ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರಾಗಿ ಸಾಧಿಕ್ ಪಾಷ ಅಧಿಕಾರ ಸ್ವೀಕರ : ನೂತನ ಪೊಲೀಸ್ ಅಧಿಕಾರಿಗೆ ಅಭಿನಂದಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ

Spread the love

ದೊಡ್ಡಬಳ್ಳಾಪುರ : ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಯ್ಯದ್ ಪಾಷ ರವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನೂತನ ವೃತ್ತ ನೀರಿಕ್ಷಕರಿಗೆ ವಿಶೇಷವಾಗಿ ಶಾಲು ಹೊದಿಸಿ ಹಾರ ಹಾಕಿ ಸಿಹಿ ತಿನ್ನಿಸುವ ಮೂಲಕ ಸ್ವಾಗತಿಸಲಾಯಿತು. ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ವೃತ್ತ ನೀರಿಕ್ಷಕರೊಂದಿಗೆ ಫೋಟೋ ಕ್ಲಿಕಿಸಿಕೊಂಡು ಸಂಭ್ರಮಿಸಿದರು

ಸಂಘಟನೆಯ ತಾಲ್ಲೂಕು ಅಧ್ಯಕ್ಷ ನೇರಳೆಘಟ್ಟ ರಾಮು ಮಾತನಾಡಿ ನಮ್ಮ ತಾಲ್ಲೂಕಿಗೆ ನೂತನವಾಗಿ ವೃತ್ತ ನೀರಿಕ್ಷಕರಾಗಿ ಆಗಮಿಸಿರುವ ಸಾಧಿಕ್ ಪಾಷ ರವರನ್ನು ನಮ್ಮ ತಾಲ್ಲೂಕು ಘಟಕದ ಪದಾಧಿಕಾರಿಗಳ ವತಿಯಿಂದ ಸಾಂಕೇತಿಕವಾಗಿ ಪ್ರೀತಿಯಿಂದ ಸನ್ಮಾನಿಸಿ ಗೌರವಿಸಲಾಗಿದೆ. ಇದೇ ಸಮಯದಲ್ಲಿ ತಾಲ್ಲೂಕಿನ ದಲಿತರ ಧ್ವನಿಯಾಗಿ ಶ್ರಮಿಸುವಂತೆ ಮನವಿ ಮಾಡಿದ್ದೇವೆ. ನಮ್ಮ ಭಾವನೆಗಳಿಗೆ ಸಕಾರತ್ಮಕವಾಗಿ ಸ್ಪಂದಿಸಿರುವ ಅಧಿಕಾರಿಗಳು , ತಾಲ್ಲೂಕಿನಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಸಕ್ಕರೆ ಗೊಲ್ಲಹಳ್ಳಿ ಹನುಮಂತಯ್ಯ, ದೊಡ್ಡಯ್ಯ ಲಿಂಗಾಪುರ, ನರೇಂದ್ರ ಮಾಡೇಶ್ವರ, ಹನುಮಯ್ಯ ಸಕ್ಕರೆ ಗೊಲ್ಲಹಳ್ಳಿ, ರಮೇಶ್ ಹಾಲೇನಳ್ಳಿ, ನರಸಿಂಹಮೂರ್ತಿ ದೊಡ್ಡ ಕುಕ್ಕನಹಳ್ಳಿ, ಆನಂದ್ ಸಕ್ಕರೆ ಗೊಲ್ಲಹಳ್ಳಿ ಹಾಗೂ ಸಂಘಟನೆಯ ತಾಲ್ಲೂಕು ಹೋಬಳಿ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *