TAPMCS ಚುನಾವಣೆ : ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ

ದೊಡ್ಡಬಳ್ಳಾಪುರ : ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ವಿರುದ್ಧ ಸ್ಪರ್ದಿಸುವ ನಮ್ಮ ತೂಬಗೆರೆ ಹೋಬಳಿಯಲ್ಲಿ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆ ಕಾರಣಕ್ಕಾಗಿ ಕೆಲ ಜೆಡಿಎಸ್ ಪ್ರಮುಖರ ಜೊತೆಗೂಡಿ ಕಾಂಗ್ರೆಸ್ ನಾಯಕರು ಮಾತಾಯಾಚನೆ ಮಾಡುತ್ತಿದ್ದು , ದೊಡ್ಡಬಳ್ಳಾಪುರ ಕಾಂಗ್ರೆಸ್ ನಾಯಕರ ಈ ನೆಡೆಯನ್ನು ಖಂಡಿಸಿ ತೂಬಗೆರೆ ಹೋಬಳಿಯಿಂದ ತಾಲ್ಲೂಕಿನ TAPMCS ಚುನಾವಣೆಗೆ ಸ್ಪರ್ದಿಸಿದ್ದ ರಂಗಪ್ಪ ತಮ್ಮ ನಾಮಪತ್ರ ಹಿಂಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಸದಸ್ಯರು ಹಾಗೂ ಮಾಜಿ ಟಿ ಎ […]

Continue Reading

“ನಮ್ಮ ಶಾಲೆ ನಮ್ಮ ಹಕ್ಕು”ರಾಜಘಟ್ಟ ಮಾರುತಿ ಶಾಲೆ ಉಳಿಸಲು ಹಳೇ ವಿದ್ಯಾರ್ಥಿಗಳ ವಿಭಿನ್ನ ಪ್ರಯತ್ನ

ದೊಡ್ಡಬಳ್ಳಾಪುರ: ತಾಲೂಕಿನ ರಾಜಘಟ್ಟ ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ” ನಮ್ಮ ಶಾಲೆ ನಮ್ಮ ಹಕ್ಕು ” ಎಂಬ ಹೆಸರಲ್ಲಿ ಹಳೆ ವಿದ್ಯಾರ್ಥಿಗಳ ಮಹಾ ಸಂಗಮ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.   ಬೆಂಗಳೂರಿನ ಖಾಸಗಿ ಸಂಸ್ಥೆಯ ಆಡಳಿತ ಮಂಡಳಿಯ ಕೆಲವು ಸದಸ್ಯರು, ಕಟ್ಟಡ ನಿರ್ಮಿಸಿಕೊಂಡು ಕಳೆದ 5 ವರ್ಷಗಳಿಂದ ಖಾಸಗಿ ಶಾಲೆ ಶಾಲೆಯನ್ನು ನಡೆಸುತ್ತಿದ್ದಾರೆ. ಆದರೆ ಸುಮಾರು 50ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಗ್ರಾಮದ ಹೆಸರಾಂತ ಶ್ರೀ ಮಾರುತಿ ಪ್ರೌಢಶಾಲೆಯನ್ನು […]

Continue Reading

ಕೊನಘಟ್ಟ ಗ್ರಾ.ಪಂಗೆ ಅಧ್ಯಕ್ಷರಾಗಿ ಚಾಂದಿನಿ ಆಯ್ಕೆ.

ದೊಡ್ಡಬಳ್ಳಾಪುರ : ತಾಲ್ಲೂಕಿನ ಕಸಬಾ ಹೋಬಳಿಯ ಕೊನಘಟ್ಟ ಗ್ರಾಮ ಪಂಚಾಯತಿಗೆ ಜ್ಯೋತಿರಮೇಶ್ ರಾಜೀನಾಮೆಯಿಂದ ತೆರವಾಗಿದ್ದ ಹಿನ್ನೆಲೆ ಶುಕ್ರವಾರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಚಾಂದಿನಿಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾದ ತಾಲ್ಲೂಕು ಪಂಚಾಯತಿ ಒಓ ಮಂಜುನಾಥ ಹರ್ತಿ ಅವಿರೋಧ ಆಯ್ಕೆಯನ್ನ ಪ್ರಕಟಿಸಿದರು. ನೂತನ ಅಧ್ಯಕ್ಷ ಅಭಿನಂದಿಸಿ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಕೊನಘಟ್ಟ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬಿಜೆಪಿ ಮುಖಂಡರು ಅನೋನ್ಯದಿಂದ ಇದ್ದೇವೆ. ಮೈತ್ರಿಯಿಂದಾಗಿ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ನೂತನ […]

Continue Reading

ತಮ್ಮ ವಿಶೇಷ ದಿನಗಳನ್ನು ಆಚರಿಸಿಕೊಳ್ಳಲು ಸಜ್ಜಾದ “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್”

ದೊಡ್ಡಬಳ್ಳಾಪುರ :ಜೀವನದಲ್ಲಿ ಕನಸುಕಂಡಂತೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ನಾಮಕರಣ, ಗರ್ಭಿಣಿ ಸಮಾರಂಭ, ನಿಶ್ವಿತಾರ್ಥ, ಮದುವೆ ಸೇರಿದಂತೆ ಇತರೆ ತಮ್ಮ ವಿಶೇಷ ದಿನಗಳನ್ನು ಆಚರಿಸಿಕೊಳ್ಳಲು “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್” ಸಜ್ಜಾಗಿದ್ದು, ಇಂದು ಶಾಸಕ ಧೀರಜ್ ಮುನಿರಾಜ್ ಅವರು ಟೇಪ್ ಕತ್ತರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.. ನೂತನ “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್” ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಟೆಲ್ ರಾಜಣ್ಣ ಹಾಗೂ ಸತೀಶ್ ಅವರು ನನಗೆ ತುಂಬಾ ಆತ್ಮೀಯರು. ಅವರ ಆಹ್ವಾನದ ಮೇರೆಗೆ “ದಿ […]

Continue Reading

ಶಿಕ್ಷಕರ ಕ್ಷೇತ್ರದ ಮತದಾರರ ಹೆಸರು ಸೇರಿಸಲು ನ.06 ಕೊನೆಯ ದಿನ

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.   ಅದರಂತೆ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸೆಪ್ಟೆಂಬರ್ 30 ರಂದು ಪ್ರಕಟಣೆ ಹೊರಡಿಸಲಾಗಿದೆ. ನಮೂನೆ 19 ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 25 ರಂದು ಪ್ರಕಟಿಸಲಾಗುತ್ತಿದೆ. […]

Continue Reading

ದೊಡ್ಡಬಳ್ಳಾಪುರ ಶ್ರೀ ಮಡಿವಾಳರ ಸಂಘ (ರಿ.) ಮಾತ್ರ ಅಧಿಕೃತ – ಸಿ.ನಂಜಪ್ಪ

ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ಎರಡು- ಮೂರು ಮಡಿವಾಳ ಸಂಘಗಳು ಚಾಲ್ತಿಯಲ್ಲಿ ಇರುವುದು ಗಮನಕ್ಕೆ ಬಂದಿದೆ. ತಾಲ್ಲೂಕಿನ ಮಡಿವಾಳ ಸಂಘದ ಅಧ್ಯಕ್ಷರಾಗಿ ಶಂಕರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕದ ರಾಜ್ಯ ಮಡಿವಾಳರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಮಡಿವಾಳ ಮಾಚಿ ದೇವರ ಅಭಿವೃದ್ಧಿ ನಿಗಮ ಮಂಡಳಿ ನೂತನ ಅಧ್ಯಕ್ಷರಾದ ಸಿ.ನಂಜಪ್ಪ ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಕರ್ನಾಟಕ ರಾಜ್ಯ ಸರ್ಕಾರವು ಮಡಿವಾಳ ಸಮುದಾಯದ ಅಭಿವೃದ್ಧಿಗಾಗಿ ಮಾಚಿ ದೇವರ ಅಭಿವೃದ್ಧಿ […]

Continue Reading

🟢 ದೊಡ್ಡಬಳ್ಳಾಪುರ : ಕುಡಿದ ಮತ್ತಿನಲ್ಲಿ ಮಗನ ಮೇಲೆ ಗುಂಡು ಹಾರಿಸಿದ ತಂದೆ

ದೊಡ್ಡಬಳ್ಳಾಪುರ : ಕುಡಿದ ಮತ್ತಿನಲ್ಲಿ ತಂದೆ- ಮಗನ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನೀಡಿದ್ದು ಕುಡಿದ ಮತ್ತಿನಲ್ಲಿ ಮಗನ ಮೇಲೆ ಡಬ್ಬಲ್ ಬ್ಯಾರೆಲ್ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.     ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಗ್ರಾಮದ ಹರೀಶ (30) ಮೇಲೆ ಗುಂಡಿನ ದಾಳಿ ಮಾಡಲಾಗಿದೆ, ಅಪ್ಪ ಸುರೇಶ (60) ನಿಂದ ಹರೀಶನ ತಲೆಗೆ ಗುಂಡು ಹೊಡೆಯಲಾಗಿದೆ, ಸೆಲ್ಫ್ ಲೋಡ್ ಗನ್ […]

Continue Reading

ಎಸ್.ಎಲ್.ಎನ್. ಗೋಲ್ಡ್‌ ಲೀಫ್ ಪ್ರಾರಂಭೋತ್ಸವ ಶುಭ ಕೋರಿದ ಗಣ್ಯ ವರ್ಗ

ತುಮಕೂರು :ಅ 31ರ ಶುಕ್ರವಾರದಂದು ಬೆಳಿಗ್ಗೆ 11.00 ಗಂಟೆಗೆ ನೂತನವಾಗಿ ನಿರ್ಮಿಸಲಾಗಿರುವ ಎಸ್.ಎಲ್.ಎನ್. ಗೋಲ್ಡ್‌ ಲೀಫ್ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.   ಶ್ರೀಮತಿ ಹೆಚ್.ವಿ. ಅನುಸೂಯ ಮತ್ತು ತುಮಕೂರು ಅಗ್ನಿಬನ್ನಿರಾಯಸ್ವಾಮಿ ಪತ್ತಿನ ಸಹಕಾರ ಸಂಘ ದ ಅಧ್ಯಕ್ಷರಾದ ಟಿ.ಎಲ್. ಕುಂಭಯ್ಯ ನವರ ಕುಟುಂಬಸ್ಥರ ನೇತೃತ್ವದಲ್ಲಿ ಈ ಪ್ರಾರಂಭೋತ್ಸವ ನೆಡೆಯಲಿದ್ದು. ಕಾರ್ಯಕ್ರಮದಲ್ಲಿ ತುಮಕೂರು ಮಹಾನಗರಪಾಲಿಕೆ ಮಾಜಿ ಉಪಮಹಾಪೌರರಾದ ಟಿ.ಕೆ. ನರಸಿಂಹಮೂರ್ತಿ ಹಾಗೂ ಅವರ ಧರ್ಮಪತ್ನಿ ಪದ್ಮಶ್ರೀ, ಯಜಮಾನ್ ಟಿ.ಹೆಚ್. ಹನುಮಂತರಾಜುರವರು ಯಜಮಾನ್ ಶಿವಕುಮಾರ್‌ರವರು, ಶ್ರೀಮತಿ ಮಂಜುಳ ಮತ್ತು […]

Continue Reading

ಶ್ರೀ ಚೌಡೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಉದ್ಘಾಟನೆ

ದೊಡ್ಡಬಳ್ಳಾಪುರ : ನಗರದ ಕೆ.ಸಿ.ಪಿ ವೃತ್ತದ ಬಳಿ ನೂತನವಾಗಿ ಆರಂಭಿಸಿರುವ ಶ್ರೀ ಚೌಡೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ., ದ ದೊಡ್ಡಬಳ್ಳಾಪುರ ಶಾಖೆಯ ಉದ್ಘಾಟನಾ ಸಮಾರಂಭ ಶಾಖೆಯ ಆವರಣದಲ್ಲಿ ನಡೆಯಿತು.   ದೊಡ್ಡಬಳ್ಳಾಪುರದಲ್ಲಿ ಶ್ರೀ ಚೌಡೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ದೊಡ್ಡಬಳ್ಳಾಪುರ ಶಾಖೆಯನ್ನು ತಪಸೀಹಳ್ಳಿಯ ಪುಷ್ಪಾಂಡಜ ಆಶ್ರಮದ ಪೀಠಾಧ್ಯಕ್ಷ ಶ್ರೀ ದಿವ್ಯಜ್ಞಾನಾನಂದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದ ಅವರು ಸಹಕಾರ ತತ್ವವಿಲ್ಲದಿದ್ದರೆ ಈ ಜಗತ್ತಿನಲ್ಲಿ ಬದುಕುವುದು ಕಷ್ಟ. ಅಂತೆಯೇ ಸಹಕಾರ ಕ್ಷೇತ್ರದಿಂದ ಇಂದು ಆರ್ಥಿಕ ಸ್ವಾವಲಂಬನೆಗೆ […]

Continue Reading

ರಸ್ತೆ ಅಪಘಾತ ವ್ಯಕ್ತಿ ಸಾವು : ಸರ್ವಿಸ್ ರಸ್ತೆ ಇಲ್ಲದ ಕಾರಣ ಅಪಘಾತ ಸಂಭವಿಸುತ್ತಿವೆ ಎಂದ ಸ್ಥಳೀಯರು

ದೊಡ್ಡಬಳ್ಳಾಪುರ : ಮೆಣಸಿ ಗೇಟ್ ಬಳಿ ಸರ್ವಿಸ್ ರಸ್ತೆ ಇಲ್ಲದೆ, ನೇರವಾಗಿ ಹೆದ್ದಾರಿಗೆ ಬಂದ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ಸಂಭವಿಸಿದೆ.   ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಇಂದು ಬೆಳೆಗ್ಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಹೆಸರಘಟ್ಟ ಮೂಲದ ಕನ್ನಯ್ಯ (62) ಸಾವನ್ನಪ್ಪಿದ್ದಾರೆ, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   ಮೆಣಸಿ ಗೇಟ್ ಬಳಿ ಉಪನಗರ ಹೊರವರ್ತುಲ ರಸ್ತೆ (STRR) ಹಾದು […]

Continue Reading