ್ಲೋಮಾ ಪ್ರವೇಶ ಅರ್ಜಿ ಆಹ್ವಾನ

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಜುಲೈ 1 ರಿಂದ ತರಬೇತಿಯು ಪ್ರಾರಂಭವಾಗಲಿದೆ.   ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ,ಬೆಂಗಳೂರು ದಕ್ಷಿಣ (ರಾಮನಗರ),ತುಮಕೂರು,ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸೇರಿರುವ ಪಿಯುಸಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ 500 ರೂ. (ಐದು ನೂರು ರೂ.) ಗಳ ಶಿಷ್ಯ […]

Continue Reading

ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಸಚಿವ ಈಶ್ವರ ಖಂಡ್ರೆ ಕರೆ

ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.   ನೆಲಮಂಗಲ ಬಳಿಯ ಕ್ಷೇಮವನದಲ್ಲಿಂದು ವಿಶ್ವ ಪರಿಸರ ದಿನದ ಅಂಗವಾಗಿ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಇಂದು ಜಗತ್ತಿನಾದ್ಯಂತ ಹಲವು ಸಭೆ, ಚರ್ಚಾಗೋಷ್ಠಿಗಳು ನಡೆಯುತ್ತಿದ್ದು, […]

Continue Reading

ಮಾವಿಗೆ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ:- ಕೆಹೆಚ್.ಮುನಿಯಪ್ಪ ಮನವಿ

ಬೆಂಗಳೂರು: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ ರವರು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯಿಸಿದರು.   ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮಾವಿನ ಹಣ್ಣಿಗೆ ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಪ್ರಸಿದ್ದಿ ಯಾಗಿದ್ದು ರೈತರು ನಿರ್ದಿಷ್ಟ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಈಗಾಗಲೇ ನೆರೆಯ ಆಂದ್ರ ಪ್ರದೇಶ ಸರ್ಕಾರವು ನಮ್ಮ ತೋತಾಪುರಿ ಮಾವಿನ ಹಣ್ಣಿನ ಮಾರಾಟಕ್ಕೆ ನಿರ್ಬಂಧವಿದಿಸಿದ್ದು ಮಾವಿಗೆ ಬೆಲೆ […]

Continue Reading

ಎಂ. ಎ. ಬಿ. ಎಲ್. ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಮಕ್ಕಳ ಹಕ್ಕುಗಳಿಗೆ ಧ್ವನಿಯಾಗಲು ಶಾಲಾ ಸಂಸತ್ ಸಹಕಾರಿ ಆಗಲಿದೆ ಎಂದು ಎಂ.ಎ.ಬಿ.ಎಲ್ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಪಿ.ಪ್ರಿಯಾಂಕ ತಿಳಿಸಿದರು.   ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಸಂಸತ್ ಚುನಾವಣೆಯ ಪ್ರಕ್ರಿಯೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಮಕ್ಕಳೇ ನಾಳಿನ ನಾಯಕರು. ಆದ್ದರಿಂದ ಮಕ್ಕಳಲ್ಲಿ ನಾಯಕತ್ವ ಗುಣ ಮತ್ತು ಜವಾಬ್ದಾರಿ ನಿರ್ವಹಣಾ ಸಾಮರ್ಥ್ಯವನ್ನು ಬೆಳೆಸುವುದು ಅಗತ್ಯವಾಗಿದೆ. ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಶಾಲಾ ನಿರ್ವಹಣೆಯಲ್ಲಿ ಮಕ್ಕಳನ್ನು ಪಾಲುದಾರರನ್ನಾಗಿ […]

Continue Reading

60ಕ್ಕೂ ಹೆಚ್ಚು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕರ್ತರಿಗೆ ಗೌರವ ಸನ್ಮಾನ

ದೊಡ್ಡಬಳ್ಳಾಪುರ:ವಿಶ್ವಮಾನ್ಯ ಅಟಲ್ ಬಿಹಾರಿ ವಾಜಪೇಯಿ ಸನ್ಮಾನ ಸಮಿತಿ ವತಿಯಿಂದ ಹಿರಿಯ ಅಶಕ್ತ ಸಂಘ ಪರಿವಾರದ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಗೌರವ ಸನ್ಮಾನ ಸಮಾರಂಭವನ್ನು ನಗರದ ಕೆ. ಎಂ. ಹೆಚ್. ಕಾನ್ವೆಂಶನ್ ಹಾಲ್ ನಲ್ಲಿ ನಡೆಸಲಾಯಿತು. ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ ಸನ್ಮಾನ ಸಮಿತಿ ವತಿಯಿಂದ ಭಾರತೀಯ ಜನತಾ ಪಾರ್ಟಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘ ದಲ್ಲಿ 40-50 ವರ್ಷ ಗಳಿಂದ ಅಮೋಘ ಸೇವೆ ಸಲ್ಲಿಸಿದ 60ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಬಿಜೆಪಿ ಹಿರಿಯ ಮುಖಂಡರಾದ ಕೆ […]

Continue Reading

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ : ರೈತರು ಬೆಳೆ ವಿಮೆಗೆ ನೋಂದಾಯಿಸಿ

2025ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಮೆ ಯೋಜನೆ ಜಾರಿಗೆ ತರಲಾಗಿದೆ.   ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು, ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ […]

Continue Reading

ಜೂನ್ 16 ರಿಂದ ಜುಲೈ 31ರವರೆಗೆ ಡೈಯೇರಿಯಾ ತಡೆಗಟ್ಟುವಿಕೆ ಅಭಿಯಾನ

ಜಿಲ್ಲೆಯಲ್ಲಿ ಅತಿಸಾರದಿಂದ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವುದನ್ನು ಗುರಿಯಾಗಿಸಿ ಡೈಯೇರಿಯಾ ತಡೆಗಟ್ಟುವಿಕೆ ಅಭಿಯಾನ -2025 ಅನ್ನು ಜೂನ್ 16 ರಿಂದ ಜುಲೈ 31 ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು ಗರ್ಭಿಣಿ, ಬಾಣಂತಿಯರು, ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಎಂದು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]

Continue Reading

ನಾಳೆ (ಜು. 19)ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನೆಡೆಯಬೇಕಿದ್ದ ಸಭೆ ವಿಧಾನಸೌಧಕ್ಕೆ ಶಿಫ್ಟ್

2025ನೇ ಸಾಲಿನ 13ನೇ ಸಚಿವ ಸಂಪುಟದ ಸಭೆಯ ಸ್ಥಳವನ್ನು ದಿಡೀರ್ ಬದಲಾವಣೆ ಮಾಡಲಾಗಿದೆ.     ದಿನಾಂಕ: 19-06-2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ.   ಹೌದು ಈಗಾಗಲೇ ಸಭೆ ನೆಡೆಸಲು ತಯಾರಿ ನೆಡೆಸಿದ್ದ ನಂದಿ ಗಿರಿಧಾಮದ ಸ್ಥಳವನ್ನು ವಿಧಾನಸೌಧದ ಸೌಧಕ್ಕೆ ಸ್ಥಳಾಂತರಿಸಲಾಗಿದೆ ಎಂದುಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. […]

Continue Reading

ನಾಳೆ (ಜು. 19)ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನೆಡೆಯಬೇಕಿದ್ದ ಸಭೆ ವಿಧಾನಸೌಧಕ್ಕೆ ಶಿಫ್ಟ್

2025ನೇ ಸಾಲಿನ 13ನೇ ಸಚಿವ ಸಂಪುಟದ ಸಭೆಯ ಸ್ಥಳವನ್ನು ದಿಡೀರ್ ಬದಲಾವಣೆ ಮಾಡಲಾಗಿದೆ.     ದಿನಾಂಕ: 19-06-2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ.   ಹೌದು ಈಗಾಗಲೇ ಸಭೆ ನೆಡೆಸಲು ತಯಾರಿ ನೆಡೆಸಿದ್ದ ನಂದಿ ಗಿರಿಧಾಮದ ಸ್ಥಳವನ್ನು ವಿಧಾನಸೌಧದ ಸೌಧಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಆದೇಶ […]

Continue Reading

ಕರ್ನಾಟಕ ರಾಜ್ಯ ಆಮೇಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್‌ ಕಾರ್ಯದರ್ಶಿಯಾಗಿ ಎ.ನಟರಾಜ್‌ ಆಯ್ಕೆ

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್‌ ಕಾರ್ಯದರ್ಶಿಯಾಗಿ ದೊಡ್ಡಬಳ್ಳಾಪುರ ನಿಸರ್ಗ ಯೋಗ ಕೇಂದ್ರದ ಎ.ನಟರಾಜ್‌ರನ್ನು ಆಯ್ಕೆ ಮಾಡಲಾಗಿದೆ.   ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದ ರಾಜ್ಯ ಯೋಗ ಚಾಂಪಿಯನ್‌ಷಿಪ್ ವೇಳೆ ನಟರಾಜ್‌ ಅವರನ್ನು ಸನ್ಮಾನಿಸಲಾಯಿತು.   ಕಳೆದ 3 ದಶಕಗಳಿಂದ ಯೋಗಾಸನ ತರಬೇತಿ, ಯೋಗ ಸ್ಪರ್ಧೆ ಆಯೋಜನೆ, ಯೋಗ ಕ್ರೀಡೆಯ ಉತ್ತೇಜನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಗರ ದಲ್ಲಿ ಯೋಗ ಕ್ರೀಡೆಯ ಅಭ್ಯುದಯಕ್ಕೆ ಶ್ರಮಿಸಿದ್ದ ನಟರಾಜ್ ರವರನ್ನು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್‌ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ. […]

Continue Reading