ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧ

ಜಿಲ್ಲೆ
Spread the love

 

2026 ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ರಸಗೊಬ್ಬರ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು.

Ad

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ಕೃಷಿ ಪರಿಕರ ತಯಾರಕರ ಮತ್ತು ಮಾರಾಟಗಾರರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ರೈತರಿಗೆ ರಸಗೊಬ್ಬರ ಲಭ್ಯತೆಯ ಬಗ್ಗೆ ಅರಿವು ಮೂಡಿಸಲು ಮತ್ತು ರಸಗೊಬ್ಬರಗಳಿಗೆ ಪರ್ಯಾವಾಗಿ ಸಾವಯವ ಗೊಬ್ಬರಗಳನ್ನು ಹೆಚ್ಚು ಬಳಕೆ ಮಾಡುವಂತೆ, ರಸಗೊಬ್ಬರ ಮಾರಾಟ ಮಳಿಗೆಯ ಮುಂದೆ ದಾಸ್ತಾನು ಮತ್ತು ಗರಿಷ್ಠ ಮಾರಾಟ ದರ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಮತ್ತು ಯೂರಿಯಾ ರಸಗೊಬ್ಬರವನ್ನು POS Machineನಲ್ಲಿ ಕಡ್ಡಾಯವಾಗಿ ಮಾರಾಟ ಮಾಡಲು ಕ್ರಮ ವಹಿಸಬೇಕು.

 

ಜಿಲ್ಲೆಗೆ ಸರಬರಾಜಾಗಿರುವ ರಸಗೊಬ್ಬರಗಳನ್ನು ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡದಂತೆ, ಅಧಿಕೃತ ರಸಗೊಬ್ಬರ ಮಾರಾಟ ಪರವಾನಗೆ ಇಲ್ಲದೆ ರಸಗೊಬ್ಬರ ದಾಸ್ತಾನು ಮತ್ತು ಮಾರಾಟ ಮಾಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

 

ಯೂರಿಯಾವನ್ನು ಕೆ-ಕಿಸಾನ್ ತಂತ್ರಾಂಶದ ಮೂಲಕ ಮಾರಾಟಮಾಡಲು ಪ್ರತಿ ತಾಲ್ಲೂಕಿನಲ್ಲಿ ಚಿಲ್ಲರೆ ಮಾರಾಟಗಾರರಿಗೆ ತರಬೇತಿಗಳನ್ನು ಆಯೋಜಿಸಲು ಸಹಾಯಕ ಕೃಷಿ ನಿರ್ದೇಶಕರಿಗೆ ಡಿಸಿ ಸೂಚಿಸಿದರು.

 

ಪ್ರಸಕ್ತ ಮುಂಗಾರು ಹಂಗಾಮಿಗೆ 69291 ಹೆಕ್ಟೇರ್ ಆಹಾರಧಾನ್ಯ ಮತ್ತು 257 ಹೆಕ್ಟೇರ್ ಎಣ್ಣೆಕಾಳು ಸೇರಿ ಒಟ್ಟು 69548 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು. ಬಿತ್ತನೆಗೆ ಅನುಗುಣವಾಗಿ ಮಾಹೆವಾರು ಈ ಮುಂಗಾರು ಹಂಗಾಮಿಗೆ ಯೂರಿಯಾ-11418 ಮೆ.ಟನ್, ಡಿಎಪಿ-7567 ಮೆ.ಟನ್, ಎಂಒಪಿ-1354 ಮೆ.ಟನ್, ಎಸ್ಎಸ್ ಪಿ -1086 ಮೆ.ಟನ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳು 14744 ಮೆ.ಟನ್ ಸೇರಿದಂತೆ ಒಟ್ಟು-36169ಮೆ.ಟನ್ ಬೇಡಿಕೆಯಿದೆ.

 

ಪ್ರಸ್ತುತ ಮಾಹೆಯಲ್ಲಿ 1732ಮೆ.ಟನ್‌ ಡಿಎಪಿ, 1327ಮೆ.ಟನ್ ಯೂರಿಯಾ ಮತ್ತು 2303ಮೆ.ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ಬೇಡಿಕೆಯಿದೆ. ಈ ಬೇಡಿಕೆ ಪೂರೈಸಲು ಪ್ರಸ್ತುತ 17482 ಮೆ.ಟನ್ ವಿವಿಧ ರಸಗೊಬ್ಬರಗಳ ದಾಸ್ತಾನು ಇರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.

 

ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಯ ವಿವಿಧ ಅಧಿಕಾರಿಗಳು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ತಯಾರಿಕಾ ಕಂಪನಿಗಳ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಚಿಲ್ಲರೆ ಮತ್ತು ಸಗಟು ರಸಗೊಬ್ಬರ ಮಾರಾಟಗಾರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *