ನಟಿ ಲೀಲಾವತಿ ಭಾವಚಿತ್ರಕ್ಕೆ ಪುಷ್ಪ ನಮನ : ಭಾವುಕರಾದ ಅಭಿಮಾನಿ ಗಣ

Spread the love

ದೊಡ್ಡಬಳ್ಳಾಪುರ : ಹಿರಿಯ ನಟಿ ಲೀಲಾವತಿ ಅವರ ಅಗಲಿಕೆ ಪುಷ್ಪನಮನ ಸಲ್ಲಿಸಿ ಕಂಬನಿ ಮಿಡಿದ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ ಬಣ)

 

ದೊಡ್ಡಬಳ್ಳಾಪುರ ತಾಲೂಕು ಕರವೇ (ಪ್ರವೀಣ್ ಕುಮಾರ್ ಶೆಟ್ಟಿ ಬಣದ )ವತಿಯಿಂದ ನಗರದ ಡಿ ಕ್ರಾಸ್ ಬಳಿಯಿರುವ ಡಾ.ರಾಜಕುಮಾರ್ ವೃತ್ತದಲ್ಲಿ ಶುಕ್ರವಾರ ವಿಧಿವಶರಾದ ಡಾ.ಲೀಲಾವತಿ ರವರಿಗೆ ಪುಷ್ಪನಮನ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

 

ಲೀಲಾವತಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ ಬಣದ) ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ ಹಿರಿಯ ನಟಿ ಲೀಲಾವತಿ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡಿದೆ .ತಮ್ಮ ಅದ್ಭುತ ನಟನೆಯಿಂದ ಎಲ್ಲರ ಮನಸ್ಸಲ್ಲೂ ಮನೆಮಾಡಿಕೊಡಿರುವ ಹಿರಿಯ ನಟಿ ಲೀಲಾವತಿ ಇನ್ನಿಲ್ಲ ಎಂಬುದು ನಂಬಲು ಸಾಧ್ಯವಿಲ್ಲ ಕಲಾವಿದರಿಗೆ ಎಂದಿಗೂ ಸಾವಿಲ್ಲ ಕಲಾಮಾತೆಯ ಮಕ್ಕಳು ಸದಾ ನಮ್ಮೊಂದಿಗೆ ತಮ್ಮ ಚಿತ್ರಗಳ ಮೂಲಕ ಇರುತ್ತಾರೆ ಎಂದು ತಿಳಿಸಿದರು

 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಕುಮಾರ್ ಶೆಟ್ಟಿ ಬಣ)ಯ ಪದಾಧಿಕಾರಿಗಳು ಉಸ್ಥಿತರಿದ್ದರು

Leave a Reply

Your email address will not be published. Required fields are marked *