ಸಮಸಮಾಜದ ನಿರ್ಮಾಣ ಅಂಬೇಡ್ಕರ್ ಆಶಯ ಪರಿಪೂರ್ಣ – ಮಂಜುನಾಥ್

Spread the love

ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವತಿಯಿಂದ ಸಂವಿಧಾನ ಶಿಲ್ಫಿ ಬಾರತರತ್ನ ಡಾ:ಬಿ ಆರ್ ಅಂಬೇಡ್ಕರ್ ರವರ 135 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

 

ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಪ್ರಾಂಶುಪಾಲ ಎಂ ಸಿ. ಮಂಜುನಾಥ್ ಮಾಡನಾಡಿದರು ವಿಶ್ವದಲ್ಲೇ ದೊಡ್ಡದಾದ ಲಿಖಿತ ಸಂವಿಧಾನ ನಮ್ಮದು ಎಲ್ಲಾ ಜಾತಿ ದರ್ಮದವರಿಗೂ ಸಮಾನ ಅವಕಾಶವನ್ನು ನಮ್ಮ ಸಂವಿಧಾನ ನೀಡಿದೆ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ತಮ್ಮ ನಡವಳಿಕೆಯಿಂದ ಸಂವಿಧಾನದ ಆಶಯಗಳಿಗೆ ದಕ್ಕೆ ತರುತಿದ್ದಾರೆ ಎಂದರು.

 

ಇನ್ನೂ ಅನೇಕ ಗ್ರಾಮಗಳಲ್ಲಿ ಪಟ್ಟಣಗಳಲ್ಲಿ ಅಸ್ಪೃಶ್ಯತೆ ಇದೆ ಈ ಅಸ್ಪೃಶ್ಯತೆಯನ್ನು ಹೊಗಲಾಡಿಸಿ ಸಮಾನತೆ ಸಾದಿಸಿದಾಗ ಮಾತ್ರ ಅಂಬೇಡ್ಕರ್ ರವರ ಆಶಯಗಳನ್ನು ಈಡೇರಿಸಲು ಸಾದ್ಯ ಎಂದು ಹೇಳಿದರು.

 

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಕಾರ್ತಿಕ್ ಎನ್ ರಶ್ಮಿ, ಗಂಗಮೂರ್ತಿ, ಆರ್ ಎಲ್ ಅನುಷಾ ಹಾಗೂ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.