ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು   ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ […]

Continue Reading

ಸೆ.8 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ವಿಜಯಮಿತ್ರ ಸುದ್ದಿ (ಸೆ. 05) : 2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಸೆಪ್ಟೆಂಬರ್ 08 ರಂದು ಬೆಳಿಗ್ಗೆ 10:30ಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.   ದಸರಾ ಕ್ರೀಡಾಕೂಟದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೇರಿಸಲಿದ್ದು, ಕಾರ್ಯಕ್ರಮದ […]

Continue Reading

ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಕೊಟ್ಟ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ :ನಗರದ ತೇರಿನ ಬೀದಿ ವೃತ್ತದ ಬಳಿ ನಿರ್ಮಾಣ ಹಂತದಲ್ಲಿರುವ ಭವ್ಯವಾದ ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣಗೊಂಡಿದೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಪೂರ್ಣವಾಗದೆ ಅರ್ಧಕ್ಕೆ ನಿಂತಿದ್ದು. ತಾಲ್ಲೂಕಿನ ನಾಯಕ ಸಮುದಾಯ ಸೇರಿದಂತೆ ಬಡ ಜನರಿಗೆ ಯಾವುದೇ ಶುಭ ಸಮಾರಂಭಗಳನ್ನು ನಡೆಸಲು ಜಾಗದ ಕೊರತೆ ಉಂಟಾಗಿದೆ.   ಹೌದು ನಾಯಕ ಸಮಾಜದ ಆಶಯದಂತೆ ಭವನ ನಿರ್ಮಾಣಕ್ಕೆ ಒಂದು ಎಕರೆ ಜಮೀನು ಮತ್ತು ಒಂದೂವರೆ ಕೋಟಿ ರೂ. ಅನುದಾನ ಬಿಡುಗಡೆಯಾಗಿ ಕಟ್ಟಡಕ್ಕೆ ಮೂರು ವರ್ಷಗಳ ಹಿಂದೆ ಶಂಕುಸ್ಥಾಪನೆ […]

Continue Reading

ಪತ್ರಿಕಾ ವಿತರಕರ ದಿನಾಚರಣೆ : ಪತ್ರಿಕಾ ವಿತರಕರಿಗೆ ಯಾವುದೇ ಸರ್ಕಾರಿ ಸವಲತ್ತುಗಳು ದೊರೆತ್ತಿಲ್ಲ – ಪ್ರೊ. ಕೆ ಆರ್ ರವಿಕಿರಣ್

ದೊಡ್ಡಬಳ್ಳಾಪುರ (ಸೆ. 04) : ಈ ಹಿಂದೆ ಪತ್ರಿಕೆಗಳಿಗೆ ದೊಡ್ಡ ಬೇಡಿಕೆಯಿತ್ತು. ಆದರೆ ಈಗ ಬೇಡಿಕೆ ಕುಸಿತವಾಗಿದೆ. ವಿದ್ಯಾವಂತರ ಸಂಖ್ಯೆ ಹೆಚ್ಚಳವಾಗಿದ್ದರೂ ಕೂಡ ಓದುಗರ ಸಂಖ್ಯೆ ಹೆಚ್ಚಳವಾಗಿಲ್ಲ. ಕಾಲ ಬದಲಾದಂತೆ ಪತ್ರಿಕಾ ವಿತರಣೆಗೂ ದೊಡ್ಡ ಹೊಡೆತ ಬಿದ್ದಿದೆ ಎಂದು ಆರ್‌.ಎಲ್ ಜಾಲಪ್ಪ ಲಯನ್ಸ್‌ ಸಂಸ್ಥೆಯ ಅಧ್ಯಕ್ಷ ಪ್ರೊ.ಕೆ ಆರ್ ರವಿಕಿರಣ್ ತಿಳಿಸಿದರು. ನಗರದ ಸೋಮೇಶ್ವರ ದೇವಾಲಯದ ಆವರಣದಲ್ಲಿ ತಾಲೂಕು ದಿನಪತ್ರಿಕೆ ವಿತರಕರ ಕ್ಷೇಮಾಭಿವೃದ್ದಿ ಸಂಘ ಇವರ ಆಶ್ರಯದಲ್ಲಿ ನಡೆದ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು […]

Continue Reading

ಈದ್ ಮಿಲಾದ್ ಹಬ್ಬದಲ್ಲಿ ಡಿಜೆ ಬಳಸುವಂತಿಲ್ಲ – ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ

ಗೌರಿ ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದಲ್ಲೂ ಕೂಡ ಡಿಜೆ ಬಳಕೆ ನಿಷೇಧ ಮಾಡಿದ್ದು ಯಾರಾದರೂ ಕಾನೂನು ಉಲ್ಲಂಘನೆ ಮಾಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಸಾಧಿಕ್ ಪಾಷಾ ತಿಳಿಸಿದ್ದಾರೆ.   ಈ ಕುರಿತು ಮಾಹಿತಿ ನೀಡಿರುವ ಅವರು ಈ ಹಿಂದೆ ಗೌರಿ ಗಣೇಶ ಹಬ್ಬದಲ್ಲಿ ರಾಜ್ಯ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ತಾಲೂಕಿನಾದ್ಯಂತ ಡಿಜೆ ನಿಷೇಧಿಸಿ ಬಳಕೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು […]

