15ದಿನಗಳ ಯೋಗಾಭ್ಯಾಸ ತರಬೇತಿ ಶಿಬಿರ ಸಮಾರೋಪ ಸಮಾರಂಭ : ಮಕ್ಕಳಿಗೆ ಯೋಗ ಪ್ರಮಾಣಪತ್ರ ವಿತರಣೆ 

ವಿಜಯಮಿತ್ರ ದೊಡ್ಡಬಳ್ಳಾಪುರ : 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ಹಾಗೂ ಶ್ರೀ ಕೃಷ್ಣ ಹಿರಿಯ ಮತ್ತು ಕಿರಿಯರ ಯೋಗ ಕೇಂದ್ರದ ವತಿಯಿಂದ ಕಳೆದ 15ದಿನಗಳಿಂದ ನಿರಂತರ ಯೋಗಾಭ್ಯಾಸ ಮತ್ತು ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಇಂದು (ನ. 30) ನಡೆಯಿತು. ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪಂಚಾಯತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್ ವಹಿಸಿ  ಯೋಗ ಗುರೂಜೀ ಕೃಷ್ಣ ಸ್ವಾಮಿ , ಅನ್ನದಾಸೋಹಿ ಮಲ್ಲೇಶ್ ಜೊತೆಗೂಡಿ […]

Continue Reading

ಶಾಸಕ ಧೀರಜ್ ಮುನಿರಾಜು ಕಾರ್ಯ ವೈಖರಿ ಮೆಚ್ಚಿ ಟಿ.ಹನುಮಂತಯ್ಯ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡ ಹಳೆಕೋಟೆ ಗ್ರಾಮಸ್ಥರು

  ವಿಜಯ ಮಿತ್ರ ದೊಡ್ಡಬಳ್ಳಾಪುರ : ಶಾಸಕ ಧೀರಜ್ ಮುನಿರಾಜುರವರ ಕಾರ್ಯ ವೈಖರಿ ಹಾಗೂ ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಳೆಕೋಟೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಹನುಮಂತಯ್ಯ.ಟಿ ನೇತೃತ್ವದಲ್ಲಿ ಇಂದು ಬಿಜೆಪಿ ಸೇರ್ಪಡೆಗೊಂಡರು. ದೊಡ್ಡಬಳ್ಳಾಪುರ ನಗರದ ಶಾಸಕ ನಿವಾಸದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಹಳೆಕೋಟೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಶಾಸಕರಿಗೆ ಹೂಮಾಲೆ ನೀಡಿ ಅಭಿನಂದಿಸಿದರು. ನಂತರ ಶಾಸಕ ಧೀರಜ್ ಮುನಿರಾಜು ಪಕ್ಷದ ಶಾಲು ಹಾಕುವ ಮೂಲಕ ಹಳೇಕೋಟೆ ಪ್ರಮುಖರನ್ನು ಪಕ್ಷಕ್ಕೆ ಸ್ವಾಗತಿಸಿದರು.   ನೂತನವಾಗಿ […]

Continue Reading

ಹನುಮ ಜಯಂತಿ ಪ್ರಯುಕ್ತ ದಿನ್ನೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ

ದೊಡ್ಡಬಳ್ಳಾಪುರ: ಹನುಮ ಜಯಂತಿ ಅಂಗವಾಗಿ ಸೋಮವಾರ (ಡಿ.1) ಹಾಗೂ ಮಂಗಳವಾರ (ಡಿ.2)ಹನುಮ ಜಯಂತಿ ಹಾಗೂ ಮಹಾಕಾಳಿ ಪ್ರತ್ಯಂಗಿರ ಅಮ್ಮನವರ ಜಾತ್ರಮಹೋತ್ಸವ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾತ್ರ ಮಹೋತ್ಸವ ಹಾಗೂ ಹನುಮ ಜಯಂತಿ ಕಾರ್ಯಕ್ರಮವನ್ನು ಯಶಸ್ವೀಗೊಳಿಸಬೇಕೆಂದು ದೇವಾಲಯದ ಪ್ರಧಾನ ಅರ್ಚಕರಾದ ವಾಸುದೇವಾಚಾರ್ ಬಡಬಾನನ ತಿಳಿಸಿದ್ದಾರೆ. ತಾಲ್ಲೂಕಿನ ಎಸ್.ಎಸ್. ಘಾಟಿ ರಸ್ತೆಯ ಪೆರಮಗೊಂಡನಹಳ್ಳಿ ಗ್ರಾಮದ ಶ್ರೀ ಉದ್ಭವ ದಿನ್ನೆ ಆಂಜನೇಯಸ್ವಾಮಿ ದೇವಸ್ಥಾನ ಹಾಗೂ ಶ್ರೀ ಪ್ರತ್ಯಂಗಿರ ಮಹಾಕಾಳಿ ಬಸವ ಸಂಗಮ ಕ್ಷೇತ್ರದಲ್ಲಿ ಹನುಮ ಜಯಂತಿ ಹಾಗೂ ಮಹಾಕಾಳಿ […]

Continue Reading

ಜವಾಹರ ನವೋದಯ ವಿದ್ಯಾಲಯದಲ್ಲಿ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ ಸಮಾರೋಪ ಸಮಾರಂಭ

ವಿಜಯ ಮಿತ್ರ ದೊಡ್ಡಬಳ್ಳಾಪುರ : ಭಾಷೆಯು ಸಾಂಸ್ಕೃತಿಕ ಪರಂಪರೆಯನ್ನು , ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ   ಜವಾಹರ ನವೋದಯ ವಿದ್ಯಾಲಯದಲ್ಲಿ  ಕನ್ನಡ ಸಪ್ತಾಹ ಸಮಾರೋಪ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು,   ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ […]

Continue Reading

ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ

  ಮಕ್ಕಳಿಗೆ ವಿದ್ಯಾಭ್ಯಾಸ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ಅವಕಾಶ ಸಿಕ್ಕಂತಾಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ  ಹೇಳಿದರು.   ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ವತಿಯಿಂದ ಆಯೋಜಿಸಿದ್ದ […]

Continue Reading

ಮಕ್ಕಳಲ್ಲಿ ಉತ್ತಮ ಆರೋಗ್ಯ ಕಾಪಾಡಲು ಶುದ್ಧ ನೀರು ಅತ್ಯಗತ್ಯ – ಉದಯ್ ಕುಮಾರ್ ಶೆಟ್ಟಿ 

ವಿಜಯಮಿತ್ರ ದೊಡ್ಡಬಳ್ಳಾಪುರ : ಸುಮಾರು 500 ಮಕ್ಕಳಿಗೆ ಅನುಕೂಲವಾಗುವಂತಹ ಶುದ್ಧ ನೀರಿನ ಸುಮಾರು 3.5ಲಕ್ಷ ರೂಪಾಯಿಗಳ 250LHP ಸಾಮರ್ಥ್ಯವುಳ್ಳ ಆರ್ ಓ ಘಟಕವನ್ನು ಸಿಎಸ್ಆರ್ ಅನುದಾನದ ಅಡಿಯಲ್ಲಿ ತಾಲ್ಲೂಕಿನ ಜವಾಹರ್ ಲಾಲ್ ನವೋದಯ ಶಾಲೆಗೆ ನೀಡಲಾಗಿದ್ದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಿಕೆಗೆ ಸಹಕಾರಿಯಾಗಲಿದೆ ಎಂದು ಪರ್ಲ್ ಗ್ಲೋಬಲ್ ಸಂಸ್ಥೆಯ ಮುಖ್ಯಸ್ಥ ಉದಯ್ ಕುಮಾರ್ ಶೆಟ್ಟಿ ತಿಳಿಸಿದರು ತಾಲ್ಲೂಕಿನ ಹೊರವಲಯದ ಜವಾಹರ್ ಲಾಲ್ ನವೋದಯ ಶಾಲೆಗೆ ಪರ್ಲ್ ಗ್ಲೋಬಲ್ ಕಂಪನಿ ವತಿಯಿಂದ ಸಿ ಎಸ್ ಆರ್ […]

Continue Reading

ದೊಡ್ಡಬಳ್ಳಾಪುರ : ಭಾರತೀಯ ಜೀವ ವಿಮಾ ನಿಗಮ(LIC)ದಲ್ಲಿ 70 ನೇ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ದೊಡ್ಡಬಳ್ಳಾಪುರ : ಭಾರತೀಯ ಜೀವ ವಿಮಾ ನಿಗಮ ದೊಡ್ಡಬಳ್ಳಾಪುರ ಮುಖ್ಯ ಶಾಖೆ ಯಲ್ಲಿ ನೆಲಮಂಗಲ, ದೇವನಹಳ್ಳಿ ಉಪ ಶಾಖೆ ಗಳೊಂದಿಗೆ 70 ನೇ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವನಹಳ್ಳಿ ಶಾಖಾಧಿಕಾರಿ ನರಸಿಂಹಪ್ಪ ವಹಿಸಿದ್ದು ಮುಖ್ಯ ಭಾಷಣಕಾರರಾಗಿ ನವೋದಯ ಶಾಲೆಯ ನಿವೃತ್ತ ಉಪನ್ಯಾಸಕರಾದ ವಿ ಎಸ್ ಹೆಗ್ಗಡೆ ಭಾಗವಸಿ ಮಾತನಾಡಿದರು,ಭಾರತೀಯ ಜೀವ ವಿಮಾ ನಿಗಮ ಭಾರತ ಸರ್ಕಾರದ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವುದರಿಂದ ಎಲ್ಲಾ ರಾಜ್ಯಗಳಿಂದ ಸಾವಿರಾರು ನೌಕರರು ಸೇವೆ ಸಲ್ಲಿಸಲು ಬರುತ್ತಿದ್ದಾರೆ. ನಮ್ಮಲ್ಲಿ […]

Continue Reading

ಕರ್ನಾಟಕದ ಜನರಿಗೆ ಮಾದರಿ ಮತ್ತು ಆದರ್ಶ ವ್ಯಕ್ತಿ ಡಾ.ರಾಜ್ ಕುಮಾರ್ – ಕೆ.ಪಿ.ಲಕ್ಷ್ಮೀನಾರಾಯಣ್

ವಿಜಯ ಮಿತ್ರ ದೊಡ್ಡಬಳ್ಳಾಪುರ : ಡಾ.ರಾಜ್ ಕುಮಾರ್ ಅವರು ಕನ್ನಡ ಮತ್ತು ಕರ್ನಾಟಕದ ಅಸ್ಮಿತೆ ಆಗಿದ್ದಾರೆ. ಅವರು  ಕನ್ನಡ ಚಲನಚಿತ್ರ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ  ಎಂದು ಲೆಕ್ಕಪರಿಶೋಧಕ ಲಯನ್ ಕೆ.ಪಿ.ಲಕ್ಷ್ಮೀನಾರಾಯಣ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ   ಚನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ  ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು,   ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ  ಸಾಹಿತ್ಯ ವಿಜ್ಞಾನ ಸಂಸ್ಕೃತಿ […]

Continue Reading

ವಿದ್ಯಾರ್ಥಿಗಳಿಗಾಗಿ ತೆರೆದ ಮನೆ ಕಾರ್ಯಕ್ರಮ : ಪೊಲೀಸ್ ಕಾರ್ಯವೈಖರಿ ಕುರಿತು ಅರಿವು ಮೂಡಿಸಿದ ಅಧಿಕಾರಿಗಳು 

ವಿಜಯಮಿತ್ರ ದೊಡ್ಡಬಳ್ಳಾಪುರ : ಗ್ರಾಮಾಂತರ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆ, ಹಾಗು ಯುವ ಸಂಚಲನ ಚಾರಿಟಬಲ್ ಟ್ರಸ್ಟ್ ವತಿಯಿಂದ ಚೈಲ್ಡ್ ರೈಟ್ಸ್ ಟ್ರಸ್ಟ್‌ ಹಾಗೂ ಸರ್ಕಾರಿ ಪ್ರೌಢಶಾಲೆ ಅರಳುಮಲ್ಲಿಗೆ ಬಾಗಿಲು ಸಹಯೋಗದಲ್ಲಿ ‘ತೆರೆದ ಮನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಠಾಣೆಗೆ ಆಗಮಿಸಿದ್ದ ವಿದ್ಯಾರ್ಥಿಗಳು ಪೊಲೀಸ್ ಠಾಣೆಯ ಕಾರ್ಯಚಟುವಟಿಕೆಗಳು ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಪಡೆದರು. ಯುವ ಸಂಚಲನ ಚಾರಿಟೇಬಲ್‌ ಟ್ರಸ್ಟ್ ಹಾಗೂ ಚೈಲ್ಡ್ ರೈಟ್ಸ್ ಟ್ರಸ್ಟ್ ಇವರುಗಳ ಸಹಯೋಗದಲ್ಲಿ ನಡೆಯುತ್ತಿರುವ ಎಲ್ಲಾ ಮಕ್ಕಳಿಗೂ, ಎಲ್ಲಾ […]

Continue Reading

ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ದ ಎಂದ ಬಿಜೆಪಿ ಪ್ರಮುಖರು 

ದೊಡ್ಡಬಳ್ಳಾಪುರ :2025-26ನೇ ಸಾಲಿನಲ್ಲಿ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‌ಡಿಆರ್ ಆಫ್/ಎನ್ ಡಿಆರ್‌ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಗೊಳಿಸಬೇಕು ಇಲ್ಲದೆಹೋದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರಹೋರಾಟ ಕೈಗೊಳ್ಳಲಾಗುವುದು ಎಂದು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವನಾಥ್ ತಿಳಿಸಿದರು.   ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ರೈತರು ಬೆಳೆದ […]

Continue Reading