ಡಾ. ಭವ್ಯಶ್ರೀ ಶೆಟ್ಟಿ ಗಾರ್ ಉದ್ಯಾವರ ರವರಿಗೆ ವಿಶ್ವ ಕನ್ನಡ ವಿದ್ಯಾರತ್ನ ಪ್ರಶಸ್ತಿ

ಡಾ. ಭವ್ಯಶ್ರೀ ಶೆಟ್ಟಿ ಗಾರ್ ಉದ್ಯಾವರ ರವರಿಗೆ ವಿಶ್ವ ದರ್ಶನ ಪತ್ರಿಕೆ “ವಿಶ್ವ ಕನ್ನಡ ವಿದ್ಯಾರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.   ಡಾ. ಭವ್ಯಶ್ರೀ ಶೆಟ್ಟಿ ಗಾರ್ ಉದ್ಯಾವರ ರವರು ವೈಜ್ಞಾನಿಕ ಕ್ಷೇತ್ರಗಳಲ್ಲಿ ಮಾಡಿರುವ ಗಣನೀಯ ಸಾಧನೆಗಳ ಜೊತೆಗೆ ”STUDIES ON CELL SUSPENSION CULTURE & IN VITROGENE EXPRESSION OF PLUMULE DERIVED EMBRYOGENIC CALLI IN COCONUT ” ಎಂಬ ಮಹಾಪ್ರಬಂಧದ ಪ್ರಾಮುಖ್ಯತೆಯನ್ನು ಗುರುತಿಸಿ ಕರ್ನಾಟಕ ರಾಜ್ಯದ ಧಾರವಾಡದ ವಿಶ್ವ ದರ್ಶನ […]

Continue Reading

ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌ ಮತ್ತು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನದ ಆಚರಣೆ

ದೊಡ್ಡಬಳ್ಳಾಪುರ: ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ ನೇತೃತ್ವದಲ್ಲಿ ಬುಧವಾರ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸ್‌ ಹಾಗೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆ, ಸದ್ಭಾವನಾ ದಿನ ಕಾರ್ಯಕ್ರಮ ನಡೆಯಿತು.   ದೇವರಾಜ್‌ ಅರಸ್‌ ಹಾಗೂ ರಾಜೀವ್‌ಗಾಂಧಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ, ಹಿಂದುಳಿದ ವರ್ಗಗಳ ಸಮಗ್ರ ಅಭ್ಯುದಯದ ಆಶಯವನ್ನು ಬಿತ್ತುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ವ್ಯವಸ್ಥಿತವಾಗಿ […]

Continue Reading

ದುರ್ಬಲ ವರ್ಗಗಳ ಸಮುದಾಯದವರಿಗೆ ಆತ್ಮಾಭಿಮಾನ ಮೂಡಿಸಿದವರು ಡಿ ದೇವರಾಜು ಅರಸು – ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಡವರ, ಹಿಂದುಳಿದವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಕರ್ನಾಟಕ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರಾಜ್ಯಕ್ಕೆ ಅವರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಡಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು ಡಿ.ದೇವರಾಜು ಅರಸು ಅವರು 1915 ರಲ್ಲಿ […]

Continue Reading

ಗರ್ಭಿಣಿ, ಮಕ್ಕಳ ಆರೋಗ್ಯಕ್ಕೆ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕ:ಎಡಿಸಿ ಸೈಯಿದಾ ಅಯಿಷಾ

ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕವಾಗಿದ್ದು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ ಹಾಗೂ ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ […]

Continue Reading

ದೊಡ್ಡಬಳ್ಳಾಪುರ ನಗರದ ಹಲವು ಕಡೆ ಆಗಸ್ಟ್ 22 ರಂದು ಕರೆಂಟ್ ಇರಲ್ಲ… ಎಲ್ಲಿ ಸುದ್ದಿ ನೋಡಿ…

ದೊಡ್ಡಬಳ್ಳಾಪುರ ನಗರದಲ್ಲಿ ಡಿ.ಕ್ರಾಸ್ ಉಪಕೇಂದ್ರ(66/11ಕೆವಿ)ದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ತಿಳಿಸಿದ್ದಾರೆ.   ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬನ್ಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, […]

Continue Reading

ಅಕ್ರಮ ಹೆಂಡ ಸಾಗಾಣಿಕೆ ಮತ್ತು ಮಾರಾಟ : ನಿಖರ ಮಾಹಿತಿ ಪಡೆದು ಆರೋಪಿಯನ್ನು ಸಾಕ್ಷಿ ಸಮೇತ ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

Doddaballapura : ಆಂಧ್ರ ಮೂಲದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹೆಂಡವನ್ನು ಇಂದು ಮುಂಜಾನೆ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ವರದನಹಳ್ಳಿ ನಿವಾಸಿ ಪವಿತ್ರಾ ಎಂಬಾಕೆ ಪ್ರತಿನಿತ್ಯ ಆಂಧ್ರ ಮೂಲದಿಂದ ನೀರಾ (ಹೆಂಡ ) ವನ್ನು ತಂದು ಮಾರಾಟ ಮಾಡುತ್ತಿದ್ದಾಳೆ ಎಂಬ ದೂರಿನ ಹಿನ್ನಲೆ ಇಂದು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಆರೋಪಿಯನ್ನು ಸಾಕ್ಷಿ ಸಮೇತ ಪವಿತ್ರಳನ್ನು ಬಂಧಿಸಿದ್ದಾರೆ. ಆರೋಪಿ ಪವಿತ್ರಳ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆಗೆ […]

Continue Reading

ಅರಿವು ಕೇಂದ್ರಗಳಿಗೆ ಅಲೆಕ್ಸಾ ಮತ್ತು ಬುಕ್ಸ್ ಕಿಟ್ ವಿತರಣೆ

ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಅವಶ್ಯಕವಾಗಿದೆ. ಇತಿಹಾಸ,ಕಲೆ,ವಿಜ್ಞಾನ,ಪ್ರಯೋಗ, ಹೊಸ ಹೊಸ ತಂತ್ರಜ್ಞಾನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಓದಲು ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ನೂರು ಪುಸ್ತಕಗಳಿರುವ ಕಿಟ್ ಮತ್ತು ದೃಷ್ಟಿ ಸವಾಲಿರುವವರಿಗೆ ಹೆಚ್ಚು ಉಪಯುಕ್ತವಾಗುವ ಅಲೆಕ್ಸಾವನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಕೆ ಎನ್ ಅನುರಾಧ ಅವರು ಹೇಳಿದರು   ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮತ್ತು ಪಾಲಕರಿಗೆ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು […]

Continue Reading

*ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ*

ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಆರ್ಥಿಕ ಅಭಿವೃದ್ದಿಗಾಗಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಯೋಜನೆ (ಕಿರು ಆರ್ಥಿಕ ಚಟುವಟಿಕೆಗಳಿಗೆ)ಮತ್ತು ನೇರ ಸಾಲ ಯೋಜನೆ (ಸಹಾಯಧನ ಗರಿಷ್ಠ ರೂ,2 ಲಕ್ಷ). ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ಹೈನುಗಾರಿಕೆ (ಸಹಾಯಧನ ಗರಿಷ್ಠ ರೂ, 1.25 ಲಕ್ಷ), ಫಾಸ್ಟ್ ಫುಡ್ ಟ್ರಕ್, ಟ್ರೈಲರ್/ ಮೊಬೈಲ್ ಕಿಚನ್ […]

Continue Reading

ತೂಬಗೆರೆ : ಸಲ್ಲಾಪುರಮ್ಮ ದೇವಾಲಯ ಲೋಕಾರ್ಪಣೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮದೇವತೆ  ಶ್ರೀ ಸಲ್ಲಾಪುರಮ್ಮ ದೇವಾಲಯವು ಇತ್ತೀಚೆಗೆ ನವೀಕರಿಸಲ್ಪಟ್ಟು ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.   ದೇವಾಲಯದ ಜೀರ್ಣೋದ್ಧಾರ ಕಾರ್ಯ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಹೊಸದಾಗಿ ನಿರ್ಮಿಸಲಾದ ಕಪ್ಪುಕಲ್ಲಿನ ದೇವಿ ವಿಗ್ರಹವನ್ನು ವೈದಿಕ ಮಂತ್ರೋಚ್ಚಾರಣೆಯ ಮಧ್ಯೆ ಪ್ರತಿಷ್ಠಾಪಿಸಲಾಯಿತು. ಸಮಾರಂಭದ ಅಂಗವಾಗಿ ವೈದಿಕರು ಶಾಸ್ತ್ರೋಕ್ತ ವಿಧಾನದಲ್ಲಿ ಹೋಮ–ಹವನಗಳನ್ನು ನೆರವೇರಿಸಿ, ಪೂರ್ಣಾಹುತಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಕ್ತರು ಧಾರ್ಮಿಕ ಉತ್ಸಾಹದಿಂದ ದೇವಿಯನ್ನು ಪೂಜಿಸಿ ಆಶೀರ್ವಾದ ಪಡೆದರು.   ಲೋಕಾರ್ಪಣಾ ಸಮಾರಂಭದಲ್ಲಿ ಗ್ರಾಮಸ್ಥರು, ಸುತ್ತಮುತ್ತಲಿನ ಹಳ್ಳಿಗಳ ಭಕ್ತರು, ಹಿರಿಯರು ಹಾಗೂ ಮಹಿಳೆಯರು […]

Continue Reading

ಕುರುಬ ಸಮಾಜಕ್ಕೆ ವಿಶೇಷವಾದ ಇತಿಹಾಸವಿದೆ – ಗಿರಿಧರ್ ತಿಮ್ಮಪ್ಪ ನಾಯಕ

ದೊಡ್ಡಬಳ್ಳಾಪುರ:ಸ್ವಾಭಿಮಾನ ಹಾಗೂ ಜನ್ಮಭೂಮಿಯ ಅಭಿಮಾನದ ವಿಚಾರದಲ್ಲಿ ರಾಯಣ್ಣ ಇತರರಿಗೆ ಮಾದರಿ ಹಾಗೂ ದೇಶಾಭಿಮಾನ ದೇಶಭಕ್ತಿ ನಿಷ್ಠೆ ಪ್ರಾಮಾಣಿಕತೆ, ಶೌರ್ಯ ಸಾಹಸಕ್ಕೆ ಮತ್ತೊಂದು ಹೆಸರೇ ಸಂಗೊಳ್ಳಿ ರಾಯಣ್ಣ ಎಂದು ಪ್ರಗತಿಪರ ಚಿಂತಕ ನಿಕೇತ್ ರಾಜ್ ಮೌರ್ಯ ಹೇಳಿದರು.   ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಹಕಾರ ಸಂಘವತಿಯಿಂದ ನೆಡೆದ ಕುರುಬ ಸಮಾಜದ ಹತ್ತನೇ ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು […]

Continue Reading