Continue Reading

ರೋಜಿಪುರದ ಅಂಗನವಾಡಿಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ : ಸೆಪ್ಟೆಂಬರ್ 12ರಿಂದ ಅಕ್ಟೋಬರ್ 11 ರವರೆಗೆ ಒಂದು ತಿಂಗಳ ಕಾಲ ನೆಡೆಯಲಿರುವ ಅಭಿಯಾನ

ದೊಡ್ಡಬಳ್ಳಾಪುರ : ಸೆಪ್ಟೆಂಬರ್ 12ರಿಂದ ಅಕ್ಟೋಬರ್ 11 ರವರೆಗೆ ಒಂದು ತಿಂಗಳ ಕಾಲ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದರ ಭಾಗವಾಗಿ ರೋಜಿಪುರದ ಅಂಗನವಾಡಿಯಲ್ಲಿ ಪ್ರಾಸ್ತಾವಿಕವಾಗಿ ಚಾಲನೆ ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿನೋದ ರಾಜು ತಿಳಿಸಿದರು   ನಗರದ ರೋಜಿಪುರ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಸಬಾ ಹೋಬಳಿ ಒಂದನೇ ವೃತ್ತದ ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ […]

Continue Reading

‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿಎಫ್‌ಐಆರ್‌ ದಾಖಲು

ಮಹಿಳೆಯೊಬ್ಬರ ಮೇಲೆ ಹಲ್ಲೆನಡೆಸಿ ಅವಾಚ್ಯಶಬ್ಧಗಳಿಂದ ನಿಂದಿಸಿದ ಆರೋಪ ಸಂಬಂಧ ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿಎಫ್‌ಐಆರ್‌ ದಾಖಲಾಗಿದೆ.   ರಾಜ್ಯಸರಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ. ನೇತಾಜಿ ನಗರದ ನಿವಾಸಿ ಶಶಿಕಲಾ (38) ಎಂಬುವವರು ನೀಡಿದ ದೂರಿನ ಅನ್ವಯ, ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪೂರ್ವವಿಭಾಗದ ಡಿಸಿಆರ್‌ಇ ಠಾಣೆಯಲ್ಲಿಆ.29ರಂದು ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಜಾತಿ […]

Continue Reading

ತೂಬಗೆರೆಯಲ್ಲಿ ಐತಿಹಾಸಿಕ ಮೆರವಣಿಗೆ ಅಂಬಾರಿಯಲ್ಲಿ ಚಾವಡಿ ಗಣಪತಿ : ಜಂಬೂಸವಾರಿ ಕಣ್ತುಂಬಿಕೊಂಡ ಜನತೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ದಸರಾ ಮಾದರಿ ಆನೆ ಅಂಬಾರಿಯಲ್ಲಿ ಚಾವಡಿ ಗಣಪತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು .   ಕೇವಲ ಹೋಬಳಿ ಅಷ್ಟೇ ಅಲ್ಲದೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ವಿಜೃಂಭಣೆಯಿಂದ ನೆಡೆದ ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ ಎಚ್ ಮುನಿಯಪ್ಪ ಮಾತನಾಡಿ ದೇವನಹಳ್ಳಿ ವ್ಯಾಪ್ತಿಯಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮ ಯಾವುದೇ ಪಕ್ಷ ಭೇದವಿಲ್ಲದೆ ಎಲ್ಲರೂ […]

Continue Reading

ತೂಬಗೆರೆಯಲ್ಲಿ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆ – ಇಂದು ಭವ್ಯ ವಿಸರ್ಜನೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯುತ್ತಿದೆ. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ ಸಾಂಸ್ಕೃತಿಕ ಇತಿಹಾಸದಲ್ಲಿ ಸ್ಮರಣೀಯ ಕ್ಷಣವಾಗಲಿದೆ ಎಂದು ಸಮಿತಿಯ ಅಧ್ಯಕ್ಷ ಮಧು ತಿಳಿಸಿದ್ದಾರೆ.   ಅಂತಿಮ ದಿನವಾದ ಸೆಪ್ಟೆಂಬರ್ 1, ಸೋಮವಾರ 2025ರಂದು ಮಧ್ಯಾಹ್ನದಿಂದ ಸಂಜೆವರೆಗೆ ಆನೆ ಅಂಬಾರಿ ಮೆರವಣಿಗೆ ಹಾಗೂ ಭವ್ಯ ವಿಸರ್ಜನೆ ಕಾರ್ಯಕ್ರಮ ಜರುಗಲಿದೆ. ಈ ಸಂದರ್ಭದಲ್ಲಿ ಸಾಂಸ್ಕೃತಿಕ, ನಾದಸ್ವರ, […]

Continue Reading