
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಾಮಾಕ್ಷಿಪಾಳ್ಯದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಉದ್ಯಾನದಲ್ಲಿ ಮಾಜಿ ಉಪಮೇಯರ್ ಹೇಮಲತಾ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಆಯೋಜನೆ ಮಾಡಿರುವ ಕ್ಯಾನ್ಸರ್ ತಪಾಸಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಅವಶ್ಯಕತೆ ಇದೆ. 21ನೇ ಶತಮಾನದಲ್ಲಿ ನಾವು ಜೀವನ ಸಾಗಿಸುತ್ತಿದ್ದರು ಸಹ ಸಮಾಜದಲ್ಲಿ ಸಾಕಷ್ಟು ಜನರಿಗೆ ಕ್ಯಾನ್ಸರ್ ಕಾಯಿಲೆ ಕುರಿತು ಮಾಹಿತಿಯ ಕೊರತೆ ಇದೆ. ಸಾರ್ವಜನಿಕ ಸದುಪಯೋಗಕ್ಕಾಗಿ ಇಂದು ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು. ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಸಾಂಕೇತಿಕವಾಗಿ ಚಲನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರಾದ ಮುಖಂಡರಾದ ನಾಗರತ್ನ ಲೋಕೇಶ್, ಸಿದ್ದಗಂಗಮ್ಮ, ನಾಗರತ್ನ ಉಪಸ್ಥಿತರಿದ್ದರು.