ಬೆಂಗಳೂರು : ಬೆಂಗಳೂರಿನ ಗಾಂಧಿ ಭವನದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿರುವ “ಮೊಹಬ್ಬತ್ ಕಿ ದುಕಾನ್” (ಪ್ರೀತಿಯ ಅಂಗಡಿ) ಯನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉದ್ಘಾಟಿಸಿದರು

ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿರವರು ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ಘೋಷಿಸಿದಂತೆ ಪ್ರಾಯೋಗಿಕವಾಗಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಜವಾಹರ್ ಬಾಲ್ ಮಂಚ್ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ “ಮೊಹಬ್ಬತ್ ಕಿ ದುಕಾನ್” ಆರಂಭಿಸಲಾಗಿದೆ

ಪ್ರಾಯೋಗಿಕ ಮಳಿಗೆಯನ್ನು ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊಹಬ್ಬತ್ ಕಿ ದುಕಾನ್ ಮಳಿಗೆಯಲ್ಲಿ ಬಜ್ಜಿ ಸವಿಯುವ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗುತಂದರು
