ರೈತರ ಗೋಳು ಕೇಳುವವರಾರು …? : ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

Spread the love

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ , ಬೀರಸಂದ್ರ, ಬೈರದೆನಹಳ್ಳಿ, ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮಗಳಲ್ಲಿ 118-37ಗುಂಟೆ ವಿಸ್ತೀರ್ಣದ ಜಮೀನನ್ನು ಕೆ. ಐ. ಎ. ಡಿ. ಬಿ. ಕಾಯ್ದೆ ಅನ್ವಯ ಪರಿಹಾರ ನಿಗದಿ ಪಡಿಸಲು ದಿನಾಂಕ ನೆವೆಂಬರ್ 29 ರಂದು ನೆಡೆದ ಸಭೆಯ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿ ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ಕರೆಯಲಾಗಿದ್ದು

ಸಂಪರ್ಕ ರಸ್ತೆಯ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸರಿಯಾದ ಬೆಲೆ ನೀಡದೇ ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಸರ್ಕಾರಿ ಅಧಿಕಾರಿಗಳ ವಿರುದ್ಧ ಬೀರಸಂದ್ರ, ಬೈರದೇನಹಳ್ಳಿ, ಹಾಗೂ ನಾಗದೇನಾಹಳ್ಳಿ ರೈತರು ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದರು

ಪತ್ರಿಕಾ ಗೋಷ್ಠಿಯಲ್ಲಿ ರೈತ ಮುಖಂಡರಾದ ಆನಂದ್ ಮೂರ್ತಿ ಮಾತನಾಡಿ ಸರ್ಕಾರಿ ಅಧಿಕಾರಿಗಳು ನಮ್ಮ ಭೂಮಿಗೆ ಸರಿಯಾದ ಬೆಲೆ ಘೋಷಣೆ ಮಾಡದೆ ಫಲವತ್ತಾದ ನಮ್ಮ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದಾರೆ ,ಸಂಪರ್ಕ ರಸ್ತೆಯ ಹೆಸರಿನಲ್ಲಿ ಮೋಸ ನಡೆಯುತ್ತಿದೆ. ನಮ್ಮ ಭೂಮಿಗೆ ಸರಿಯಾದ ಬೆಲೆ ನೀಡಲು ಮನಸಿಲ್ಲದ ಅಧಿಕಾರಿಗಳು ಹಲವಾರು ಕಾರಣಗಳನ್ನು ಹೇಳಿ ಪಲಾಯನ ಮಾಡುತ್ತಿದ್ದಾರೆ ರೈತರ ಗೋಳನ್ನು ಕೇಳುವವರಿಲ್ಲ ರೈತರ ಪರ ಇರಬೇಕಾದ ಅಧಿಕಾರಿಗಳು ರೈತರ ವಿರುದ್ಧ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಶೋಚನೀಯ ಸಂಗತಿ ನೆನ್ನೆ ನೆಡೆದ ಸಭೆಗೆ ನಮ್ಮ ಬೆಂಬಲವಿಲ್ಲ ಎಂಬುದನ್ನು ಸ್ಪಷ್ಟವಾಗಿ ಈ ಮೂಲಕ ತಿಳಿಸುತ್ತೇವೆ .ಸರಿಯಾದ ಬೆಲೆ ನೀಡದೇ ನಮ್ಮ ಭೂಮಿಯನ್ನು ಮಾರಾಟ ಮಾಡುವುದಿಲ್ಲ ಎಂದರು . ಸಾಕಷ್ಟು ಬಾರಿ ಬೆಂಗಳೂರು ಕೆ ಐ ಎ ಡಿ ಬಿ ಕಛೇರಿಗೆ ದಾಖಲೆಗಳೊಂದಿಗೆ ಪರಿಹಾರದ ಹಣವನ್ನು ಪಡೆಯಲು ಮನವಿ ಮಾಡಿಕೊಂಡಿದ್ದರೂ ಸಹ ಅಧಿಕಾರಿಗಳ ವಿಳಂಬಧೋರಣೆಯಿಂದ ರೈತರಿಗಾಗುತ್ತಿರುವ ನಷ್ಟದ ಬಗ್ಗೆ ಯೋಚಿಸದ ಅಧಿಕಾರಿಗಳು ರೈತರಿಗೆ ಇಲ್ಲ ಸಲ್ಲದ ದಾಖಲೆಗಳನ್ನು ತೆಗೆದುಕೊಂಡು ಬರುವಂತೆ ಕೇಳುತ್ತಿದ್ದಾರೆ ಭೂ ಸ್ವಾಧೀನಕ್ಕೆ ಒಳಪಟ್ಟ ಜಾಮೀನುಗಳ ಮಾರುಕಟ್ಟೆ ಹೊರತುಪಡಿಸಿ ವಾಣಿಜ್ಯೇತರ ಉದ್ದೇಶಕ್ಕಾಗಿ ಒಂದು ಗುಂಟೆ ಜಮೀನು 30 ರಿಂದ 40 ಲಕ್ಷದ ವರೆಗೂ ಸಹ ಮಾರಾಟವಾಗುತ್ತಿದ್ದು ಸದರಿ ಗ್ರಾಮಗಳ ಜಮೀನಿಗೆ ಸರಿಯಾದ ಬೆಲೆ ನೀಡಬೇಕೆಂದು ಮನವಿ ಮಾಡಿದರು .

ಈ ಸಂದರ್ಭದಲ್ಲಿಗ್ರಾಮಸ್ಥರಾದ ನಾಗರಾಜು, ಮಂಜುನಾಥ್ ,ನರಸಪ್ಪ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *