ಘಾಟಿ ಸುಬ್ರಮಣ್ಯಕ್ಕೆ ರೈಲು ಸಂಪರ್ಕ ಸುಲಭಗೊಳಿಸಿ: ನವ ಕರ್ನಾಟಕ ಯುವ ಶಕ್ತಿ ವೇದಿಕೆಯಿಂದ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಮನವಿ ಪತ್ರ ಸಲ್ಲಿಕೆ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.   ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ […]

Continue Reading

ಕಾರ್ಮಿಕ ಇಲಾಖೆ ವತಿಯಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆ ವತಿಯಿಂದ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 2025-26 ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿಯನ್ನು www.klwbapps.karnataka.gov.in ವೆಬ್ಸೈಟ್ ಮೂಲಕ ಡಿಸೆಂಬರ್ 31 ರೊಳಗೆ ಸಲ್ಲಿಸಬೇಕು.   ಕಾರ್ಮಿಕನ ಮಾಸಿಕ ವೇತನ 35,000 ಮೀರಿರಬಾರದು, ವಿದ್ಯಾರ್ಥಿಯ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂ ಶೇ 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು,ಕುಟುಂಬದ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ […]

Continue Reading

ಸಗಟು ಮಳಿಗೆಗೆ ದಿಢೀರ್ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು .   ಅಕ್ಕಿ,ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು. ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು ಸಿಬ್ಬಂದಿಗೆ ಪ್ರಶಂಸಿಸಿ ರಾಜ್ಯದ ಎಲ್ಲಾ ಸಗಟು ಮಳಿಗೆಗಳು ಈ ರೀತಿಯಲ್ಲಿ ಗುಣಮಟ್ಟವನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ […]

Continue Reading

ಸುಸಜ್ಜಿತ ಬಾಡಿಗೆ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಅಜಾದ್ ಮಾದರಿ ಶಾಲೆ ನಡೆಸಲು ನೆಲಮಂಗಲ ತಾಲ್ಲೂಕಿನಲ್ಲಿ ಸುಸಜ್ಜಿತ ಬಾಡಿಗೆ ಕಟ್ಟಡ ಬೇಕಾಗಿದ್ದು, ಅದಕ್ಕಾಗಿ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.   6ನೇ ತರಗತಿಯಿಂದ 10ನೇ ತರಗತಿಯವರೆಗೆ ಸುಮಾರು 300ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಹಿತದೃಷ್ಟಿಯಿಂದ ಸುಸಜ್ಜಿತವಾದ 05 ತರಗತಿ ಕೊಠಡಿಗಳು, 06 ಶೌಚಗೃಹ, ಡೈನಿಂಗ್ ಹಾಲ್, ಅಡುಗೆ ಕೋಣೆ ಹಾಗೂ ಕನಿಷ್ಠ 01 ರಿಂದ 02 ಸಿಬ್ಬಂದಿಗಳಿಗೆ ಆಪೀಸ್ ಕೊಠಡಿಗಳು, ಯು.ಪಿ.ಎಸ್, ಸೇರಿದಂತೆ ಎಲ್ಲಾ ಮೂಲ […]

Continue Reading

ಗೃಹ ಆರೋಗ್ಯ ಯೋಜನೆ: ಮನೆ ಮನೆ ಭೇಟಿ ನೀಡಿ ಅರೋಗ್ಯ ತಪಾಸಣೆ ನಡೆಸಲಿರುವ ಆರೋಗ್ಯ ಸಿಬ್ಬಂದಿ

ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಮನೆ ಮನೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಜಿ.ಪಂ ಸಿಇಓ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದರು.   ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ವೇಕ್ಷಣಾ ಘಟಕ ಇವರ ವತಿಯಿಂದ ಹಮ್ಮಿಕೊಂಡಿದ್ದ ಗೃಹ ಅರೋಗ್ಯ ಯೋಜನೆ ಕಾರ್ಯಗಾರ ಮತ್ತು ಜಿಲ್ಲಾದ್ಯಂತ ಗೃಹ ಅರೋಗ್ಯ ಯೋಜನೆ ವಿಸ್ತರಣೆ […]

Continue Reading

ದಲಿತನೆಂಬ ಕಾರಣಕ್ಕೆ ಜಮೀನಿಗೆ ತಂತಿಬೇಲಿ ಹಾಕಲು ತಡೆ, ಕೋರ್ಟ್ ಆದೇಶದಂತೆ ತಂತಿಬೇಲಿ ಹಾಕಿದ ಭಾರತೀಯ ಶೂದ್ರ ಸೇನೆ

ಹೆಗ್ಗಡಿಹಳ್ಳಿ : ಕೋರ್ಟ್ ನಿಂದ ದಲಿತರ ಪರ ಆದೇಶವಾಗಿದ್ದರೂ ಜಮೀನು ಮಾಲೀಕರಿಗೆ ಪಕ್ಕದ ಜಮೀನಿನ ಮಾಲೀಕರಿಂದ ದೌರ್ಜನ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ಶೂದ್ರ ಸೇನೆ ವತಿಯಿಂದ ಸಂಕೇತಿಕ ಪ್ರತಿಭಟನಾ ಧರಣಿ ಮಾಡಲಾಯಿತು.   ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿ ಹೆಗ್ಗಡಿಹಳ್ಳಿ ಗ್ರಾಮದ ಸ.ನಂ.100/1 ರಲ್ಲಿ 0.02.08 ಗುಂಟೆ ಜಮೀನು ಓ.ಎಂ.ನಾರಾಯಣಸ್ವಾಮಿ, ಬಾಬು, ನಾಗರಾಜು ಎಂಬುವರಿಗೆ ಸೇರಿದ್ದು ಎಂಬ ಆದೇಶವಾಗಿದ್ದರು, ಜಮೀನ ಮಾಲೀಕರು ದಲಿತರು ಎಂಬ ಕಾರಣಕ್ಕೆ ಪಕ್ಕದ ಜಮೀನಿನ ಮಾಲೀಕರು […]

Continue Reading

ದೊಡ್ಡಬಳ್ಳಾಪುರ : ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಸಚಿವ ಡಾ.ಎಚ್.ಕೆ ಪಾಟೀಲ್ ಸೇರಿದಂತೆ ಹಲವು ಗಣ್ಯರಿಂದ ಚಾಲನೆ

ಬೌದ್ಧ ನೆಲೆಗಳನ್ನು ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ.ಎಚ್.ಕೆ ಪಾಟೀಲ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮದ ಬೂದಿಗುಂಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ರಾಜ್ಯದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ ನೀಡುವ ಮೂಲಕ […]

Continue Reading

ಮಾಹಿತಿ ಕೊಡದ ಅಧಿಕಾರಿಗಳ ವಿರುದ್ಧ ಕೆ ಆರ್ ಎಸ್ ಆಕ್ರೋಶ : ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ನೇತೃತ್ವದಲ್ಲಿ ಸರ್ಕಾರಿ ಕಛೇರಿಗೆ ಭೇಟಿ

ಈಗಾಗಲೇ ಹತ್ತಾರು ಬಾರಿ ಹತ್ತಾರು ಮನವಿಗಳನ್ನು ಅಧಿಕಾರಿಗಳಿಗೆ ಸಲ್ಲಿಸಿದರು ಈವರೆಗೂ ಆ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ, ಅದರ ವಾಸ್ತವಿಕ ಪರಿಸ್ಥಿತಿ ಏನು ಎಂಬುದರ ಬಗ್ಗೆ ಮಾಹಿತಿಯನ್ನು ಅರ್ಜಿದಾರರಾದ ನಮಗೆ ನೀಡಿಲ್ಲ ಇಂದು ಅಧಿಕಾರಿಗಳಿಂದ ನಾವು ನೀಡಿದ್ದ ಮನವಿ ಸಂಬಂಧಿತ ಮಾಹಿತಿಯನ್ನು ಪಡೆಯಲು ಬಂದಿದ್ದೇವೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ KRS ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ. ಶಿವಶಂಕರ್ ತಿಳಿಸಿದರು. ಬುಧವಾರ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಗೆ ಭೇಟಿಕೋಟ್ಟು ಮಾತನಾಡಿದ ಅವರು ಹಲವಾರು ಬಾರಿ […]

Continue Reading

ನಿಮ್ಮದು ಆಟೋ ಇದೆಯಾ ಹಾಗಾದರೆ ದಂಡ ಬೀಳುತ್ತೆ ಹುಷಾರ್ ಏಕೆ ಅಂತೀರಾ ಈ ಸುದ್ದಿ ನೋಡಿ….

ಆಟೋ ಚಾಲಕರೇ ಎಚ್ಚರ ಆಟೋ ಹಿಂದೆ ಜಾಹಿರಾತು ಹಾಕುವ ಮುಂಚೆ ಯೋಚಿಸಿ ಯಾಕಂದ್ರೆ ಈಗಾಗಲೇ ಬೆಂಗಳೂರು ನಗರದಲ್ಲಿ ಗೊತ್ತಿಲ್ಲದೆ ಹಣದ ಆಸೆಗೋ ಅಥವಾ ಉಚಿತವಾಗಿ ಆಟೋ ಟಾಪ್ ಸಿಗುತ್ತೆ ಅನ್ನೋ ಕಾರಣಕ್ಕೋ ತಮ್ಮ ಆಟೋ ಹಿಂದೆ ಜಾಹಿರಾತು ಹಾಕಿದ್ದ ಹಲವಾರು ಆಟೋ ಚಾಲಕರು ಫೈನ್ ಕಟ್ಟಿದ್ದಾರೆ.   ಹೌದು ನಿತ್ಯ ಜೀವನ ಸಾಗಿಸಲು ಹಲವಾರು ಸವಾಲುಗಳನ್ನು ಎದುರಿಸುತ್ತಾ ಊಟ ತಿಂಡಿ ಮಾಡಿದೆ ಸಾರ್ವಜನಿಕರ ಸೇವೆ ಮಾಡ್ತೀವಿ ಅಂತ ಪಣತೊಟ್ಟು ಆಟೋ ಓಡಿಸುತ್ತಿರೋ ಎಷ್ಟು ಆಟೋ ಚಾಲಕರು ಈ […]

Continue Reading

ಇಂದು ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

ಶಿವಮೊಗ್ಗ (ವಿಜಯಮಿತ್ರ) : ಸೋಮವಾರ (ಜು. 14) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ (Nithin Gadkari) ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಲಿದ್ದಾರೆ.       ಹತ್ತಾರು ಪ್ರವಾಸಿ ತಾಣಗಳನ್ನ ತನ್ನ ಮಡಿಲಿನಲ್ಲಿ ಇಟ್ಟುಕೊಂಡಿರುವ ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಹೆಮ್ಮೆ ಸೇರ್ಪಡೆಗೊಳ್ಳುತ್ತಿದೆ. ಅದೇ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣ ಆಗಿರುವ ಸಿಗಂದೂರಿನ ಹೊಸ ಸೇತುವೆ (Sigandur Bridge).   ಶರಾವತಿ ಹಿನ್ನೀರು ಪ್ರದೇಶಗಳಾದ ಕರೂರು ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾಯತಿ ವ್ಯಾಪ್ತಿಯ ಜನರಿಗೆ ಹಾಗೂ […]

Continue Reading