ರೈತರಿಂದ ಕೆಐಎಡಿಬಿ ದರ ನಿಗದಿ ಬಹಿಷ್ಕಾರ : ಫೆಬ್ರವರಿ 5ಕ್ಕೆ ಡೆಡ್ ಲೈನ್

Spread the love

ಕೋನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಅದಿನಾರಾಯಣ ಹೊಸಹಳ್ಳಿ ರೈತರಿಂದ ಅನಿರ್ದಿಷ್ಟವದಿ ಧಾರಣಿ ಮುಂದುವರೆದಿದ್ದು ಕೆಐಎಡಿಬಿ ವಿರುದ್ಧ ರೈತರು ಕಿಡಿಕಾರಿದ್ದಾರೆ

ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಕಾಮನ ಬಂಡೆ( ಕಡ್ಡಿಪುಡಿ ಕಾರ್ಖಾನೆ ಸಮೀಪ) ರೈತರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಯಾವುದೇ ಪ್ರಯೋಜನವಾಗಿಲ್ಲ. ಕೆಐಎಡಿಬಿ ಅಧಿಕಾರಿಗಳು ಭೂಸ್ವಾಧಿನಕ್ಕೆ ಮುಂದಾಗಿದ್ದಾರೆ. ಯಾವುದೇ ವೈಜ್ಞಾನಿಕ ಬೆಲೆ ನಿಗದಿಪಡಿಸದೆ ಏಕಾಏಕಿ ಭೂ ಸ್ವಾಧೀನಕ್ಕೆ ಮುಂದಾಗಿರುವುದು ಖಂಡನೀಯ ಎಂದು ರೈತರು ತಮ್ಮ ಆಕ್ರೋಶ ಹೊರ ಹಾಕಿದರು. ನಮ್ಮ ಭೂಮಿಗಳನ್ನು ಕೆಐಎಡಿಬಿ ಅಧಿಕಾರಿಗಳು ಅತಿಕ್ರಮ ಪ್ರವೇಶ ಮಾಡುವ ಮೂಲಕ ರೈತರಿಗೆ ಪಾಠ ಕಳಿಸುತ್ತೇವೆ ಎಂಬಂತೆ ವರ್ತಿಸುತ್ತಿದ್ದಾರೆ ಆದರೆ ಅದು ಎಂದಿಗೂ ಸಾಧ್ಯವಿಲ್ಲ ನಮ್ಮ ಹಕ್ಕನ್ನು ನಾವು ಕೇಳುತ್ತೇವೆ ಹೊರತು ಮತ್ತೇನಿಲ್ಲ ಎಂದಿದ್ದಾರೆ.

 

ರೈತರನ್ನು ಸಂಪರ್ಕಿಸದೆ ಭೂ ಸ್ವಾಧೀನಕ್ಕೆ ಮುಂದಾಗಿರುವ ಕೆಐಎಡಿಬಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರಿಯಾದ ಬೆಲೆ ನಿಗದಿ ಪಡಿಸದೆ ಅನ್ಯ ವ್ಯಕ್ತಿಗೆ ಭೂ ಹಸ್ತತರಮಾಡಿ ಎಂದು ಆದೇಶ ಹೊರಡಿಸಿರುವ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಲು ರೈತರು ನಿರ್ಧರಿಸಿದ್ದಾರೆ. ಸರ್ಕಾರದ ಮಾನದಂಡಗಳನ್ನು ಗಾಳಿಗೆ ತೂರಿರುವ ಕೆಐಎಡಿಬಿ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅನ್ಯ ಗ್ರಾಮಗಳಿಗೆ ಅನುಸರಿಸಿರುವ ಮನದಂಡವನ್ನೇ ನಮಗೂ ಅನುಸರಿಸಿ ಎಂದು ಒತ್ತಾಯಿಸಿದರು.

 

 

ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ ಕಳೆದ 2 – 3 ದಿನಗಳಿಂದ ಪ್ರಯತ್ನಿಸಿ ಕೆಐಎಡಿಬಿ ಅಧಿಕಾರಿಗಳನ್ನು ಭೇಟಿ ಮಾಡಿದ್ದೇವೆ. ಅಧಿಕಾರಿಗಳು ಏರ್ಪಡಿಸಿದ ಸಭೆಯಲ್ಲಿ ಅವರೊಂದಿಗೆ ಚರ್ಚಿಸಿ ಸರಿಯಾದ ವೈಜ್ಞಾನಿಕ ಬೆಲೆ ನೀಡದೇ ಇದ್ದಲ್ಲಿ ರೈತರು ತಮ್ಮ ಭೂಮಿಗಳನ್ನು ಮಾರಾಟ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇವೆ. ಈ ಕುರಿತು ಅಧಿಕಾರಿಗಳು ಸ್ಥಳೀಯ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪನವರ ಗಮನಕ್ಕೆ ತಂದಿದ್ದು. ರೈತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಯೋಜನೆ ರೂಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ ಹಾಗೂ ಫೆಬ್ರವರಿ 5 ರವರೆಗೂ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದು ಸಚಿವರ ಮನವಿಯಂತೆ ರೈತರು ಶಾಂತ ರೀತಿಯಲ್ಲಿ ಫೆಬ್ರವರಿ 5 ರವರೆಗೂ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ ಎಂದು ತಿಳಿಸಿದರು

ಸ್ಥಳೀಯ ರೈತರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಭೇಟಿ ಕುರಿತು ಪ್ರಶ್ನಿಸಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ರೈತರೊಂದಿಗೆ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸ್ಥಳೀಯ ಭೂ ಸ್ವಾಧೀನ ಸಮಸ್ಯೆಗಳ ಕುರಿತು ಸವಿಸ್ತಾರವಾಗಿ ಮಾತನಾಡಿದ್ದೇನೆ.

ರೈತರು ಒಗ್ಗಟ್ಟಾಗಿ ಮಾತನಾಡುವುದು ಅವಶ್ಯಕವಾಗಿದೆ ಹಾಗೂ ರೈತರ ಹೋರಾಟಕ್ಕೆ ತಾವು ಸದಾ ಬೆಂಬಲ ನೀಡುವುದಾಗಿ ಫೆಬ್ರವರಿ 5ರಂದು ಸಮಸ್ಯೆ ಬಗೆಹರಿಯದ ಪಕ್ಷದಲ್ಲಿ ತಾವೇ ಖುದ್ದು ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು

 

ಕೆಐಎಡಿಬಿ ನೆಡೆ ಏನೆಂಬುದು ಕಾದು ಮಾಡಬೇಕಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ರೈತರು  ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *