ರಾಜ್ಯ ಬಿಜೆಪಿಯಿಂದ ಪ್ರತಿಭಟನೆ : ಮುಖ್ಯಮಂತ್ರಿ ಕಚೇರಿಗೆ ಬೀಗ ಹಾಕುವಂತೆ ಅಗ್ರಹ

Spread the love

ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಪ್ರತಿಭಟನೆ ನೆಡೆಸಿತು.

 

ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ವತಿಯಿಂದ ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಜೊತೆಗೂಡಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಬಿ ವೈ ವಿಜಯೇಂದ್ರ ಪ್ರತಿಭಟನೆ ನಡೆಸಿದರು.

 

ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಾಗಿದ್ದು, ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ತಾರತಮ್ಯವೆಸಗಿರುವ ಬೇಜಾವಾಬ್ದಾರಿ ಸರ್ಕಾರದ ನಿಲುವುಗಳನ್ನು ಖಂಡಿಸಲಾಯಿತು. ಬೊಕ್ಕಸ ಬರಿದು ಮಾಡಿಕೊಂಡು ವಿಧಾನ ಸೌಧ ಖಾಲಿ ಮಾಡಿಕೊಂಡು ದೆಹಲಿ ಚಲೋ ನಾಟಕ ಮಾಡುತ್ತಿರುವ ಸರ್ಕಾರ ಮುಖ್ಯಮಂತ್ರಿಗಳ ಕಛೇರಿಗೆ ಬೀಗ ಜಡಿಯುವಂತೆ ಆಗ್ರಹಿಸಲಾಯಿಸಿದರು.

 

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್.ಅಶೋಕ ಸೇರಿದಂತೆ ಬಿಜೆಪಿ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *