ಜನಗಣತಿ-2027 ಕ್ಕೆ ಅಗತ್ಯ ಪೂರ್ವ ತಯಾರಿ:ಡಿಸಿ ಎ.ಬಿ ಬಸವರಾಜು

  2027 ಕ್ಕೆ ಜನಗಣತಿ ಶುರುವಾಗಲಿದ್ದು ಜಿಲ್ಲೆಯಲ್ಲಿ ಜನಗಣತಿ ಕಾರ್ಯ ಕೈಗೊಳ್ಳಲು ಇಂದಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡು ಗ್ರಾಮ, ಪಟ್ಟಣಗಳ ಗಡಿ ಗುರುತಿಸುವಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಸೂಚಿಸಿದರು.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಗಣತಿ-2027 ಕ್ಕೆ ಸಂಬಂಧಿಸಿದಂತೆ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜನಗಣತಿಯ ಮೂಲ ಉದ್ದೇಶವು ದೇಶದ ಎಲ್ಲಾ ವ್ಯಕ್ತಿಗಳ ಎಣಿಕೆಯನ್ನು ಯಾವುದೇ ಲೋಪದೋಷ ಇಲ್ಲದಂತೆ ಸಿದ್ಧಪಡಿಸುವುದು. ಹಾಗಾಗಿ ಮೊದಲು […]

Continue Reading

ಕೃಷಿ ಕಲಿತು ಸ್ವಯಂ ಕೃಷಿ ಮಾಡುವ ಮೂಲಕ ಮಾದರಿ ಕೃಷಿಕರಾದ ಹಾಡೋನಹಳ್ಳಿ ಅನುಷಾ ಅರುಣ್ : ಮಾದರಿ ರೈತ ಮಹಿಳೆಯ ಬಗ್ಗೆ ಒಂದಿಷ್ಟು ಮಾಹಿತಿ 

  ದೊಡ್ಡಬಳ್ಳಾಪುರ : ರೈತ ಅನ್ನದಾತ, ರೈತ ಕೊಡುವವನೇ ಹೊರತು ಬೇಡುವವನಲ್ಲ ಎಂದು ನಂಬಿದ ಪದವೀಧರೆ ಕೃಷಿಕನನ್ನು ಮದುವೆಯಾಗಿ ಇಬ್ಬರು ಮಕ್ಕಳಿಗೆ ತಾಯಿಯಾಗಿ ಮುಂದೆ ತಾನೇ ಕೃಷಿಯಲ್ಲಿ ತೊಡಗಿಸಿಕೊಂಡು ಯಶಸ್ಸು ಕಂಡಿರುವ ತಾಜಾ ಉದಾಹರಣೆ ನಮ್ಮ ದೊಡ್ಡಬಳ್ಳಾಪುರದ ಹಾಡೋನಹಳ್ಳಿ ಗ್ರಾಮದಲ್ಲಿದೆ…   ಹೌದು, ರೈತನಿಗೆ ಹೆಣ್ಣು ಸಿಗುವುದು ಅಪರೂಪ, ಅಂತಹದರಲ್ಲಿ ಇಲ್ಲೊಬ್ಬ ತಂದೆತಾಯಿ ಬಿಕಾಂ ಪದವೀಧರೆಯನ್ನು ರೈತನಿಗೆ ಕೊಟ್ಟು ಮದುವೆ ಮಾಡುತ್ತಾರೆ. ಕೃಷಿಕನನ್ನು ಮದುವೆಯಾದ ಪದವೀಧರೆ ಯಾವ ಕಾರ್ಪೋರೇಟ್ ಕೆಲಸಕ್ಕೆ ಹೋಗದೇ, ಸರ್ಕಾರಿ ಕೆಲಸಕ್ಕೆ ಪ್ರಯತ್ನಿಸದೇ, ಸ್ವಾಭಿಮಾನದ […]

Continue Reading

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆ : ಬಿಸುವನಹಳ್ಳಿ ಹಾಗೂ ಕಸವನಹಳ್ಳಿ ಗೆ ಪ್ರತ್ಯೇಕ ವಾರ್ಡ್ ನೀಡಿ ಇಲ್ಲವೇ ಚುನಾವಣೆ ಬಹಿಷ್ಕರಿಸುತ್ತೇವೆ ಎಂದ ಗ್ರಾಮಸ್ಥರು

ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕಸವನಹಳ್ಳಿ ಹಾಗೂ ಬಿಸುವನಹಳ್ಳಿ ಗ್ರಾಮಗಳಿಗೆ ಪ್ರತ್ಯೇಕ ವಾರ್ಡ್ ನೀಡಬೇಕು ಇಲ್ಲದ ಪಕ್ಷದಲ್ಲಿ ಮುಂಬರುವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡದೆ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಸ್ಥಳೀಯ ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಕಳೆದ ಹಲವಾರು ವರ್ಷಗಳಿಂದ ನಮ್ಮ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳು ನೆನೆಗುದ್ದಿಗೆ ಬಿದ್ದಿವೆ, ಹೆಚ್ಚು ಜನಸಂಖ್ಯೆ, ಹೆಚ್ಚಾದ ವಿಸ್ತೀರ್ಣ ಹೊಂದಿರುವ ನಮ್ಮ ಗ್ರಾಮಗಳಿಗೆ ಪ್ರತ್ಯೇಕ ವಾರ್ಡ್ ನೀಡದೆ ಮೋಸ ಮಾಡಲಾಗಿದೆ. ಪ್ರಶ್ನೆ ಮಾಡದ ಪ್ರತಿನಿಧಿಗಳಿಲ್ಲದೆ ಪಟ್ಟಣ ಪಂಚಾಯತಿ ಅಧಿಕಾರಿಗಳೇ […]

Continue Reading

ಶಿಕ್ಷಣ ಕ್ಷೇತ್ರ ಚುನಾವಣೆ : ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಉಸ್ತುವರಿಯಾಗಿ ಡಾ|| ಸೌಮ್ಯ ರವರನ್ನು ನೇಮಿಸಿದ ಕೆಪಿಸಿಸಿ

ಬೆಂಗಳೂರು ಗ್ರಾಮಾಂತರ : 2026ರ ಶಿಕ್ಷಣ ಕ್ಷೇತ್ರ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಉಸ್ತುವರಿಯಾಗಿ ಡಾ|| ಸೌಮ್ಯ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಪದವೀಧರರ ವಿಭಾಗ)ನೇಮಿಸಿ ಆದೇಶ ಹೊರಡಿಸಿದೆ ಮುಂಬರುವ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕೆಪಿಸಿಸಿ ಪದವೀಧರರ ವಿಭಾಗದ ವತಿಯಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಿಸಿ ಕೆಪಿಸಿಸಿ ಮುಖ್ಯ ವಕ್ತಾರರು ಹಾಗೂ ಕೆಪಿಸಿಸಿ ಪದವಿದರ ವಿಭಾಗದ ಅಧ್ಯಕ್ಷರಾದ ಎ ಎನ್ ನಟರಾಜ್ ಗೌಡ ಉಸ್ತುವಾರಿಗಳ ಪಟ್ಟಿಗೆ ಅನುಮೋದನೆ ನೀಡುವಂತೆ ಕೋರಿ ರಾಜ್ಯದ ಉಪ ಮುಖ್ಯಮಂತ್ರಿ […]

Continue Reading

ದೊಡ್ಡಬಳ್ಳಾಪುರ: ಹೊಸಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಹೊನ್ನಮ್ಮ ಚಿಕ್ಕಪಾಪಯ್ಯ ಆಯ್ಕೆ

  ವಿಜಯಮಿತ್ರ ದೊಡ್ಡಬಳ್ಳಾಪುರ : ನಾಗರತ್ನಮ್ಮ ಲಕ್ಷ್ಮೀನಾರಾಯಣಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಹೊನ್ನಮ್ಮ ಚಿಕ್ಕಪಾಪಯ್ಯ ಆಯ್ಕೆಯಾಗಿದ್ದಾರೆ.     24 ಮಂದಿ ಸದಸ್ಯತ್ವ ಬಲ ಹೊಂದಿರುವ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ಕೃಷಿ ಇಲಾಖೆಯ ರಾಘವೇಂದ್ರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.   ಈ ವೇಳೆ ಬಿಜೆಪಿ ಬೆಂಬಲಿತ ಹೊನ್ನಮ್ಮ ಚಿಕ್ಕಪಾಪಯ್ಯ ಹಾಗೂ ಕಾಂಗ್ರೆಸ್ ಬೆಂಬಲಿತ ನಾಗವೇಣಿ ನರಸಿಂಹ ಮೂರ್ತಿ ಅವರು ನಾಮಪತ್ರ ಸಲ್ಲಿಸಿದ್ದು.ಚುನಾವಣೆಯಲ್ಲಿ […]

Continue Reading

*ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ*

  ದೊಡ್ಡಬಳ್ಳಾಪುರ(ನ.8): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ತೂಬಗೆರೆ ಹೋಬಳಿಯ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು  ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.   ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವಿಸಿದ್ದಪ್ಪ ಮಾತನಾಡಿ ಕನಕದಾಸರ ಹುಟ್ಟು, ಬಾಲ್ಯದ ಜೀವನ ಅವರ ಸಾಧನೆಗಳನ್ನು ತಿಳಿಸಿಕೊಟ್ಟರು. ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ನೀಡಿದ ಕೊಡುಗೆ ಅನನ್ಯವಾಗಿದೆ. ಉಡುಪಿ ಶ್ರೀ ಕೃಷ್ಣನ ಪರಮ […]

Continue Reading

ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾ ಫಲಿತಾಂಶ ಪ್ರಕಟ : ನೂತನ ಜಿಲ್ಲಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆ‌ರ್.ರಮೇಶ್ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ಹಾಗೂಪ್ರಧಾನ ಕಾರ್ಯದರ್ಶಿಯಾಗಿ ಆ‌ರ್.ರಮೇಶ್ ಆಯ್ಕೆಯಾಗಿದ್ದಾರೆ.   ದೇವನಹಳ್ಳಿಯಲ್ಲಿರುವ ಜಿಲ್ಲಾ ಪತ್ರಕರ್ತರ ಭವನದಲ್ಲಿ ನ 09 ರಂದು ನಡೆದಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ (Working Journalists Association elections) ಫಲಿತಾಂಶ ಪ್ರಕಟಿಸಲಾಗಿದೆ   ಸಂಘದ ಚುನಾವಣೆಯಲ್ಲಿ ಸುಗ್ಗರಾಜು ತಂಡ ಹಾಗೂ ಆ‌ರ್.ರಮೇಶ್‌ ತಂಡ ಸ್ಪರ್ಧಿಸಿದ್ದು. ನೂತನ ಅಧ್ಯಕ್ಷರಾಗಿ ಜಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯ ಆ‌ರ್.ರಮೇಶ್, ಖಜಾಂಚಿಯಾಗಿ ಜೆ.ಮುನಿರಾಜು, ರಾಜ್ಯ ಸಮಿತಿ ಸದಸ್ಯರಾಗಿ […]

Continue Reading

ತೂಬಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ನೇಮಕ

ದೊಡ್ಡಬಳ್ಳಾಪುರ : ತೂಬಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಅಧಿಕಾರ ವಹಿಸಿಕೊಂಡಿದ್ದು, ಸಮಿತಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ವಿತರಣೆ ಮಾಡಿದರು.   ತಾಲ್ಲೂಕಿನ ತೂಬಗೆರೆಯಲ್ಲಿ ನಡೆದ ವೋಟ್ ಚೋರಿ ವಿರೋಧಿಸಿ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಭಾಗವಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷರು ಆರ್.ವಿ. ವೆಂಕಟೇಶ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಿ.ಆರ್ ಗೌಡ್ರು […]

Continue Reading

4.90 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ 

  ವಿಜಯಮಿತ್ರ ಸುದ್ದಿ ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಹೋಬಳಿಯ ಅಂತರಹಳ್ಳಿ ಮತ್ತು ನೆಲ್ಲುಕುಂಟೆ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೇರಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಅಂತರಹಳ್ಳಿ ರಸ್ತೆ ಕಾಮಗಾರಿಗೆ ಪಿ.ಎಸ್.ಆರ್ ನಿಧಿಯಿಂದ 2.25 ಕೋಟಿ ಹಾಗೂ ಪಿ. ಡಬ್ಲ್ಯೂ.ಡಿ ನಿಧಿಯಿಂದ 2.25 ಕೋಟಿ ವೆಚ್ಚದಲ್ಲಿ ಕಮಳೂರು ಕ್ರಾಸ್ ನಿಂದ ಅಂತರಹಳ್ಳಿ ಹಾಗೂ ಅಲ್ಲಾಳಸಂದ್ರ […]

Continue Reading

Beyond Gravity Can a 99% RTP plinko Game Deliver a 1000x Multiplier with Every Drop_3

Beyond Gravity: Can a 99% RTP plinko Game Deliver a 1000x Multiplier with Every Drop? Understanding the Plinko Mechanics Risk Levels: High, Normal, and Low Lines and Bets: Customizing Your Gameplay Manual vs. Auto Play Options Analyzing Potential Payouts and the RTP The Role of Random Number Generation (RNG) Player Feedback and Community Discussions Beyond […]

Continue Reading