ದೊಡ್ಡಬಳ್ಳಾಪುರ :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ಮತ್ತು ತೂಬಗೆರೆ ಗ್ರಾಮ ಪಂಚಾಯಿತಿ ಮತ್ತು ಎದ್ದಲ ಹಳ್ಳಿ ಕೆರೆ ಅಭಿವೃದ್ಧಿ ಸಮಿತಿಯ ಸಹಭಾಗಿತ್ವದಲ್ಲಿ ಎದ್ದಲಹಳ್ಳಿ ಕೆರೆ ಹೂಳೆತ್ತುವ ಕೆಲಸ ಮುಕ್ತಾಯವಾಗಿದ್ದು
ಕೇಂದ್ರ ಕಚೇರಿಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಆನಂದ್ ಸುವರ್ಣ ರವರಿಂದ ಎದ್ದಲಹಳ್ಳಿಕೆರೆಯ ನಾಮಫಲಕ ಅನಾವರಣಗೊಳಿಸಿ ಸಮಿತಿಯವರಿಗೆ ಹಸ್ತಾಂತರ ಮಾಡುವ ಮೂಲಕ ಕೆರೆಗೆ ಬಾಗಿನ ಸಮರ್ಪಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶುದ್ಧಗಂಗಾ ನಿರ್ದೇಶಕರಾದ ಮಾನ್ಯ ಶಿವಾನಂದಾಚಾರ್ , ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕರಾದ ಮಾನ್ಯ ಉಮರಬ್ಬ , ಸಮುದಾಯ ಅಭಿವೃದ್ಧಿ ವಿಭಾಗದ ಯೋಜನಾಧಿಕಾರಿಗಳಾದ ಪುಷ್ಪರಾಜ್ , ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಸುಧಾ ಭಾಸ್ಕರ್ , ಕೆರೆ ಅಭಿಯಂತರರು ಮಾನ್ಯ ಅರುಣ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾನ್ಯ ವೆಂಕಟೇಶ್ ರವರು ಹಾಗೂ ಕೆರೆ ಸಮಿತಿಯ ಅಧ್ಯಕ್ಷರು ನವೀನ್ ಕುಮಾರ್ ಮತ್ತು ಕೆರೆ ಸಮಿತಿಯ ಸದಸ್ಯರು ತೂಬಗೆರೆಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು,ತಾಲೂಕಿನ ಕೃಷಿ ಮೇಲ್ವಿಚಾರಕ ಲೋಹಿತ್ ,ವಲಯ ಮೇಲ್ವಿಚಾರಕ ಪ್ರಕಾಶ್ ಮೂರ್ತಿ ಮತ್ತು ಸೇವಾ ಪ್ರತಿನಿಧಿಗಳು ಮತ್ತು ಎದ್ದಲಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.
