ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ಗಿರಿಜನ ಉಪಯೋಜನೆ ಅಡಿಯಲ್ಲಿ ಗಿರಿಜನೋತ್ಸವ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ದಂಡುದಾಸ ಕೊಡಿಗೇಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ಸಚಿವರಾದ ಕೆಎಚ್ ಮುನಿಯಪ್ಪ ರವರ ವಹಿಸಿದ್ದು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿದ್ದ ಕಾರ್ಯಕ್ರಮವನ್ನು ಗ್ರಾಮಸ್ಥರು ಹಬ್ಬದಂತೆ ಆಚರಿಸಿದರು

ಗಿರಿಜೋತ್ಸವ ಪಾರಂಪರೆ ಪಾರಂಪರಿಕವಾಗಿ ನಡೆದು ಬಂದಿರುವ ಹಬ್ಬವಾಗಿದೆ ಜನಪದ ಕಲೆ, ಉರುಸು ಕಾರ್ಯಕ್ರಮಗಳಂತೆ ಗಿರಿಜೋತ್ಸವ ಕೂಡ ನಮ್ಮ ಜೀವನದದಲ್ಲಿ ಅಳವಡಿಸಿಕೊಂಡಿದ್ದೇವೆ. ಇದು ಶತಮಾನಗಳಿಂದ ಬಂದಿರುವ ಪರಂಪರೆಯಾಗಿದ್ದು ಇಂತಹ ಕಾರ್ಯಕ್ರಮಗಳಿಂದ ನಮ್ಮ ಸ್ಪೂರ್ತಿ ದುಪ್ಪಟ್ಟಾಗುತ್ತದೆ. ನಮ್ಮ ಹಲವು ಜನಾಂಗಗಳು ನಡೆದು ಬಂದ ದಾರಿಯನ್ನು ಈ ಕಾರ್ಯಕ್ರಮಗಳು ಪ್ರತಿನಿಧಿಸುತ್ತವೆ. ಗ್ರಾಮಸ್ಥರು ಗಿರಿಜನೋತ್ಸವ ಕಾರ್ಯಕ್ರಮವನ್ನು ಹಬ್ಬದ ರೀತಿ ಆಚರಣೆ ಮಾಡುತ್ತಿದ್ದಾರೆ ಎಂದು ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಮುನಿಕೃಷ್ಣ ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಗಿರಿಜನರು ವಾಸಿಸುವ ನಮ್ಮ ಗ್ರಾಮದಲ್ಲಿ ಈ ಕಾರ್ಯಕ್ರಮವನ್ನು ರೂಪಿಸಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಕಾರ್ಯಕ್ರಮವನ್ನು ಸಚಿವರಾದ ಕೆ ಎಚ್ ಮುನಿಯಪ್ಪ ರವರು ಉದ್ಘಾಟಿಸಿರುವುದು ಮತ್ತಷ್ಟು ಸಂತಸ ತಂದಿದೆ ಮಕ್ಕಳು ಸುಶಿಕ್ಷಿತರಾಗಲು ಇಂತಹ ಕಾರ್ಯಕ್ರಮಗಳು ಅತ್ಯಂತ ಸಹಕಾರಿಯಾಗಿದೆ ಹಾಗೂ ಜನಾಂಗಗಳು ಬೆಳೆದು ಬಂದ ಹಾದಿಯನ್ನು ಯುವ ಪೀಳಿಗೆ ತಿಳಿಸುವ ಮಹತ್ತರ ಕಾರ್ಯಕ್ರಮಗಳು ಇವಾಗಿದ್ದು ಗ್ರಾಮಸ್ಥರಲ್ಲಿ ವಿಶೇಷ ಸಂತಸ ಉಂಟುಮಾಡಿದೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುನುಕೃಷ್ಣಪ್ಪ,ಉಪಾಧ್ಯಕ್ಷರಾದ ಜಗಣ್ಣ, ಸ್ಥಳೀಯ ಮುಖಂಡರಾದ ಮುರಳಿ, ಶ್ರೀಧರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುಳಮ್ಮ, ಪ್ರೇಮಕುಮಾರಿ, ಮುನಿರಾಜು, ಚಿಕ್ಕಣ್ಣ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೌಮ್ಯ , ನಾರಾಯಣ ಸ್ವಾಮಿ, ಕೃಷ್ಣಪ್ಪ, ಕವಿತಮ್ಮ, ವಸಂತ್, ಮುನಿಶ್ಯಾಮ್, ವೆಂಕಟೇಶ್, ನರಸಿಂಹಣ್ಣ, ತಿಮ್ಮರಾಯಪ್ಪ, ದೇವರಾಜಪ್ಪ, ಕರವೇ ಮಂಜಣ್ಣ ಮೆಳೇಕೋಟೆ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
