ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಲೂರು ವೆಂಕಟರಾಯರ ಜನ್ಮದಿನಾಚರಣೆ

ಕರ್ನಾಟಕ ಏಕೀಕರಣ ಚಳುವಳಿ ಮೂಲಕ‌ ಕನ್ನಡ ನಾಡನ್ನು ಒಗ್ಗೂಡಿಸಿದವರು ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು ಎಂದು ಹಿರಿಯ ಸಾಹಿತಿ ಶರಣಯ್ಯ ಹಿರೇಮಠ ತಿಳಿಸಿದರು.   ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಲೂರು ವೆಂಕಟರಾಯರು ಜನ್ಮದಿನಾಚರಣೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಇತಿಹಾಸ ಮತ್ತು ಕನ್ನಡ ಸಾಹಿತ್ಯದ  ಬಗ್ಗೆ ಅಪಾರ ಆಸಕ್ತಿ,  ಅಧ್ಯಯನಶೀಲರಾಗಿದ್ದ  ಆಲೂರು ವೆಂಕಟರಾಯರು  ಕನ್ನಡ ಸಾಹಿತಿಗಳಿಗೆ ಮತ್ತು  ಅವರ ಪುಸ್ತಕ ಪ್ರಕಟಣೆಗೆ […]

Continue Reading

ತೂಬಗೆರೆಯಲ್ಲಿ ಬಾಬಯ್ಯನ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗುರುವಾರ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.   ಹಿಂದು-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಶುಕ್ರವಾರ ಬೆಳಿಗ್ಗೆ, ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ  ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ […]

Continue Reading

ಅಂಗವಿಕಲರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅನ್ ಲೈನ್ ಮುಖಾಂತರ National Scholarship Portal ನಲ್ಲಿ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ನಿಗಧಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು.   ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಫ್ರಿ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಆಗಸ್ಟ್ 31, ಪೋಸ್ಟ್ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿಗಳಿಗೆ ಅಕ್ಟೋಬರ್ 10 […]

Continue Reading

ಮಾದಕ ವ್ಯಸನದಿಂದ ಯುವಜನತೆ ದೂರವಿರಬೇಕು – ಡಾ.ನವೀನ್ ಕುಮಾರ್

ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅಡ್ಡಿಯಾಗುತ್ತಿರುವ ಮಾದಕ ವ್ಯಸನದಿಂದ ಯುವಜನತೆ ದೂರವಿರಬೇಕು ಎಂದು ದೊಡ್ಡಬಳ್ಳಾಪುರ ಮಹಿಳಾ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಕರೆಕೊಟ್ಟರು.   ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏರ್ಪಡಿಸಿದ್ದ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ಯುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,ಯುವಕರ ಶಕ್ತಿಯನ್ನು ಹಾಳುಗೆಡವಲು ಮಾದಕ ವ್ಯಸನವು ಭೂತದ ತರ ಕಾಡುತಿದ್ದು ಬೀಡಿ.ಸಿಗರೇಟ್ ಮದ್ಯಪಾನ ಜೂಜಾಟದಂತ ಅನೇಕ ದುಶ್ಚಟಗಳಿಂದ ವಿದ್ಯಾರ್ಥಿಗಳು ಹಾಗು ಯುವ ಜನತೆ ಒಳಗಾಗಬಾರದು,ನಮಗಿರುವ 24ಘಂಟೆಗಳ ಸಮಯದಲ್ಲಿ […]

Continue Reading

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ : ಸಚಿವ ಸಂತೋಷ್ ಲಾಡ್

ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನ ಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಹೇಳಿದರು.   ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ […]

Continue Reading

ಅನ್ನಭಾಗ್ಯ ಯೋಜನೆ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಜಾಗೃತಿ ಸಭೆ

ವಿಕಾಸ ಸೌಧದಲ್ಲಿ ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜಾಗೃತಿ ಸಮಿತಿಯ ಸಭೆ ನಡೆಯಿತು.   ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ – 2013ರಡಿಯಲ್ಲಿ ರೂಪಿಸಿರುವ ಜಾಗೃತಿ ಸಮಿತಿಗಳ ಕುರಿತು ಈ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದವು.   ಕರ್ನಾಟಕ ಸರ್ಕಾರವು ಹೊರಡಿಸಿದ ಅಧಿಸೂಚನೆಯಂತೆ “ನಿರ್ದಿಷ್ಟ ಗುರುತುಯುಳ್ಳ ಸಾರ್ವಜನಿಕ ವಿತರಣಾ ಪದ್ದತಿ ನಿಯಮ – 2016” ರಚಿಸಿ ರಾಜ್ಯದಲ್ಲಿ ನಾಲ್ಕು ಹಂತಗಳಲ್ಲಿ […]

Continue Reading

ಸರ್ಕಾರ ನೀಡುತ್ತಿರುವ ಎಲ್ಲಾ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು – ಸಚಿವ ಕೆ.ಎಚ್. ಮುನಿಯಪ್ಪ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಆಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಜಿಲ್ಲೆಯ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ, ಬ್ರಿಗೇಡ್ ಫೌಂಡೇಷನ್‌ನಿಂದ ಸಿ.ಎಸ್.ಆರ್. ಅನುದಾನದಡಿ ನಿರ್ಮಿಸಲಾದ ಸರ್. ಎಂ. ವಿಶ್ವೇಶ್ವರಯ್ಯ […]

Continue Reading

ಪ್ರಜಾ ವಿಮೋಚನಾ ಚಳವಳಿ-ಸಮತಾವಾದ(PVC-S) ನ ಲೋಗೋ, ಹೆಸರು ಮತ್ತು ಲೆಟರ್ ಹೆಡ್‌ಗಳನ್ನು ಬಳಸುವ ಮುನ್ನ ಎಚ್ಚರ – ಸಿ.ಭವಾನಿ ಪ್ರಸಾದ್

ದೊಡ್ಡಬಳ್ಳಾಪುರ ( ವಿಜಯಮಿತ್ರ ಸುದ್ದಿ ): ಸಂಘಟನೆಯಲ್ಲಿ ಈ ಹಿಂದೆ ಇದ್ದ ಹಲವು ಸದಸ್ಯರುಗಳನ್ನು ಉಚ್ಛಟಿಸಿ ಹುದ್ದೆಯಿಂದ ತೆರೆವುಗೊಳಿಸಲಾಗಿದೆ ಇನ್ನುಮುಂದೆ ಉಚ್ಚಾಟಿತ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಸಂಘಟನೆಯ ಲೋಗೋ, ಹೆಸರು ಮತ್ತು ಲೆಟರ್ ಹೆಡ್‌ಗಳನ್ನು ಈ ಸಂಘಟನೆಯ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಾರದೆಂದು ಪ್ರಜಾ ವಿಮೋಚನಾ ಚಳವಳಿ-ಸಮತಾವಾದ(PVC-S) ನ ರಾಜ್ಯಾಧ್ಯಕ್ಷರಾದ ಸಿ.ಭವಾನಿ ಪ್ರಸಾದ್ ತಿಳಿಸಿದರು ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದ 1 ರಿಂದ 7 ಸದಸ್ಯರಾದ ಯಡವನಹಳ್ಳಿ ಕೃಷ್ಣಪ್ಪ,ಪಿ.ಎಂ. ಮಲ್ಲಿಕಾರ್ಜುನಸ್ವಾಮಿ, ಮದ್ದೂರಪ್ಪು ,ವೆಂಕಟೇಶ್ […]

Continue Reading

ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾ*ವು

ವಿದುರಾಶ್ವತ್ಥ ರೈಲು ನಿಲ್ದಾಣದ ಬಳಿ ರೈಲ್ವೆ ಹಳಿಯಲ್ಲಿ ಅಪರಿಚಿತ ಹೆಂಗಸು ಸುಮಾರು 45 ವರ್ಷದವಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.   ಯಶವಂತಪುರ ರೈಲ್ವೆ ಪೋಲಿಸ್ ಠಾಣೆ UDR.ನಂ. 113/2025 ಕಲಂ 194 BNSS ರೀತ್ಯಾ ಪ್ರಕರಣ ಧಾಖಲು ಮಾಡಿಕೊಂಡಿದ್ದು ಮೃತಳ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.   ಚಹರೆ-165 ಸೆಂ.ಮೀ ಎತ್ತರ, ಎಣ್ಣೆಗೆಂಪು ಮೈ ಬಣ್ಣ ಇದ್ದು , ದುಂಡುಮುಖ ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.   ಬಟ್ಟೆಗಳು – ಕೆಂಪು ಬಣ್ಣದ ಸೀರೆ ,ಕಪ್ಪು ಬಣ್ಣದ ಜಾಕೆಟ್ […]

Continue Reading

ದೊಡ್ಡಬಳ್ಳಾಪುರದಲ್ಲಿ ಜುಲೈ 13ರಂದು ನೆಡೆಯಲಿದೆ ರಾಜ್ಯ ಮಟ್ಟದ ಗಾಳಿಪಟ ಉತ್ಸವ

ದೊಡ್ಡಬಳ್ಳಾಪುರ (ವಿಜಯಮಿತ್ರ ಸುದ್ದಿ ): ಜೂಲೈ 13ರಂದು ನಗರದ ಭುವನೇಶ್ವರಿನಗರದಲ್ಲಿರುವ ಮುನಿನಂಜಪ್ಪನವರ ಜಮೀನಿನಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ಕಾರ್ಯದರ್ಶಿ ಪ್ರಕಾಶ್ ತಿಳಿಸಿದರು.   ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ತಾಲ್ಲೂಕಿನ ಅತ್ಯಂತ ಪ್ರಾಚೀನ ಹಾಗೂ ಜನಪ್ರಿಯ ಕಲೆಯಾದ ಗಾಳಿಪಟ ತಯಾರಿಸುವ ಹಾಗೂ ಹಾರಿಸುವ ಕಲೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ನಮ್ಮ ಸಂಘವು ಕಳೆದ 18 ವರ್ಷಗಳಿಂದ ಗಾಳಿಪಟ ಉತ್ಸವ […]

Continue Reading