ಸೈನಿಕ ಶಾಲೆಗಳಲ್ಲಿ ಕನ್ನಡದವರಿಗೆ ಶೇಕಡಾ 65ರಷ್ಟು ಸೀಟುಗಳು ಹಂಚಿಕೆಯಾಗಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬೆಳಗಾವಿ : ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

 

ಕಾರ್ಯಕ್ರಮಕ್ಕೆ ತೆರಳುವ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ.

 

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ.

 

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ. ಎಂದು ತಿಳಿಸಿದರು.

Leave a Reply

Your email address will not be published. Required fields are marked *