ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ ವಿ ಮಂಜುನಾಥ್ ರವರು ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಲಿ – ಹಳ್ಳಿ ರೈತ ಅಂಬರೀಷ್ 

ಬೆಂಗಳೂರು ಗ್ರಾಮಾಂತರ :  ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಕೆ ವಿ ಮಂಜುನಾಥ್ ರವರಿಗೆ ಹಳ್ಳಿ ರೈತ ಅಂಬರೀಷ್ ಶುಭ ಹಾರೈಸಿದ್ದಾರೆ.

 

ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಮಂಜುನಾಥ್ ಕೆ.ವಿ. ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಗಿ ಆಯ್ಕೆಯಾಗಿದ್ದು. ರಾಜ್ಯ ಜೆಡಿಎಸ್ ಪ್ರಮುಖರ ಈ ನಿರ್ಣಯವನ್ನು ಸ್ವಾಗತಿಸುತ್ತೇನೆ ಪಕ್ಷದ ತತ್ವ–ಸಿದ್ಧಾಂತಗಳಿಗೆ ನಿಷ್ಠರಾಗಿರುವ, ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಮಂಜುನಾಥ್ ರವರು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನುಇನ್ನಷ್ಟು ಬಲಿಷ್ಠಗೊಳಿಸುವ ಕಾರ್ಯ ಮಾಡಲಿದ್ದಾರೆ ಎಂಬ ಭರವಸೆ ಇದೆ ಅವರ ನಾಯಕತ್ವಕ್ಕೆ ನಮ್ಮ ಸಂಪೂರ್ಣ ಬೆಂಬಲ ಸದಾ ಇರುತ್ತದೆ ಎಂದು ಹಳ್ಳಿ ರೈತ ಅಂಬರೀಷ್ ತಿಳಿಸಿದ್ದಾರೆ.

 

ಸ್ಥಳೀಯವಾಗಿ ಈ ಹಿಂದೆ ನಡೆದ ಕಾರ್ಯಕರ್ತರ ಸಭೆಯಲ್ಲಿ  ಪಕ್ಷ ಸಂಘಟನೆ ಹಾಗೂ ಕಾರ್ಯ ವೈಕರಿ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು ನೂತನ ಅಧ್ಯಕ್ಷರ  ನೇತೃತ್ವ ಕಾರ್ಯಕರ್ತರ ಅಸಮಾಧಾನವನ್ನು ಸರಿಪಡಿಸುವುದೇ ಕಾದುನೋಡಬೇಕಿದೆ   ಎಂದಿದ್ದಾರೆ.

 

 

 

Leave a Reply

Your email address will not be published. Required fields are marked *