ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಬಂದ ಭಕ್ತದಿಗಳಿಗೆ ಕರ್ನಾಟಕ ಕದಂಬ ಪಡೆ ವತಿಯಿಂದ ಅನ್ನದಾಸೋಹ ಆಯೋಜನೆ

ದೊಡ್ಡಬಳ್ಳಾಪುರ : ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಕರ್ನಾಟಕ ಕದಂಬ ಪಡೆ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.


ಜಿಲ್ಲಾಧ್ಯಕ್ಷ ಲಕ್ಕಣ್ಣ ಮಾತನಾಡಿ ರಾಜ್ಯ ಸಮಿತಿಯ ಎಲ್ಲಾ ಪ್ರಮುಖರ ಸಹಕಾರದೊಂದಿಗೆ ಇಂದು ತಾಲ್ಲೂಕಿನ ಪ್ರಸಿದ್ಧ ರಥೋತ್ಸವದಲ್ಲಿ ಅನ್ನದಾನ ಮಾಡುವ ಮೂಲಕ ಭಾಗವಹಿಸಿದ್ದು ಸಂತಸ ತಂದಿದೆ.ಇಂದಿನ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ವೇಳೆ  ಕರ್ನಾಟಕ ಕದಂಬ ಪಡೆಯ ರಾಜ್ಯ, ಜಿಲ್ಲಾ  ಹಾಗೂ ತಾಲ್ಲೂಕು ಮಟ್ಟದ ಪ್ರಮುಖರು ಸಾರ್ವಜನಿಕರಿಗೆ 2026 ರ  ಕ್ಯಾಲೆಂಡರ್ ವಿತರಿಸಿ  ಶುಭ ಹಾರೈಸಿದರು.


ಕಾರ್ಯಕ್ರಮ ಕುರಿತು ತಾಲ್ಲೂಕು ಘಟಕದ ಅಧ್ಯಕ್ಷ ಕೆ ಟಿ ಆಂಜಿನಪ್ಪ ಮಾತನಾಡಿ ಇತಿಹಾಸ ಪ್ರಸಿದ್ಧವಾದ ಈ ಬ್ರಹ್ಮರಥೋತ್ಸವಕ್ಕೆ ತಾಲ್ಲೂಕಿನ ಸುತ್ತಮುತ್ತಲಿನ ಹಳ್ಳಿಗಳಿಂದಷ್ಟೇ ಅಲ್ಲದೇ ಬೇರೆ ಬೇರೆ ಊರುಗಳಿಂದ ಜನರು ಬರುವುದು ವಾಡಿಕೆ ಜಾತ್ರೆಗೆ ಬರುವ ಎಲ್ಲಾ ಭಕ್ತದಿಗಳಿಗೂ ನಮ್ಮ ಕರ್ನಾಟಕ ಕದಂಬ ಪಡೆ ವತಿಯಿಂದ ಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ನಮ್ಮ ಸಂಘಟನೆಯ ಸಂಸ್ಥಾಪಕರಾದ ಮಂಜು ಗಣಪತಿಪುರ ಹಾಗೂ ರಾಜ್ಯಾಧ್ಯಕ್ಷರಾದ ಚೇತನ್ ಗೌಡ ರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ ಎಂದರು.


ಈ ವೇಳೆ ರಾಜ್ಯ ಕಾರ್ಯದರ್ಶಿ ಕೆ. ರಾಮಂಜಿ, ರಾಜ್ಯ ಕಾರ್ಯಧ್ಯಕ್ಷ ವೆಂಕಟೇಶ್ ಗೌಡ, ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಎ.ನಾರಾಯಣ ಸ್ವಾಮಿ,ಯುವ ಘಟಕ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸೋಮಶೇಖರ್ ಗೌಡ,ತಾಲೂಕು ಗೌರವಾಧ್ಯಕ್ಷ ಎಂ. ಲಕ್ಷ್ಮೀನಾರಾಯಣ, ಯುವ ಘಟಕ ತಾಲ್ಲೂಕು ಅಧ್ಯಕ್ಷ ಮುರಳಿ, ತಾಲ್ಲೂಕು ಉಪಾಧ್ಯಕ್ಷ ತಿಲಕ್ ಕುಮಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕೆ. ಶ್ರೀನಿವಾಸ್, ರೈತ ಘಟಕ ತಾಲ್ಲೂಕು ಅಧ್ಯಕ್ಷ, ವಿ. ಕೇಶವ, ತಾಲೂಕು ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ, ತಾಲ್ಲೂಕು ಪ್ರಚಾರ ಸಮಿತಿ ಅಧ್ಯಕ್ಷ ಎಂ. ರಮೇಶ್, ಉಪಾಧ್ಯಕ್ಷ ಮಂಜುನಾಥ್, ಸಹ ಕಾರ್ಯದರ್ಶಿ ರಾಮಕೃಷ್ಣಯ್ಯ, ಮಹಿಳಾ ಘಟಕ ಅಧ್ಯಕ್ಷರಾದ ಮಂಜುಳಾ, ಪ್ರಮುಖರಾದ ಹೆಚ್. ಮುತ್ತುರಾಜ್, ಆರ್ ಗೋವಿಂದ ರಾಜು, ಹೆಚ್. ಕೆ.ಮುತ್ತ ರಾಜು, ಎಸ್ ಎನ್ ಆನಂದ್ ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *