ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೌರಮ್ಮ ರವರು ಆರ್ ಸಿ ಮಂಜುನಾಥ್ ವಿರುದ್ಧ ಏಳು ಮತಗಳನ್ನು ಪಡೆದು ಜಯಗಳಿಸಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ
ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗೌರಮ್ಮ ರವರನ್ನು ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯ ಸನ್ಮಾನಿಸಿ ಶುಭಕೋರಿದರು .

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯ ಮಾತನಾಡಿ ಈ ಬಾರಿ ಕಾಂಗ್ರೆಸ್ ಬೆಂಬಲಿತ ಮಹಿಳಾ ಅಭ್ಯರ್ಥಿ ಗೌರಮ್ಮ ರವರು ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ನೂತನ ಅಧ್ಯಕ್ಷರಾದ ಗೌರಮ್ಮ ರವರಿಗೆ ಶುಭಾಶಯಗಳನ್ನು ಕೋರುತ್ತೇನೆ ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ ಮುಂದೆ ಮತ್ತಷ್ಟು ಅಭಿವೃದ್ದಿ ಹೊಂದಲಿ ಎಂದು ಹಾರೈಸಿದರು
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣಸ್ವಾಮಿ ಮಾತನಾಡಿ ಕಳೆದ 56 ವರ್ಷಗಳಿಂದ ಮಹಿಳೆಯರು ಅವಕಾಶದಿಂದ ವಂಚಿತರಾಗಿದ್ದು ಈ ಬಾರಿ ರಾಜಘಟ್ಟ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ನಾಯಕತ್ವದಲ್ಲಿ ಮಹಿಳೆಗೆ ಒಂದು ಅವಕಾಶ ಸಿಕ್ಕಿದೆ ನೂತನ ಅಧ್ಯಕ್ಷರೊಂದಿಗೆ ನಮ್ಮ ಸಲಹೆ ಸಹಕಾರ ಸದಾ ಇರುತ್ತದೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗೌರಮ್ಮ ರವರಿಗೆ ಶುಭವಾಗಲಿ ಎಂದು ಹಾರೈಸಿದರು
ಈ ಸಂದರ್ಭದಲ್ಲಿ ಜಗನ್ನಾಥ್, ಶೋಭಮ್ಮ, ಸುನಂದಮ್ಮ, ಶಾಂತಮ್ಮ ನಾರಾಯಣಮ್ಮ ನಾಮಿನಿ ನಿರ್ದೇಶಕರಾದ ನಾರಾಯಣ ಸ್ವಾಮಿ ಎಂ, ಸ್ಥಳೀಯ ಮುಖಂಡರಾದ ಚೆನ್ನಪ್ಪ, ಅಶ್ವತ್ಥಪ್ಪ, ಗೋವಿಂದಪ್ಪ,ರವಿ, ಮುಂತಾದವರು ಉಪಸ್ಥಿತರಿದ್ದರು
