ಶ್ರೇಷ್ಠ ಸಂವಿಧಾನ ರೂಪಿಸಿದ ಮಹಾನ್ ನಾಯಕ ಅಂಬೇಡ್ಕರ್: ನಿಸರ್ಗ ನಾರಾಯಣಸ್ವಾಮಿ

Spread the love

ದೊಡ್ಡಬಳ್ಳಾಪುರ (ತೂಬಗೆರೆ): ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಶೋಷಿತ ಸಮುದಾಯದ ನಾಯಕನಲ್ಲ, ದೇಶಕ್ಕೆ ವಿಶ್ವದ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ನಾಯಕ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

 

ತೂಬಗೆರೆಯ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಆಯೋಜಿಸಲಾದ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

‘ಶೋಷಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಸಮಾನ ಅವಕಾಶಗಳನ್ನು ಕಲ್ಪಿಸುವ ದೃಢಸಂಕಲ್ಪ ಅಂಬೇಡ್ಕರ್ ಅವರದ್ದಾಗಿತ್ತು. ಸಾಮಾಜಿಕ ನ್ಯಾಯ, ಸಮಾನತೆ, ಶಿಕ್ಷಣ ವಿಸ್ತರಣೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರವಾಗಿದೆ’ ಎಂದು ಅವರು ತಿಳಿಸಿದರು.

 

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ ಹನ್ನೆರಡನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣ, ಅಲ್ಲಮಪ್ರಭು ಅವರ ಮುಂದಾಳತ್ವದಲ್ಲಿ ಸಮಾಜದ ಜಾತೀಯತೆ, ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಲು ಶ್ರಮಿಸಿದರಾದರು ಅದೂ ಪೂರ್ಣ ಪ್ರಮಾಣದಲ್ಲಿ ಹೋಗಲಾಡಿಸಲು ಸಾಧ್ಯವಾಗಿರಲಿಲ್ಲ. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಇದನ್ನೆಲ್ಲವನ್ನು ಹೋಗಲಾಡಿಸಲು ಪ್ರಯತ್ನ ಪಟ್ಟರು. ದೇಶದ‌ ಪ್ರತಿ ಪ್ರಜೆ ಗೌರವ ಮತ್ತು ಸ್ವಾಭಿಮಾನದಿಂದ ಬದುಕಬೇಕು. ಸಮ ಸಮಾಜ ನಿರ್ಮಾಣ‌ಮಾಡಬೇಕು ಎಂಬುದು ಅವರ ಮಹಾದಾಸೆಯಾಗಿತ್ತು ಎಂದರು.

 

ಕಾರ್ಯಕ್ರಮದ ಅಂಗವಾಗಿ ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.

 

ಈ ಸಂದರ್ಭದಲ್ಲಿ ಪ್ರಬುದ್ಧ ಕರ್ನಾಟಕ ಭೀಮಸೇನೆ ರಾಜ್ಯಾಧ್ಯಕ್ಷ ಮುನಿರಾಜು, ಗೌರವಾಧ್ಯಕ್ಷ ತೂಬಗೆರೆ ನಾಗರಾಜು, ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜು, ತಾಲ್ಲೂಕು ಸೊಸೈಟಿ ನಿರ್ದೇಶಕ ಪುರುಷೋತ್ತಮ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಮುಖಂಡರಾದ ಗೌರೀಶ್, ಅಶೋಕ್, ಮುರುಳಿ, ಯುವ ಮುಖಂಡ ಉದಯ ಆರಾಧ್ಯ ಹಾಗೂ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳಾದ ಗಿರಿಯಪ್ಪ, ಮುನಿರಾಜು, ಮೂರ್ತಿ, ಚಂದ್ರು, ಸುರೇಶ್ ಪ್ರಭು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.