ಶುದ್ಧ ನೀರಿಗಾಗಿ ಗ್ರಾಮಸ್ಥರ ಹೋರಾಟ : ರೈತರ ಪ್ರತಿಭಟನೆಗೆ ಕರವೇ ಸಾಥ್ | ಹೋರಾಟದಲ್ಲಿ ನಾವು ಭಾಗವಹಿಸುತ್ತೇವೆ – ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ  

Spread the love

ದೊಡ್ಡಬಳ್ಳಾಪುರ : ತಾಲ್ಲೂಕಿನ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕೆರೆಗೆ ಸಂಸ್ಕರಿಸದ ಕಲುಷಿತ ನೀರನ್ನು ಹರಿಸದಂತೆ ಅಗ್ರಹಿಸಿ ಅರ್ಕಾವತಿ ನದಿ ಪಾತ್ರ ಕೆರೆಗಳ ಹೋರಾಟ ವೇದಿಕೆ ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ ರಕ್ಷಣಾ ವೇದಿಕೆ(ಟಿ ಎ ನಾರಾಯಗೌಡರ ವೇದಿಕೆ) ಬೆಂಬಲ ಸೂಚಿಸಿದೆ.

ಹೌದು ಜಲ ಸಂಪನ್ಮೂಲ ಉಳಿಸುವಂತೆ ಆಗ್ರಹಿಸಿ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ರೈತರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಬೆಂಬಲ ಸೂಚಿಸಿದ್ದಾರೆ.

 

 

ಈ ಕುರಿತು ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಸ್ಥಳೀಯ ರೈತರು ದೊಡ್ಡ ತುಮಕೂರು ಕೆರೆಗೆ ಕಾರ್ಖಾನೆಗಳಿಂದ ಹರಿದು ಬರುತ್ತಿರುವ ಕಲುಷಿತ ನೀರನ್ನು ಹಾಗೂ ದೊಡ್ಡಬಳ್ಳಾಪುರ ನಗರದಿಂದ ಹರಿದು ಹೋಗುವ ಕೊಳಚೆ ನೀರನ್ನು ಶುದ್ದಿಕರಿಸಿ ಕೆರೆಗೆ ಬಿಡುವಂತೆ ಆಗ್ರಹಿಸಿ ಕೆರೆಗೆ ಬಿಡುವಂತೆ ಆಗ್ರಹಿಸಿ ಹಲವಾರು ರೀತಿ ಪ್ರತಿಭಟನೆ ನಡೆಸಿದರು ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ ರೈತರ ತಾಳ್ಮೆಗೂ ಮಿತಿ ಇದೆ ರೈತರು ಹೋರಾಟಗಾರರು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುವ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದರು.

 

 

ಅಲ್ಲದೆ ನಾಡು-ನುಡಿ ಜಲ ಭಾಷೆ ವಿಚಾರ ಬಂದಾಗ ನಮ್ಮ ಟಿ ಎ ನಾರಾಯಣ ಗೌಡರ ಕರ್ನಾಟಕ ರಕ್ಷಣಾ ವೇದಿಕೆ ಸದಾ ಮುಂದೆ ಇರುತ್ತದೆ. ರೈತರಿಗೆ ಸಮಸ್ಯೆ ಉಂಟಾದಾಗ ಇತರೆ ಸಂಘ ಸಂಸ್ಥೆಗಳಿಗಿಂತ ಮೊದಲು ಕಾರ್ಯರ್ಮುಖರಾಗಿ ಅವರ ಬೆಂಬಲಕ್ಕೆ ನಿಂತು ಹೋರಾಟಕ್ಕೆ ಮುಂದಾಗುವುದು ನಮ್ಮ ಕರವೇ ದೊಡ್ಡ ತುಮಕೂರು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಹೋರಾಟಕ್ಕೆ ರಾಜ್ಯಾಧ್ಯಕ್ಷರಾದ ಟಿಎ ನಾರಾಯಣಗೌಡರ ಆದೇಶದ ಮೇರೆಗೆ ಜಿಲ್ಲಾ ಹಾಗೂ ತಾಲೂಕು ಘಟಕಗಳು ಬೆಂಬಲ ನೀಡುತ್ತಿದ್ದು ನಾವು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದೇವೆ ಎಂದರು.

 

ಹಲವಾರು ಬಾರಿ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ,ಕೆರೆ ನೀರು, ಕೊಳವೆ ಬಾವಿ ನೀರು, ಶುದ್ಧ ಕುಡಿಯುವ ಘಟಕದ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲ, ಗ್ರಾಮ ಪಂಚಾಯಿತಿಯ 2023ರಲ್ಲಿ ಎರಡು ಪಂಚಾಯಿತಿಯ 36 ಕೊಳವೆ ಬಾವಿಗಳಿಗೆ 34 ಕೊಳವೆ ಭಾವಿಗಳು ಉಪಯೋಗಿಸಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ.ಕೊಳವೆ ಬಾವಿಗಳಲ್ಲಿ ಕಪ್ಪು ನೀರು ಬರುತ್ತಿದೆ ಇಷ್ಟೆಲ್ಲ ಸಮಸ್ಯೆಯನ್ನು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು ಅದ್ಯಾಕೋ ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದರು.

 

 

ಈ ಹಿಂದೆ ಜಿಲ್ಲಾಧಿಕಾರಿಗಳು ಇನ್ನು ನಾಲ್ಕು ತಿಂಗಳಲ್ಲಿ STP ಘಟಕ ಶುರು ಮಾಡುತ್ತೇವೆ ಎಂದು ತಿಳಿಸಿದರು ಎರಡು ವರ್ಷ ಕಳೆದರೂ ಇನ್ನೂ ಶುರು ಮಾಡಿಲ್ಲ. ಬೀದಿ ನಾಯಿಗಳಿಗೆ ಕೋಳಿ ಮಾಂಸ ಹಾಕಲು ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದ್ದಾರೆ ಒಂದು ನದಿ ಉಳಿಸಲು ಜನರ ಆರೋಗ್ಯ ಕಾಪಾಡಲು ಹಣ ಇಲ್ಲ ಎಂಬುವುದು ಯಾವ ನ್ಯಾಯ. ನಾಯಿಗಿಂತ ಕಡೆಯಾಗಿ ಹೋಯಿತೇ ಜನರ ಬಾಳು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

 

ರೈತರ ಹೋರಾಟ ಕುರಿತು ಮುಖಂಡರಾದ ವಸಂತ್ ಕುಮಾರ್ ಅವರೊಂದಿಗೆ ಮಾತನಾಡಿದ್ದೇನೆ ನಾಳೆಯಿಂದ  ನಾವು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ಪ್ರತಿ ಬಾರಿ ಅಧಿಕಾರಿಗಳ ವರ್ಗ ಪ್ರತಿಭಟನಾ ಸ್ಥಳಕ್ಕೆ  ಭೇಟಿ ಕೊಟ್ಟು ಸಾಂತ್ವನ ಹೇಳುವ ಮೂಲಕ ಸಂಧಾನಕ್ಕೆ ಮುಂದಾಗುವುದು ನಂತರ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗುವುದು  ಸರ್ವೇಸಾಮಾನ್ಯವಾಗಿದೆ . ಈ ಬಾರಿಯಾದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಗ್ರಾಮಸ್ಥರ ಜೀವ ಉಳಿಸುವ ಕಾರ್ಯ ಮಾಡಬೇಕಾಗಿದೆ ಇಲ್ಲಾವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಗ್ರ ಹೋರಾಟಕ್ಕೆ ಮುಂದಾಗಲಿದೆ ಎಂದರು ತಿಳಿಸಿದರು.

Leave a Reply

Your email address will not be published. Required fields are marked *