ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ ಕಾಡಾನೆಗಳ ಹಾವಳಿ ತಪ್ಪಿಸಲು ವಿಶೇಷ ಯೋಚನೆ ರೂಪಿಸಿರುವ ಸರ್ಕಾರ ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದೆ ಎಂದು ಮಡಿಕೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದರು
ಈ ಕುರಿತಂತೆ ಮಾತನಾಡಿದ ಅವರು ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ.
ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ – ಮಾನವ ಸಂಘರ್ಷ ನಿಲ್ಲಲಿದೆ ಎಂದು ತಿಳಿಸಿದರು.
