ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 250 ಬೆಡ್ ಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದು ಆಸ್ಪತ್ರೆಯ ನಿರ್ಮಾಣ ಕಾರ್ಯ ತಡವಾಗುತ್ತಿರುವ ಹಿನ್ನಲೆಯಲ್ಲಿ ಜ.29 ರಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ವತಿಯಿಂದ ವಿಪಕ್ಷ ನಾಯಕರಾದ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನೆಡೆಸುತ್ತಿದ್ದೇವೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 5000ಕ್ಕೂ ಅಧಿಕ ಕಾರ್ಯಕರ್ತರು, ಸಾರ್ವಜನಿಕರು ಸೇರುವ ಸಾಧ್ಯತೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದರು
ಇಂದು ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಕೊಟ್ಟ ಗ್ಯಾರೆಂಟಿಗಳನ್ನು ಈಡೇರಿಸುವಲ್ಲಿ ಸೋತಿದೆ. ಗ್ಯಾರೆಂಟಿ ಎಂಬ ಅಸ್ತ್ರ ಬಳಸಿ ಚುನಾವಣೆ ಗೆದ್ದ ಕಾಂಗ್ರೆಸ್ ಸರ್ಕಾರ ಜನತೆಯ ಬಗ್ಗೆ ಕಾಳಜಿ ಮರೆತಿದೆ. ನಮ್ಮ ತಾಲ್ಲೂಕಿನಲ್ಲಿ 100ಹಾಸಿಗೆಗಳ ಆಸ್ಪತ್ರೆ ಇದ್ದು ತಿಂಗಳಿಗೆ 10000ಕ್ಕೂ ಅಧಿಕ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ 100 ಕ್ಕೂ ಅಧಿಕ ಯಶಸ್ವೀ ಶಸ್ತ್ರ ಚಿಕಿತ್ಸೆಗಳು ನೆಡೆಯುತ್ತಿದ್ದು ನಮ್ಮ ತಾಲ್ಲೂಕಿನ ಜನತೆ ಅಷ್ಟೇ ಅಲ್ಲದೆ ಹೊರ ತಾಲ್ಲೂಕಿನ ಸಾರ್ವಜನಿಕರು ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 250ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ದೊರೆತ್ತಿದ್ದು. ಆಸ್ಪತ್ರೆ ನಿರ್ಮಾಣ ಕುರಿತು ಯಾವುದೇ ಕ್ರಮ ನೆಡೆದಿಲ್ಲ ಈ ಹಿನ್ನಲೆಯಲ್ಲಿ ನಾಳೆ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಹಾಗೂ ವಿಪಕ್ಷ ನಾಯಕರು ಆದ ಆರ್. ಅಶೋಕ್ ರವರ ನೇತೃತ್ವದಲ್ಲಿ ಪ್ರತಿಭಟನೆ ನೆಡೆಸಲು ನಿರ್ಧರಿಸಿದ್ದೇವೆ. ಪ್ರತಿಭಟನೆಯು ನಗರ ಭಾಗದ ನೆಲದಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ಹೊರಟು ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ತಲುಪಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು
ಜಿಲ್ಲಾ ವಕ್ತರರಾದ ಪುಷ್ಪ ಶಿವಶಂಕರ್ ಮಾತನಾಡಿ ತಾಲ್ಲೂಕಿನಲ್ಲಿ ಹಲವು ಸಮಸ್ಯೆಗಳಿದ್ದು ಸರಿಪಡಿಸುವಲ್ಲಿ ನಮ್ಮೆಲ್ಲರ ಭಾಗವಹಿಸುವಿಕೆಯ ಅವಶ್ಯಕತೆ ಇದೆ ಜ.30 ರಂದು ಬೆಳ್ಳಿಗೆ 10:00ಘಂಟೆಗೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುತ್ತಿದ್ದಾರೆ. ತಾಲ್ಲೂಕಿನಲ್ಲಿ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಹೋರಾಟ ಮಾಡಲು ಮುಂದಾಗಿದ್ದೇವೆ. ತಾಲ್ಲೂಕಿನ ಜನತೆಗಾಗಿ ಈ ಹೋರಾಟ ನಮ್ಮ ಆರೋಗ್ಯಕ್ಕಾಗಿ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕಾಗಿ ಒತ್ತಾಯಿಸುತ್ತಿದ್ದು ಇದು ಪ್ರಾರಂಭವಷ್ಟೇ ಈ ಹೋರಾಟವು ಮುಂದೆ ತಾಲ್ಲೂಕಿನ ಅಭಿವೃದ್ಧಿಗೆ ಅನುವು ಮಾಡಿಕೊಡಲಿದೆ ಎಂದು ತಿಳಿಸಿದರು.
ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಉಮಾ ಮಹೇಶ್ವರಿ , ನಗರ ಸಭಾ ಅಧ್ಯಕ್ಷರಾದ ಸುಧಾರಾಣಿ ಲಕ್ಷ್ಮಿ ನಾರಾಯಣ , ನಗರ ಸಭೆ ಸದಸ್ಯರಾದ ನಾಗರತ್ನಮ್ಮ , ಪ್ರಧಾನ ಕಾರ್ಯದರ್ಶಿ ಗೋಪಿ, ಮುಖಂಡರಾದ ಜಗನ್ನಾಥ್, ಲಕ್ಷ್ಮಿ ನಾರಾಯಣ್, ಮತ್ತಿತರರು ಉಪಸ್ಥಿತರಿದ್ದರು
